ಕಾಂಗ್ರೆಸ್-BJP ವಾಕ್ಸಮರ: ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ?

ಕಾಂಗ್ರೆಸ್-BJP ವಾಕ್ಸಮರ: ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ?

Published : Dec 24, 2024, 01:24 PM IST

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿ.ಟಿ. ರವಿ ನಡುವೆ ವಾಕ್ಸಮರ ತಾರಕಕ್ಕೇರಿದೆ. ಹೆಬ್ಬಾಳ್ಕರ್, ಸಿ.ಟಿ. ರವಿ ತಮ್ಮ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಾರೆ ಎಂದು ಆರೋಪಿಸಿ ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿ.ಟಿ. ರವಿ, ಹೆಬ್ಬಾಳ್ಕರ್ ಹೇಳಿಕೆ ನೀಡಲು ಸ್ವತಂತ್ರರು ಎಂದಿದ್ದಾರೆ.

ಕಾಂಗ್ರೆಸ್​-BJP ನಡುವೆ ನಿಲ್ಲದ ಆಕ್ಷೇಪಾರ್ಹ ಪದ ಬಳಕೆ ಸಂಘರ್ಷ. ಕೆಟ್ಟ ಪದ ಬಳಸಿಲ್ಲ ಅಂತಿದೆ ಬಿಜೆಪಿ. ಆದರೆ, ಆ ಕೆಟ್ಟ ಪದ ಬಳಸಿದ್ದಾರೆ ಅಂತಿದೆ ಕಾಂಗ್ರೆಸ್​. ಹೆಬ್ಬಾಳ್ಕರ್​ ವಿರುದ್ಧ ಸಿ.ಟಿ ರವಿ ಬಳಸಿದ ಪದಕ್ಕೆ ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎರಡು ವಿಡಿಯೋ ಬಿಡುಗಡೆ ಮಾಡಿದ್ದು, ಸಿಟಿ ರವಿ ಪ್ರಾಸ್ಟಿಟ್ಯೂಟ್​ ಬಳಸಿದ್ದಾರೆ ಎನ್ನಲಾದ ಒಂದು ವಿಡಿಯೋ ಇಲ್ಲಿದೆ ನೋಡಿ ಎಂದು ಎಲ್ಲರಿಗೂ ತೋರಿಸಲು ಮುಂದಾಗಿದ್ದಾರೆ. 

ಇನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು, ಸದನದ ಸಭಾಂಗಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ರಾಹುಲ್ ಗಾಂಧಿ​ ಡ್ರಗ್ ಅಡಿಕ್ಟ್ ಅನ್ನೋ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಈ ವಳೆ ಹೆಬ್ಬಾಳ್ಕರ್ ಮಾತಿನ ಸಮರವನ್ನು ಆರಂಭಿಸಿದ್ದಾರೆ. ಆಮೇಲೆ ನಡೆದ ಅಶ್ಲೀಲ ಪದ ಬಳಕೆ ಬಗ್ಗೆ ಈಗ ಎರಡು ವಿಡಿಯೋ ರಿಲೀಸ್ ಮಾಡಿದ್ದಾರೆ. 

ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕೆಂಡಾಮಂಡಲ ಆಗಿದ್ದಾರೆ. ಬಿಜೆಪಿ MLC ಸಿ.ಟಿ ರವಿ ತಾಯಿ ಮಗ ಆಗಿದ್ದರೆ ಸತ್ಯ ಹೇಳಬೇಕು. ಸಿ.ಟಿ ರವಿಗೆ  ಶಿಕ್ಷೆ ಆಗುವವರೆಗೂ ನಾನು ಸುಮ್ಮನೆ ಕೂರುವುದಿಲ್ಲ ಎಂದು ಸವಾಲು ಹಾಕಿದರು. ಇದರ ಬೆನಲ್ಲಿಯೇ ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಹೆಬ್ಬಾಳ್ಕರ್​ ಹೇಳಿಕೆ ನೀಡಲು ಸ್ವತಂತ್ರರು. ಇಂಥದ್ದಕ್ಕೆ ನಾವೇನು ಹೆದರಲ್ಲ. ಬೆಳಗಾವಿ ರಿಪಬ್ಲಿಕ್​ ಜನರು ಅವಕಾಶ ನೀಡಲ್ಲ ಎಂದು ಹೇಳಿದ್ದಾರೆ.

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more