ಸಿಎಂ ಪಟ್ಟಕ್ಕಾಗಿ ಸದ್ದಿಲ್ಲದೆ ಶುರುವಾಗಿದ್ಯಾ ಶಕ್ತಿ ಪ್ರದರ್ಶನ..? ಕೆಪಿಸಿಸಿ ಅಧ್ಯಕ್ಷರು ನೋಟಿಸ್ ಕೊಡ್ತೇನೆ ಎಂದದ್ದು ಯಾರಿಗೆ..?

ಸಿಎಂ ಪಟ್ಟಕ್ಕಾಗಿ ಸದ್ದಿಲ್ಲದೆ ಶುರುವಾಗಿದ್ಯಾ ಶಕ್ತಿ ಪ್ರದರ್ಶನ..? ಕೆಪಿಸಿಸಿ ಅಧ್ಯಕ್ಷರು ನೋಟಿಸ್ ಕೊಡ್ತೇನೆ ಎಂದದ್ದು ಯಾರಿಗೆ..?

Published : Jul 03, 2024, 04:18 PM ISTUpdated : Jul 03, 2024, 04:19 PM IST

ಇಂಟರ್ನಲ್ ಡೆಮಾಕ್ರಸಿ ಬಗ್ಗೆ ಇಂಟ್ರೆಸ್ಟಿಂಗ್ ಕಥೆ ಹೇಳಿದ ಕೈ ಶಾಸಕ..!  
ಕೈ ಪಾಳೆಯದಲ್ಲಿ ತಾರಕ ತಲುಪಿದ ಆಂತರಿಕ ಸಂಘರ್ಷದ ಕಿಚ್ಚು..!
“ನನ್ನನ್ನು ಖಾಲಿ ಮಾಡಿಸಲು ಸಾಧ್ಯವಿಲ್ಲ..” ಸಿಡಿದೆದ್ದ ಸಾರಥಿ..!

ಠಕ್ಕರ್ ಗೇಮ್ ಪಾಲಿಟಿಕ್ಸ್. ಇದು ಬರೀ ಪಾಲಿಟಿಕ್ಸ್ ಅಲ್ಲ. ಕೈ ಸಾಮ್ರಾಜ್ಯದ ಅಂತರ್ಯುದ್ಧದ ಅಸಲಿ ಕಥೆ.  ಸಿದ್ದರಾಮಯ್ಯ(Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಬಣಗಳ ನಡುವಿನ ಘರ್ಷಣೆಯ ಕುಲುಮೆಯಲ್ಲಿ ಹೊತ್ತಿಕೊಂಡಿರೋ ಕಿಡಿ ಕಿಚ್ಚಿನ ಕಥೆ. ಕಾಂಗ್ರೆಸ್ (COngress)ಪಾಳೆಯದೊಳಗೆ ಭುಗಿಲೆದ್ದಿರೋ ಕುರ್ಚಿ ಕಾಳಗದ ಕಿಚ್ಚು ತಣ್ಣಗಾಗುವ ಲಕ್ಷಣಗಳೇ ಕಾಣ್ತಿಲ್ಲ. ಒಬ್ಬರಾದರ ಮೇಲೊಬ್ಬರಂತೆ ಪೈಪೋಟಿಗೆ ಬಿದ್ದವರಂತೆ, ಎಲ್ಲರೂ ನಾ ಮುಂದು ತಾ ಮುಂದು ಎಂಬಂತೆ ಆ ಕಿಚ್ಚಿಗೆ ತುಪ್ಪ ಸುರಿಯುತ್ತಿದ್ದಾರೆ. ಪರಿಣಾಮ ಅಗ್ನಿ ಪರ್ವತದಂತೆ ಧಗಧಗಿಸ್ತಾ ಕಾಂಗ್ರೆಸ್ ಕೋಟೆ. ಇದು ಸಿಎಂ ಕುರ್ಚಿಯಾಗಿ, ಡಿಎಂ ಪಟ್ಟಕ್ಕಾಗಿ, ಕೆಪಿಸಿಸಿ ಚುಕ್ಕಾಣಿಗಾಗಿ ಶುರುವಾಗಿರೋ ಘರ್ಷಣೆ. ಈ ಘರ್ಷಣೆಗೆ ಮೊದಲ ಶಂಖನಾದ ಮೊಳಗಿಸಿದವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಸಚಿವ ಕೆ.ಎನ್ ರಾಜಣ್ಣ. ಎಲ್ಲಾ ಆಂತರಿಕ ಸಂಘರ್ಷದ ಮೂಲ ಸಚಿವ ಕೆ.ಎನ್. ರಾಜಣ್ಣ(KN Rajanna) ಶುರು ಮಾಡಿದ್ದ ಕುರ್ಚಿ ಕಾಳಗ. ಡಿಸಿಎಂ ಪಟ್ಟದ ಮೇಲೆ ಸಿದ್ದರಾಮಯ್ಯ ಆಪ್ತರ ಕಣ್ಣು ಬೀಳ್ತಾ ಇದ್ದಂತೆ ಕಾಂಗ್ರೆಸ್ ಪಾಳೆಯ ಕಾದ ಕುಲುಮೆಯಂತಾಗಿ ಬಿಟ್ಟಿದೆ. ಆ ಕುಲೆಮೆಯೊಳಗಿಂದ ನುಗ್ಗಿ ಬಂದ ಸಿಎಂ ಕುರ್ಚಿಯ ಕಿಚ್ಚು, ಈಗ ಜ್ವಾಲಾಮುಖಿಯಾಗಿ ಬಿಟ್ಟಿದೆ. ಡಿಕೆ ಶಿವಕುಮಾರ್ ಆಪ್ತರು, ಒಕ್ಕಲಿಗ ಸಮುದಾಯದ ಸ್ವಾಮೀಜಿಯೊಬ್ಬರು ಮುಖ್ಯಮಂತ್ರಿ ಪಟ್ಟದ ಬಗ್ಗೆ ಆಡಿರೋ ಮಾತುಗಳು ಅಂತರ್ಯುದ್ಧದ ಅಖಾಡದಲ್ಲಿ ಭಾರೀ ಸಂಘರ್ಷಕ್ಕೆ ಕಾರಣವಾಗಿ ಬಿಟ್ಟಿದೆ. ಸಿಎಂ ಪಟ್ಟದ ಮೇಲೆ ಡಿಕೆಶಿ ಆಪ್ತರ ಕಣ್ಣು ಬೀಳ್ತಾ ಇದ್ದಂತೆ, ಇತ್ತ ಸಿದ್ದರಾಮಯ್ಯ ಸೇನೆಯ ಸಿಪಾಯಿಗಳು ದಂಗೆ ಎದ್ದಿದ್ದಾರೆ. ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ್ದಾರೆ, ನಂಬರ್ ಗೇಮ್ ರಹಸ್ಯದ ಬಗ್ಗೆ ಮಾತಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸಿಎಂ ಗಮನಕ್ಕೆ ಬಾರದೆ ಮುಡಾ ಹಗರಣ ನಡೆದಿರುವುದಿಲ್ಲ, ಸೂಕ್ತ ತನಿಖೆಯಾಗಲಿ: ವಿಜಯೇಂದ್ರ

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more