Congress Govt Controversies: ಬಿಜೆಪಿ ಕೌಂಟರ್‌ಗೆ .."ಅಸಲಿ ಸತ್ಯ" ತಿಳಿಸಿದ ಮುಜರಾಯಿ ಮಂತ್ರಿ..!

Congress Govt Controversies: ಬಿಜೆಪಿ ಕೌಂಟರ್‌ಗೆ .."ಅಸಲಿ ಸತ್ಯ" ತಿಳಿಸಿದ ಮುಜರಾಯಿ ಮಂತ್ರಿ..!

Published : Feb 23, 2024, 04:53 PM IST

ಧರ್ಮ.. ಪೂಜೆ.. ಶಾಲೆ..  ಕುವೆಂಪು.. ನಾಡಗೀತೆ..!
ಅಗ್ನಿಕುಂಡಕ್ಕೆ ಕೈ ಹಾಕಿದ್ದೇಕೆ ಸಿದ್ದರಾಮಯ್ಯ ಸರ್ಕಾರ..?
4ನೇ ವಿವಾದದಲ್ಲಿ ಚಕ್ರವ್ಯೂಹ ಭೇದಿಸಿದ ಸಿದ್ದು ಸರ್ಕಾರ..!

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ (Congress)ಸರ್ಕಾರ. ಗ್ಯಾರಂಟಿಗಳ ಶ್ರೀರಕ್ಷೆಯನ್ನು ಬೆನ್ನಿಗೆ ಕಟ್ಟಿಕೊಂಡಿರೋ ಜೋಡೆತ್ತು ಸರ್ಕಾರ. ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಅಂತ ಎದೆ ತಟ್ಟಿ ಹೇಳ್ತಾ ಇರೋ ಗ್ಯಾರಂಟಿ(Guarantee) ಸರ್ಕಾರ. ಗ್ಯಾರಂಟಿಗಳ ಬಲದಿಂದಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ(Loksabha) ಗೆಲ್ತೀವಿ ಅಂತ ಅಬ್ಬರಿಸ್ತಾ ಇರೋ ಸಿದ್ದು ಸರ್ಕಾರ. ಎಲ್ಲವೂ ಸರಿಯಾದ ದಾರಿಯಲ್ಲಿ ಸಾಗ್ತಾ ಇದೆ ಅನ್ನೋವಾಗ್ಲೇ ಸರ್ಕಾರಕ್ಕೆ ಇಕ್ಕಟ್ಟು ತಂದು, ಬಿಕ್ಕಟ್ಟು ಸೃಷ್ಠಿ ಮಾಡಿವೆ 4 ನಾಲ್ಕು ವಿವಾದಗಳು. ವಿವಾದಗಳಿಗೂ ಕಾಂಗ್ರೆಸ್‌ಗೂ ಬಿಡದ ನಂಟು. ಪ್ರತಿಪಕ್ಷದಲ್ಲಿರ್ಲಿ, ಆಡಳಿತ ಪಕ್ಷದಲ್ಲಿರ್ಲಿ. ಕಾಂಗ್ರೆಸ್ ಸದಾ ಒಂದಿಲ್ಲೊಂದು ವಿವಾದಗಳ ಕೇಂದ್ರ ಬಿಂದುವಾಗ್ತಾನೇ ಬಂದಿದೆ. ಈಗ ರಾಜ್ಯ ಸರ್ಕಾರದಲ್ಲೂ ಅಂಥದ್ದೇ ನಾಲ್ಕು ವಿವಾದಗಳು ಸದ್ದು ಮಾಡ್ತಾ ಇವೆ. ಕಾಂಗ್ರೆಸ್ ಸರ್ಕಾರದ ಸುತ್ತ ಸುತ್ತಿದ ನಾಲ್ಕು ವಿವಾದಗಳಿವು. ಇದು ಸಿದ್ದರಾಮಯ್ಯ ಸರ್ಕಾರದ ಮೊದಲ ವಿವಾದ ಮತ್ತು ಎಡವಟ್ಟು. ನೀವು ಶಾಲೆಗಳಲ್ಲಿ "ಜ್ಞಾನ ದೇಗುಲವಿದು, ಕೈಮುಗಿದು ಒಳಗೆ ಬನ್ನಿ" ಅನ್ನೋ ಘೋಷವಾಕ್ಯದ ಫಲಕಗಳನ್ನು ನೋಡಿರ್ತೀರಿ. ಇದು ರಾಷ್ಟ್ರಕವಿ ಕುವೆಂಪು ಅವರ ಕವನದಿಂದ ಪ್ರೇರೇಪಿತವಾದ ಸಾಲು. 

ಇದನ್ನೂ ವೀಕ್ಷಿಸಿ:  Congress-APP : ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಆಪ್ ಮಹಾ ಮೈತ್ರಿ..! ದೆಹಲಿಯಲ್ಲಿ ಮೈತ್ರಿ..ಪಂಜಾಬ್‌ನಲ್ಲಿ ಏನು..?

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!