ಕಾಂಗ್ರೆಸ್-BJP ವಾಕ್ಸಮರ: ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ?

ಕಾಂಗ್ರೆಸ್-BJP ವಾಕ್ಸಮರ: ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ?

Published : Dec 24, 2024, 01:24 PM IST

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿ.ಟಿ. ರವಿ ನಡುವೆ ವಾಕ್ಸಮರ ತಾರಕಕ್ಕೇರಿದೆ. ಹೆಬ್ಬಾಳ್ಕರ್, ಸಿ.ಟಿ. ರವಿ ತಮ್ಮ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಾರೆ ಎಂದು ಆರೋಪಿಸಿ ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿ.ಟಿ. ರವಿ, ಹೆಬ್ಬಾಳ್ಕರ್ ಹೇಳಿಕೆ ನೀಡಲು ಸ್ವತಂತ್ರರು ಎಂದಿದ್ದಾರೆ.

ಕಾಂಗ್ರೆಸ್​-BJP ನಡುವೆ ನಿಲ್ಲದ ಆಕ್ಷೇಪಾರ್ಹ ಪದ ಬಳಕೆ ಸಂಘರ್ಷ. ಕೆಟ್ಟ ಪದ ಬಳಸಿಲ್ಲ ಅಂತಿದೆ ಬಿಜೆಪಿ. ಆದರೆ, ಆ ಕೆಟ್ಟ ಪದ ಬಳಸಿದ್ದಾರೆ ಅಂತಿದೆ ಕಾಂಗ್ರೆಸ್​. ಹೆಬ್ಬಾಳ್ಕರ್​ ವಿರುದ್ಧ ಸಿ.ಟಿ ರವಿ ಬಳಸಿದ ಪದಕ್ಕೆ ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎರಡು ವಿಡಿಯೋ ಬಿಡುಗಡೆ ಮಾಡಿದ್ದು, ಸಿಟಿ ರವಿ ಪ್ರಾಸ್ಟಿಟ್ಯೂಟ್​ ಬಳಸಿದ್ದಾರೆ ಎನ್ನಲಾದ ಒಂದು ವಿಡಿಯೋ ಇಲ್ಲಿದೆ ನೋಡಿ ಎಂದು ಎಲ್ಲರಿಗೂ ತೋರಿಸಲು ಮುಂದಾಗಿದ್ದಾರೆ. 

ಇನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು, ಸದನದ ಸಭಾಂಗಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ರಾಹುಲ್ ಗಾಂಧಿ​ ಡ್ರಗ್ ಅಡಿಕ್ಟ್ ಅನ್ನೋ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಈ ವಳೆ ಹೆಬ್ಬಾಳ್ಕರ್ ಮಾತಿನ ಸಮರವನ್ನು ಆರಂಭಿಸಿದ್ದಾರೆ. ಆಮೇಲೆ ನಡೆದ ಅಶ್ಲೀಲ ಪದ ಬಳಕೆ ಬಗ್ಗೆ ಈಗ ಎರಡು ವಿಡಿಯೋ ರಿಲೀಸ್ ಮಾಡಿದ್ದಾರೆ. 

ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕೆಂಡಾಮಂಡಲ ಆಗಿದ್ದಾರೆ. ಬಿಜೆಪಿ MLC ಸಿ.ಟಿ ರವಿ ತಾಯಿ ಮಗ ಆಗಿದ್ದರೆ ಸತ್ಯ ಹೇಳಬೇಕು. ಸಿ.ಟಿ ರವಿಗೆ  ಶಿಕ್ಷೆ ಆಗುವವರೆಗೂ ನಾನು ಸುಮ್ಮನೆ ಕೂರುವುದಿಲ್ಲ ಎಂದು ಸವಾಲು ಹಾಕಿದರು. ಇದರ ಬೆನಲ್ಲಿಯೇ ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಹೆಬ್ಬಾಳ್ಕರ್​ ಹೇಳಿಕೆ ನೀಡಲು ಸ್ವತಂತ್ರರು. ಇಂಥದ್ದಕ್ಕೆ ನಾವೇನು ಹೆದರಲ್ಲ. ಬೆಳಗಾವಿ ರಿಪಬ್ಲಿಕ್​ ಜನರು ಅವಕಾಶ ನೀಡಲ್ಲ ಎಂದು ಹೇಳಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more