ತಿಂಗಳಿಗೆ 5 kg ಅಕ್ಕಿ+170 ರೂ.ಸಿದ್ದು ಹೊಸ ಪ್ಲ್ಯಾನ್‌: ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ+ ದುಡ್ಡು..!

ತಿಂಗಳಿಗೆ 5 kg ಅಕ್ಕಿ+170 ರೂ.ಸಿದ್ದು ಹೊಸ ಪ್ಲ್ಯಾನ್‌: ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ+ ದುಡ್ಡು..!

Published : Jun 29, 2023, 10:59 AM IST

ಜುಲೈ 1ರ ಮುಹೂರ್ತದಲ್ಲೇ ಕೈಸೇರಲಿದೆ 5 kg ಅಕ್ಕಿ+₹170
"ಅನ್ನಭಾಗ್ಯ ಗ್ಯಾರಂಟಿ" ಶಪಥ ಈಡೇರಿಸಲು ಹರಸಾಹಸ
ಸಿದ್ದು ಸರ್ಕಾರದ ಹೊಸ ಗೇಮ್ ಪ್ಲಾನ್‌ಗೆ ಕೇಸರಿ ಕೆಂಡ..! 

ತಿಂಗಳಿಗೆ 10 ಕೆಜಿ ಅಕ್ಕಿ ಉಚಿತ ಅನ್ನೋದು ಕಾಂಗ್ರೆಸ್'ನ ಐದು ಗ್ಯಾರಂಟಿಗಳ ಪೈಕಿ ಒಂದು ಗ್ಯಾರಂಟಿ. ಈ ಪೈಕಿ 5 ಕೆ.ಜಿ ಅಕ್ಕಿ ಕೇಂದ್ರ ಸರ್ಕಾರದಿಂದ್ಲೇ ಬರತ್ತೆ. ಹೀಗಾಗಿ ರಾಜ್ಯ ಸರ್ಕಾರ ಕೊಡಬೇಕಿರೋದು ಹೆಚ್ಚುವರಿ 5 ಕೆ.ಜಿ ಅಕ್ಕಿ. ಹಿಂದೆಲ್ಲಾ ರಾಜ್ಯ ಸರ್ಕಾರ ಅಕ್ಕಿಯನ್ನು ಭಾರತೀಯ ಆಹಾರ ನಿಗಮ, ಅಂದ್ರೆ FCIನಿಂದ ಅವ್ರೇ ನಿಗದಿ ಪಡಿಸಿದ ಬೆಲೆಯಲ್ಲಿ ಖರೀದಿ ಮಾಡ್ತಾ ಇತ್ತು. ಇದ್ರಿಂದ ಈ ಬಾರಿಯೂ ಸಹಜವಾಯಿಗೇ FCI ಅಕ್ಕಿ ಕೊಡಲಿದೆ ಅಂತಾನೇ ಸಿದ್ದರಾಮಯ್ಯ ನಂಬಿದ್ರು. FCIಗೆ ಪತ್ರ ಬರೆದು ಇದನ್ನು ಖಚಿತ ಪಡಿಸಿಕೊಂಡಿದ್ರು. ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಸರಬರಾಜು ಮಾಡೋದಕ್ಕೆ FCI ಪತ್ರದ ಮುಖೇನ ತಿಳಿಸಿತ್ತು ಅಂದ್ರೆ ಸಿಎಂ ಸಿದ್ದರಾಮಯ್ಯ ಹೇಳ್ತಾರೆ. ಆದ್ರೆ ಇದ್ದಕ್ಕಿದ್ದಂತೆ ಅಕ್ಕಿ ಕೊಡಲು ಸಾಧ್ಯವಿಲ್ಲ ಅಂತ ಹೇಳಿದ FCI ಕೈ ಸರ್ಕಾರಕ್ಕೆ ಶಾಕ್ ಕೊಟ್ಟು ಬಿಡ್ತು. ಇದ್ರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವ್ರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಿದ್ರು. ಇದೀಗ ಸರ್ಕಾರ 5 ಕೆಜಿ ಅಕ್ಕಿಗೆ ಹಣ ನೀಡಲು ನಿರ್ಧರಿಸಿದೆ. ಒಂದು ಕೆ.ಜಿ ಅಕ್ಕಿಗೆ ಸರ್ಕಾರ ನಿಗದಿ ಪಡಿಸಿರುವ ಬೆಲೆ 34 ರೂಪಾಯಿ. ಅಂದ್ರೆ 5 ಕೆ.ಜಿ ಅಕ್ಕಿಗೆ 170 ರೂಪಾಯಿ.ಈ ಸ್ಕೀಮ್'ನಿಂದಾಗಿ ಸರ್ಕಾರದ ಬೊಕ್ಕಸಕ್ಕೆ ತಿಂಗಳಿಗೆ 750ರಿಂದ 800 ಕೋಟಿ ರೂಪಾಯಿ ಹೊರೆ ಆಗಲಿದೆ.

ಇದನ್ನೂ ವೀಕ್ಷಿಸಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಹೆಚ್ಚಾತ್ತು ವಿರೋಧ?: ಬಿಜೆಪಿ ಈ ನಡೆಗೆ ಆಪ್‌ ಬೆಂಬಲ !

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more