ಕಾಂಗ್ರೆಸ್  ಪಾಲಿಗೆ ತಲೆನೋವಾಯ್ತಾ ಕಮಿಷನ್ ಕಂಟಕ..?  ಶುರುವಾಯ್ತು ರಣ ರಾಜಕಾರಣ !

ಕಾಂಗ್ರೆಸ್ ಪಾಲಿಗೆ ತಲೆನೋವಾಯ್ತಾ ಕಮಿಷನ್ ಕಂಟಕ..? ಶುರುವಾಯ್ತು ರಣ ರಾಜಕಾರಣ !

Published : Aug 12, 2023, 02:22 PM IST

ಸಿದ್ದರಾಮಯ್ಯ ಸರ್ಕಾರದ ಮುಂದೆ ಗುತ್ತಿಗೆದಾರರ ಭಾಗ್ಯದ ಬೇಡಿಕೆ!
ಕಮಿಷನ್ ವಿಚಾರದಲ್ಲಿ ಶುರುವಾಗಿದೆ ರಣರಣ ರಾಜಕಾರಣ..!
ಮಾತಲ್ಲೇ ಹೊಸ ಸರ್ಕಾರಕ್ಕೆ ಕ್ಲೀನ್ ಚಿಟ್ ಕೊಟ್ಟರಾ ಕೆಂಪಣ್ಣ..?

ಈ ಹಿಂದೆ ಬಿಜೆಪಿ(BJP) ಸರ್ಕಾರ ಇದ್ದಾಗ, 40 ಪರ್ಸಂಟ್ ಕಮಿಷನ್(Commission) ಅನ್ನೋ ಬಿರುಗಾಳಿ ಬೀಸಿತ್ತು. ಅದರ ಅಬ್ಬರಕ್ಕೆ ಸರ್ಕಾರ ಅಲುಗಾಡಿದ್ದಂತೂ ನಿಜ. ಅಂದು ಬಿಜೆಪಿ ಸರ್ಕಾರದ ವಿರುದ್ಧ, ಇಂದು ಆಡಳಿತ ನಡೆಸ್ತಾ ಇರೋ ಕಾಂಗ್ರೆಸ್ ಹೋರಾಟ ಮಾಡಿತ್ತು. ಆದ್ರೆ ಈಗ ನೋಡಿದ್ರೆ, ಆ ಕಮಿಷನ್ ಕಂಟಕ ಕಾಂಗ್ರೆಸ್ (Congress) ಕೊರಳಿಗೂ ಸುತ್ತಿಕೊಳ್ತಿದೆ ಅನ್ನೋ ಮಾತು ಕೇಳಿಬರ್ತಾ ಇದೆ. ಹೊಸದೊಂದು ಕೋಲಾಹಲ ಶುರುವಾಗಿದೆ. ಗುತ್ತಿಗೆದಾರರು ಆಡೋ ಒಂದೊಂದು ಮಾತೂ ಕೂಡ ರಾಜಕೀಯ ಚದುರಂಗದ ದಿಕ್ಕು ದೆಸೆ ಬದಲಾಯಿಸ್ತಾ ಇದೆ. ಅದರಲ್ಲೂ ಕಮಿಷನ್ ಆರೋಪದ ಕಹಾನಿಯಲ್ಲಿ, ಟ್ವಿಸ್ಟ್ ಮೇಲೆ ಟ್ವಿಸ್ಟ್ ಎದುರಾಗ್ತಾ ಇದೆ. ಕಮಿಷನ್ ಆರೋಪ ಅನ್ನೋ ತೂಫಾನ್  ಕಳೆದ ಸಲ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಬುಡವನ್ನೇ ಅಲುಗಾಡಿಸಿತ್ತು. ಅದು ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಮುನ್ನುಡಿ ಬರೆದಿದ್ದ ಸುನಾಮಿ ಅಂದ್ರೂ ತಪ್ಪಾಗಲಿಕ್ಕಿಲ್ಲ. ಅದೇ ತೂಫಾನ್, ಅದೇ ಸುನಾಮಿ ಈಗ ಕಾಂಗ್ರೆಸ್ ಸರ್ಕಾರದ ಮೇಲೆ ಅಪ್ಪಳಿಸ್ತಿರೊ ಹಾಗೆ ಕಾಣ್ತಾ ಇದೆ.. ಸಿದ್ದರಾಮಯ್ಯನೋರ(Siddaramaiah) ಸರ್ಕಾರಕ್ಕೆ ಕಮಿಷನ್ ಕಂಟಕ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  ರೀಲ್ಸ್‌ನಿಂದ ಸಂಸಾರದಲ್ಲಿ ಬಿರುಕು: ಕೊಲೆಗಾರನ ಮನಸ್ಸು ಬದಲಿಸಿದ್ಲು ನಿಮಿಷಾಂಬ ತಾಯಿ !

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more