ರಣಾಂಗಣವಾದ ವಿಧಾನಪರಿಷತ್: ಪಾರ್ಲಿಮೆಂಟ್‌ನಲ್ಲೂ ಕಾಂಗ್ರೆಸ್‌-ಬಿಜೆಪಿ ಹೈಡ್ರಾಮಾ!

ರಣಾಂಗಣವಾದ ವಿಧಾನಪರಿಷತ್: ಪಾರ್ಲಿಮೆಂಟ್‌ನಲ್ಲೂ ಕಾಂಗ್ರೆಸ್‌-ಬಿಜೆಪಿ ಹೈಡ್ರಾಮಾ!

Published : Dec 20, 2024, 10:17 AM IST

ಪಾರ್ಲಿಮೆಂಟ್‌ ಆವರಣದಲ್ಲೂ ಕಾಂಗ್ರೆಸ್-ಬಿಜೆಪಿ ಸಂಸದರ ಹೈಡ್ರಾಮಾವೇ ನಡೀತು. ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್-ಬಿಜೆಪಿ ಸಂಸದರು ಪ್ರತಿಭಟಿಸಿದ್ರು. ಈ ವೇಳೆ ರಾಹುಲ್ ಗಾಂಧಿ, ಸಂಸದ ಪ್ರತಾಪ್ ಸಾರಂಗಿ ಅವರನ್ನು ತಳ್ಳಿದು, ತಲೆಗೆ ಪೆಟ್ಟಾಗಿ ರಕ್ತ ಸೋರಿಕೆಯಾಗಿದೆ ಎಂದು ಬಿಜೆಪಿ ಆರೋಪಿಸ್ತಿದೆ. ಆದ್ರೆ ಕಾಂಗ್ರೆಸ್ ಈ ಆರೋಪ ಅಲ್ಲಗಳೆದಿದ್ದಾರೆ. 

ಬೆಂಗಳೂರು(ಡಿ.20):  ಚಳಿಗಾಲದ ಅಧಿವೇಶನದ ಕೊನೇ ದಿನ ವಿಧಾನಪರಿಷತ್ ರಣಾಂಗಣವಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿ.ಟಿ ರವಿ ‘ಪ್ರಾಸ್ಟಿಟ್ಯೂಟ್’ ಎಂದು ಕರೆದಿದ್ದಾರೆ ಅನ್ನೋ ಆರೋಪ ಕೋಲಹಲವನ್ನೇ ಸೃಷ್ಟಿಸಿತು. ಸಿ.ಟಿ ರವಿ, ನನಗೆ 10 ಸಲ ‘ಪ್ರಾಸ್ಟಿಟ್ಯೂಟ್’ ಎಂದಿದ್ದಾರೆ ಅಂತ ಹೆಬ್ಬಾಳ್ಕರ್‌ ಕಣ್ಣೀರು ಹಾಕುತ್ತಾ ಸದನದಿಂದ ಹೊರ ನಡೆದ್ರು. ಇದಾದ ಬಳಿಕ ಸದನದ ಒಳಗೂ ಹೊರಗೂ ಭಾರೀ ಪ್ರತಿಭಟನೆ, ಗದ್ದಲ, ಗಲಾಟೆಗಳೇ ನಡೆದ್ವು. ಪ್ರತಿಭಟನೆ ಕಿಚ್ಚು ಹೆಚ್ಚಾಗ್ತಿದ್ದಂತೆ ಪೋಲೀಸರು ಸಿ.ಟಿ ರವಿ ಬಂಧಿಸಿದ್ರು.

ಸಿಟಿ ರವಿ ಖಾನಪುರ ಠಾಣೆಯಿಂದ ಬೆಂಗಳೂರಿಗೆ ಶಿಫ್ಟ್, ಪೊಲೀಸರ ವಿರುದ್ದ ಬಿಜೆಪಿ ಆಕ್ರೋಶ!

ಇದಕ್ಕೂ ಮೋದಲು ಹೆಬ್ಬಾಳ್ಕರ್‌ ಬೆಂಬಲಿಗರು, ಸಿ.ಟಿ ರವಿ ಮೇಲೆ ಮುತ್ತಿಗೆ, ಹಲ್ಲೆಗೂ ಮುಂದಾದ್ರು. ಮಾರ್ಷಲ್‌ಗಳು ಹಲ್ಲೆಯಾಗೋದನ್ನ ತಡೆದ್ರು. ಅತ್ತ ಪಾರ್ಲಿಮೆಂಟ್‌ ಆವರಣದಲ್ಲೂ ಕಾಂಗ್ರೆಸ್-ಬಿಜೆಪಿ ಸಂಸದರ ಹೈಡ್ರಾಮಾವೇ ನಡೀತು. ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್-ಬಿಜೆಪಿ ಸಂಸದರು ಪ್ರತಿಭಟಿಸಿದ್ರು. ಈ ವೇಳೆ ರಾಹುಲ್ ಗಾಂಧಿ, ಸಂಸದ ಪ್ರತಾಪ್ ಸಾರಂಗಿ ಅವರನ್ನು ತಳ್ಳಿದು, ತಲೆಗೆ ಪೆಟ್ಟಾಗಿ ರಕ್ತ ಸೋರಿಕೆಯಾಗಿದೆ ಎಂದು ಬಿಜೆಪಿ ಆರೋಪಿಸ್ತಿದೆ. ಆದ್ರೆ ಕಾಂಗ್ರೆಸ್ ಈ ಆರೋಪ ಅಲ್ಲಗಳೆದ್ರು. ಇನ್ನು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ಸಿಕ್ಕತಾಂಗಿದೆ. ಸಿಬಿಐ ತನಿಖೆ ಕೋರಿದ್ದ ಅರ್ಜಿ ಆದೇಶ ಜನವರಿ 15ಕ್ಕೆ ಮುಂದಕ್ಕೆ ಹೋಗ್ತಿದೆ. ಜನವರಿ 28ರವರೆಗೆ ಮುಡಾ ತನಿಖಾ ವರದಿ ಸಲ್ಲಿಸದಂತೆ ಹೈಕೋರ್ಟ್ ಆದೇಶಿಸಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more