News Hour ಪಂಚರಾಜ್ಯದ ಮಹಾತೀರ್ಪು, ಉತ್ತರಪ್ರದೇಶದಲ್ಲಿ ಬಿಜೆಪಿ ಬಲಿಷ್ಠ, ಪಂಜಾಬ್ ನಲ್ಲಿ ಕಾಂಗ್ರೆಸ್ ಧೂಳಿಪಟ!

News Hour ಪಂಚರಾಜ್ಯದ ಮಹಾತೀರ್ಪು, ಉತ್ತರಪ್ರದೇಶದಲ್ಲಿ ಬಿಜೆಪಿ ಬಲಿಷ್ಠ, ಪಂಜಾಬ್ ನಲ್ಲಿ ಕಾಂಗ್ರೆಸ್ ಧೂಳಿಪಟ!

Suvarna News   | Asianet News
Published : Mar 11, 2022, 12:25 AM IST

ಪಂಜಾಬ್ ನಲ್ಲಿ ಆಮ್ ಆದ್ಮಿ ಪಾರ್ಟಿ ಅಧಿಕಾರಕ್ಕೆ

ಗೋವಾ, ಮಣಿಪುರದಲ್ಲಿ ಬಿಜೆಪಿ ಮ್ಯಾಜಿಕ್

ಉತ್ತಾರಾಖಂಡದಲ್ಲೂ ಗದ್ದುಗೆ ಉಳಿಸಿಕೊಂಡ ಬಿಜೆಪಿ

ಉತ್ತರ ಪ್ರದೇಶದಲ್ಲಿ ಕ್ಲಿಕ್ ಆದ ಮೋದಿ-ಯೋಗಿ ವರ್ಚಸ್ಸು
 

ಬೆಂಗಳೂರು ( ಮಾ. 10): ದೇಶದ ಕುತೂಹಲ ಕೆರಳಿಸಿದ್ದ ಪಂಚರಾಜ್ಯಗಳ ಚುನಾವಣೆಯಲ್ಲಿ (Five State Election) ಭಾರತೀಯ ಜನತಾ ಪಕ್ಷ (BJP) ಎಕ್ಸಿಟ್ ಪೋಲ್ ಗಳ (Exit Poll)ಸಮೀಕ್ಷೆಯಂತೆ ನಾಲ್ಕು ರಾಜ್ಯಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ, ಪಂಜಾಬ್ ನಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ದೇಶದ ರಾಜಕಾರಣದಲ್ಲಿ ಹೊಸ ನೀರನ್ನು ತಂದಿರುವ ಆಮ್ ಆದ್ಮಿ ಪಾರ್ಟಿಯ (Aam Admi Party) ಮುಂದೆ ಕಾಂಗ್ರೆಸ್ ಸಂಪೂರ್ಣವಾಗಿ ನೆಲಕಚ್ಚಿದೆ.

ಉತ್ತರ ಪ್ರದೇಶದಲ್ಲಿ ನರೇಂದ್ರ ಮೋದಿ (Narendra Modi ) ಹಾಗೂ ಯೋಗಿ ಆದಿತ್ಯನಾಥ್ (Yogi Adityanath) ಅವರ ವರ್ಚಸ್ಸು ಸಂಪೂರ್ಣವಾಗಿ ಕ್ಲಿಕ್ ಆಗಿದೆ. ಇದಕ್ಕೆ ಮುಖ್ಯ ಕಾರಣವಾಗಿರೋದು ಕಾನೂನು ಸುವ್ಯವಸ್ಥೆ. ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಯಲ್ಲಿ ತೋರಿದ್ದ ಬದ್ಧತೆಯೇ ನೇರವಾಗಿ ಗೆಲುವಿಗೆ ಕಾರಣವಾಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯುವಲ್ಲಿ ಯಶ ಕಂಡಿದ್ದರೆ, ಕಾಂಗ್ರೆಸ್ ಅಧಿಕಾರದಲ್ಲಿದ್ದ ಪಂಜಾಬ್, ಆಪ್ ತೆಕ್ಕೆಗೆ ಜಾರಿದೆ. ಕಾಂಗ್ರೆಸ್ ನ ಘಟಾನುಘಟಿ ನಾಯಕರು ಚುನಾವಣೆಯಲ್ಲಿ ಸೋಲು ಕಂಡಿದ್ದು ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.

Election Result 2022 ಆಪ್ ಗೆಲುವು ಸಾಧಿಸುತ್ತಿದ್ದಂತೆ ಟ್ವಿಟರ್, ಫೇಸ್ ಬುಕ್ ನಲ್ಲಿ ಝೆಲೆನ್ಸ್ಕಿ ಟ್ರೆಂಡಿಂಗ್!
ಸಣ್ಣ ರಾಜ್ಯವಾಗಿದ್ದರೂ, ಚುನಾವಣೆಯ ನಿಟ್ಟಿನಲ್ಲಿ ಗಮನಸೆಳೆದಿದ್ದ ಗೋವಾ ಹಾಗೂ ಮಣಿಪುರದಲ್ಲಿ, ಆಡಳಿತವಿರೋಧಿ ಅಲೆಯ ಹೊರತಾಗಿಯೂ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more