Ground Report: ಕಲಬುರಗಿಯಲ್ಲಿ ಕೈ ಮಲ ಜಂಗಿ ಕುಸ್ತಿ: ಹಾಲಿ, ಮಾಜಿಗಳ ನಡುವೆ ಹೊಸಬರ ಫೈಟ್

Ground Report: ಕಲಬುರಗಿಯಲ್ಲಿ ಕೈ ಮಲ ಜಂಗಿ ಕುಸ್ತಿ: ಹಾಲಿ, ಮಾಜಿಗಳ ನಡುವೆ ಹೊಸಬರ ಫೈಟ್

Published : Nov 26, 2022, 05:08 PM ISTUpdated : Nov 27, 2022, 04:52 PM IST

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಟಿಕೆಟ್‌ ಫೈಟ್‌ ಹಾಗೂ ಸ್ಪರ್ಧಾ ಆಕಾಂಕ್ಷಿಗಳ ಪ್ರಚಾರ ಕಾರ್ಯ ತೀವ್ರ ಚುರುಕು ಪಡೆದುಕೊಂಡಿದೆ. ಈಗ ಕಲಬುರಗಿ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ಟಿಕೆಟ್‌ಗಳನ್ನು ಪಡೆಯಲು ಅಭ್ಯರ್ಥಿಗಳು ಜಂಗಿ ಕುಸ್ತಿ ನಡೆಸುತ್ತಿದ್ದಾರೆ.

ಕಲಬುರಗಿ (ನ.26): ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಟಿಕೆಟ್‌ ಫೈಟ್‌ ಹಾಗೂ ಸ್ಪರ್ಧಾ ಆಕಾಂಕ್ಷಿಗಳ ಪ್ರಚಾರ ಕಾರ್ಯ ತೀವ್ರ ಚುರುಕು ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಸಮಾವೇಶಗಳ ಮಹಾಪೂರವೇ ನಡೆಯುತ್ತಿವೆ. ಈಗ ಕಲಬುರಗಿ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ಟಿಕೆಟ್‌ಗಳನ್ನು ಪಡೆಯಲು ಅಭ್ಯರ್ಥಿಗಳು ಜಂಗಿ ಕುಸ್ತಿ ನಡೆಸುತ್ತಿದ್ದಾರೆ.

ಜಿಲ್ಲೆಯ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಜೋಶ್‌ನಲ್ಲಿದೆ. ಇನ್ನು ಜನಸಂಕಲ್ಪ ಯಾತ್ರೆ ಮತ್ತು ಒಬಿಸಿ ಸಮಾವೇಶ ಯಶಸ್ಸಿನ ಬೆನ್ನಲ್ಲೇ ಕೇಸರಿ ಪಡೆಯೂ ಕೂಡ ಚುನಾವಣೆ ಹಾಟ್‌ ಫೇವರೀಟ್‌ ಆಗಿದೆ. ಈಗಾಗಲೇ ಪಂಚರತ್ನ ರಥಯಾತ್ರೆ ಆರಂಭಿಸಿರುವ ಜೆಡಿಎಸ್‌ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ರಾಷ್ಟ್ರೀಯ ಪಕ್ಷಗಳಿಗೆ ಠಕ್ಕರ್‍‌ ಕೊಡುವ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಒಟ್ಟು 9 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆಯಲ್ಲಿ ವೀರಶೈವ ಲಿಂಗಾಯರು, ಒಬಿಸಿ, ದಲಿತರು ಮತ್ತು ಮುಸ್ಲಿಂ ಸಮುದಾಯದವರೇ ನಿರ್ಣಾಯಕರಾಗಿದ್ದಾರೆ. ಮಾಜಿ ಸಚಿವ ಪ್ರಿಯಾಂಕ ಖರ್ಗೆ ಸ್ಪರ್ಧಿಸುವ ಚಿತ್ತಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪ್ರಭಾವ ಜೋರಾಗಿದೆ. ಇವರ ವಿರುದ್ಧ ಸ್ಪರ್ಧಿಸಲು ವಿಠ್ಠಲ್‌ ವಾಲ್ಮೀಕಿ ನಾಯಕ್‌, ಅರವಿಂದ್‌ ಚವ್ಹಾಣ್ ಕೂಡ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. ಹಾಲಿ ಸಂಸದ ಉಮೇಶ್‌ ಜಾಧವ್‌ ಕೂಡ ಬಿಜೆಪಿ ಟಿಕಟ್‌ ಆಕಾಂಕ್ಷಿ ಎಂದು ಕೇಳಿಬಂದಿದೆ.

ಜೇವರ್ಗಿ ಕ್ಷೇತ್ರದಲ್ಲಿ ಕಮಲ ಅರಳಿಸುವ ಸಂಕಲ್ಪವನ್ನು ಬಿಜೆಪಿ ಮಾಡಿಕೊಂಡಿದೆ. ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕೈ ಟಿಕೆಟ್‌ಗೆ ಭಾರಿ ಪೈಪೋಟೊ ನಡೆದಿದೆ. ಇಲ್ಲಿನ ಹಾಲಿ ಶಾಸಕ ಬಿಜೆಪಿಯ ದತ್ತಾತ್ರೇಯ ಪಾಟೀಲ್‌ ರೇವೂರ್ ಮತ್ತೊಮ್ಮೆ ಕಣಕ್ಕಿಳಿಲಿದ್ದಾರೆ. ಇನ್ನು ಕಾಂಗ್ರೆಸ್‌ನಿಂದ ಅಲ್ಲಂ ಪ್ರಭು ಪಾಟೀಲ್‌ ಟಿಕೆಟ್‌ಗೆ ಭಾರಿ ಪೈಪೋಟಿ ನಡೆಸಿದ್ದಾರೆ. ಸೇಡಂ ಕ್ಷೇತ್ರದ ಶಾಸಕ ರಾಜಕುಮಾರ್ ಪಾಟೀಲ್‌ ತೇಲ್ಕೂರ್ ಪುನರಾಯ್ಕೆ ಬಯಸಿದ್ದಾರೆ. ಕಾಂಗ್ರೆಸ್‌ ನಾಯಕ ಮಾಜಿ ಸಚಿವ ಶರಣಪ್ರಕಾಶ ಪಾಟೀಲ್‌ ಕಣಕ್ಕಿಳಿಯಲು ಸಿದ್ಧರಾಗಿದ್ದಾರೆ. ಇನ್ನು ಜೆಡಿಎಸ್‌ನಿಂದ ಹೊಸಮುಖ ಬಾಲರಾಜ್‌ ಗುತ್ತೇದಾರ್‍‌ ಅವರನ್ನು ಕಣಕ್ಕಿಳಿಸಲು ಘೋಷಣೆ ಮಾಡಲಾಗಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more