ಕಾಂಗ್ರೆಸ್‌ನಿಂದಲೇ ವಿದ್ಯುತ್ ದರ ಹೆಚ್ಚಳಕ್ಕೆ ಆಜ್ಞೆ ನೀಡಲಾಗಿದೆ: ಮಾಜಿ ಸಿಎಂ ಬೊಮ್ಮಾಯಿ‌

Jun 13, 2023, 3:45 PM IST

ಹಾವೇರಿ: ನಮ್ಮ ಸರ್ಕಾರ ಆಡಳಿತದಲ್ಲಿ ಇದ್ದಾಗ ವಿದ್ಯುತ್ ದರವನ್ನು ಹೆಚ್ಚಳ ಮಾಡಿಲ್ಲ. ಕಾಂಗ್ರೆಸ್‌ ಸರ್ಕಾರ ಬಂದಮೇಲೆಯೇ ಹೆಚ್ಚಳ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಕೆ‌.ಇ.ಆರ್. ಸಿ ಅದೊಂದು ಸ್ಟೆಚುಟರಿ ಬಾಡಿಯವರು ಮಾರ್ಚ್ ನಲ್ಲಿ ಹೆಚ್ಚಳದ ಪ್ರಸ್ತಾವನೆ ಕೊಟ್ಟರೂ, ನಾವು ಒಪ್ಪಿಗೆ ಕೊಟ್ಟಿರಲಿಲ್ಲ. ನಾವು ವಿದ್ಯುತ್ ದರ್ ಹೆಚ್ಚಳದ ಯಾವುದೇ ಆದೇಶ ಮಾಡಿಲ್ಲ. ಕಾಂಗ್ರೆಸ್ ನವರು ಬಂದ ಮೇಲೆಯೇ ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ಅವರ ಆಜ್ಞೆಯಿಂದಲೇ ವಿದ್ಯುತ್ ದರ ಹೆಚ್ಚಳ ಆಗಿದೆ ಎಂದರು. ಏಪ್ರೀಲ್ ನಿಂದ ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ಇದು ಬಹಳ ದೊಡ್ಡ ಭಾರವಾಗಿದೆ. ಬರುವ ದಿನಗಳಲ್ಲಿ ಎಲೆಕ್ಟ್ರಿಸಿಟಿ ಕ್ಷೇತ್ರ ಬಹಳ ಸಂಕಷ್ಟಕ್ಕೆ ಈಡಾಗಲಿದೆ. ಸಾರಿಗೆ ಹಾಗೂ ವಿದ್ಯುತ್ ಕ್ಷೇತ್ರಗಳಿಗೆ ಹಣ ಕೊಡಬೇಕು. ಒಂದು ವರ್ಷ ಬಿಟ್ಟು ಸಬ್ಸಿಡಿ ಕೊಟ್ಟರೆ ಆಗಲ್ಲ. ಮುಂಗಡವಾಗಿ ಸಬ್ಸಿಡಿ ಕೊಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ವೀಕ್ಷಿಸಿ: ಮೂರು ದಿನ ನಾಪತ್ತೆಯಾದವಳು ಸಿಕ್ಕಿದ್ದು ಹೆಣವಾಗಿ: ರುಂಡ.. ಮುಂಡ ಕತ್ತರಿಸಿ ಒಂದೊಂದು ದಿಕ್ಕಿಗೆ ಎಸೆದಿದ್ರು..!