ಸಿಎಂ ಪಟ್ಟಕ್ಕಾಗಿ ಸದ್ದಿಲ್ಲದೆ ಶುರುವಾಗಿದ್ಯಾ ಶಕ್ತಿ ಪ್ರದರ್ಶನ..? ಕೆಪಿಸಿಸಿ ಅಧ್ಯಕ್ಷರು ನೋಟಿಸ್ ಕೊಡ್ತೇನೆ ಎಂದದ್ದು ಯಾರಿಗೆ..?

ಸಿಎಂ ಪಟ್ಟಕ್ಕಾಗಿ ಸದ್ದಿಲ್ಲದೆ ಶುರುವಾಗಿದ್ಯಾ ಶಕ್ತಿ ಪ್ರದರ್ಶನ..? ಕೆಪಿಸಿಸಿ ಅಧ್ಯಕ್ಷರು ನೋಟಿಸ್ ಕೊಡ್ತೇನೆ ಎಂದದ್ದು ಯಾರಿಗೆ..?

Published : Jul 03, 2024, 04:18 PM ISTUpdated : Jul 03, 2024, 04:19 PM IST

ಇಂಟರ್ನಲ್ ಡೆಮಾಕ್ರಸಿ ಬಗ್ಗೆ ಇಂಟ್ರೆಸ್ಟಿಂಗ್ ಕಥೆ ಹೇಳಿದ ಕೈ ಶಾಸಕ..!  
ಕೈ ಪಾಳೆಯದಲ್ಲಿ ತಾರಕ ತಲುಪಿದ ಆಂತರಿಕ ಸಂಘರ್ಷದ ಕಿಚ್ಚು..!
“ನನ್ನನ್ನು ಖಾಲಿ ಮಾಡಿಸಲು ಸಾಧ್ಯವಿಲ್ಲ..” ಸಿಡಿದೆದ್ದ ಸಾರಥಿ..!

ಠಕ್ಕರ್ ಗೇಮ್ ಪಾಲಿಟಿಕ್ಸ್. ಇದು ಬರೀ ಪಾಲಿಟಿಕ್ಸ್ ಅಲ್ಲ. ಕೈ ಸಾಮ್ರಾಜ್ಯದ ಅಂತರ್ಯುದ್ಧದ ಅಸಲಿ ಕಥೆ.  ಸಿದ್ದರಾಮಯ್ಯ(Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಬಣಗಳ ನಡುವಿನ ಘರ್ಷಣೆಯ ಕುಲುಮೆಯಲ್ಲಿ ಹೊತ್ತಿಕೊಂಡಿರೋ ಕಿಡಿ ಕಿಚ್ಚಿನ ಕಥೆ. ಕಾಂಗ್ರೆಸ್ (COngress)ಪಾಳೆಯದೊಳಗೆ ಭುಗಿಲೆದ್ದಿರೋ ಕುರ್ಚಿ ಕಾಳಗದ ಕಿಚ್ಚು ತಣ್ಣಗಾಗುವ ಲಕ್ಷಣಗಳೇ ಕಾಣ್ತಿಲ್ಲ. ಒಬ್ಬರಾದರ ಮೇಲೊಬ್ಬರಂತೆ ಪೈಪೋಟಿಗೆ ಬಿದ್ದವರಂತೆ, ಎಲ್ಲರೂ ನಾ ಮುಂದು ತಾ ಮುಂದು ಎಂಬಂತೆ ಆ ಕಿಚ್ಚಿಗೆ ತುಪ್ಪ ಸುರಿಯುತ್ತಿದ್ದಾರೆ. ಪರಿಣಾಮ ಅಗ್ನಿ ಪರ್ವತದಂತೆ ಧಗಧಗಿಸ್ತಾ ಕಾಂಗ್ರೆಸ್ ಕೋಟೆ. ಇದು ಸಿಎಂ ಕುರ್ಚಿಯಾಗಿ, ಡಿಎಂ ಪಟ್ಟಕ್ಕಾಗಿ, ಕೆಪಿಸಿಸಿ ಚುಕ್ಕಾಣಿಗಾಗಿ ಶುರುವಾಗಿರೋ ಘರ್ಷಣೆ. ಈ ಘರ್ಷಣೆಗೆ ಮೊದಲ ಶಂಖನಾದ ಮೊಳಗಿಸಿದವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಸಚಿವ ಕೆ.ಎನ್ ರಾಜಣ್ಣ. ಎಲ್ಲಾ ಆಂತರಿಕ ಸಂಘರ್ಷದ ಮೂಲ ಸಚಿವ ಕೆ.ಎನ್. ರಾಜಣ್ಣ(KN Rajanna) ಶುರು ಮಾಡಿದ್ದ ಕುರ್ಚಿ ಕಾಳಗ. ಡಿಸಿಎಂ ಪಟ್ಟದ ಮೇಲೆ ಸಿದ್ದರಾಮಯ್ಯ ಆಪ್ತರ ಕಣ್ಣು ಬೀಳ್ತಾ ಇದ್ದಂತೆ ಕಾಂಗ್ರೆಸ್ ಪಾಳೆಯ ಕಾದ ಕುಲುಮೆಯಂತಾಗಿ ಬಿಟ್ಟಿದೆ. ಆ ಕುಲೆಮೆಯೊಳಗಿಂದ ನುಗ್ಗಿ ಬಂದ ಸಿಎಂ ಕುರ್ಚಿಯ ಕಿಚ್ಚು, ಈಗ ಜ್ವಾಲಾಮುಖಿಯಾಗಿ ಬಿಟ್ಟಿದೆ. ಡಿಕೆ ಶಿವಕುಮಾರ್ ಆಪ್ತರು, ಒಕ್ಕಲಿಗ ಸಮುದಾಯದ ಸ್ವಾಮೀಜಿಯೊಬ್ಬರು ಮುಖ್ಯಮಂತ್ರಿ ಪಟ್ಟದ ಬಗ್ಗೆ ಆಡಿರೋ ಮಾತುಗಳು ಅಂತರ್ಯುದ್ಧದ ಅಖಾಡದಲ್ಲಿ ಭಾರೀ ಸಂಘರ್ಷಕ್ಕೆ ಕಾರಣವಾಗಿ ಬಿಟ್ಟಿದೆ. ಸಿಎಂ ಪಟ್ಟದ ಮೇಲೆ ಡಿಕೆಶಿ ಆಪ್ತರ ಕಣ್ಣು ಬೀಳ್ತಾ ಇದ್ದಂತೆ, ಇತ್ತ ಸಿದ್ದರಾಮಯ್ಯ ಸೇನೆಯ ಸಿಪಾಯಿಗಳು ದಂಗೆ ಎದ್ದಿದ್ದಾರೆ. ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ್ದಾರೆ, ನಂಬರ್ ಗೇಮ್ ರಹಸ್ಯದ ಬಗ್ಗೆ ಮಾತಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸಿಎಂ ಗಮನಕ್ಕೆ ಬಾರದೆ ಮುಡಾ ಹಗರಣ ನಡೆದಿರುವುದಿಲ್ಲ, ಸೂಕ್ತ ತನಿಖೆಯಾಗಲಿ: ವಿಜಯೇಂದ್ರ

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more