ತಿಂಗಳಿಗೆ 5 kg ಅಕ್ಕಿ+170 ರೂ.ಸಿದ್ದು ಹೊಸ ಪ್ಲ್ಯಾನ್‌: ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ+ ದುಡ್ಡು..!

ತಿಂಗಳಿಗೆ 5 kg ಅಕ್ಕಿ+170 ರೂ.ಸಿದ್ದು ಹೊಸ ಪ್ಲ್ಯಾನ್‌: ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ+ ದುಡ್ಡು..!

Published : Jun 29, 2023, 10:59 AM IST

ಜುಲೈ 1ರ ಮುಹೂರ್ತದಲ್ಲೇ ಕೈಸೇರಲಿದೆ 5 kg ಅಕ್ಕಿ+₹170
"ಅನ್ನಭಾಗ್ಯ ಗ್ಯಾರಂಟಿ" ಶಪಥ ಈಡೇರಿಸಲು ಹರಸಾಹಸ
ಸಿದ್ದು ಸರ್ಕಾರದ ಹೊಸ ಗೇಮ್ ಪ್ಲಾನ್‌ಗೆ ಕೇಸರಿ ಕೆಂಡ..! 

ತಿಂಗಳಿಗೆ 10 ಕೆಜಿ ಅಕ್ಕಿ ಉಚಿತ ಅನ್ನೋದು ಕಾಂಗ್ರೆಸ್'ನ ಐದು ಗ್ಯಾರಂಟಿಗಳ ಪೈಕಿ ಒಂದು ಗ್ಯಾರಂಟಿ. ಈ ಪೈಕಿ 5 ಕೆ.ಜಿ ಅಕ್ಕಿ ಕೇಂದ್ರ ಸರ್ಕಾರದಿಂದ್ಲೇ ಬರತ್ತೆ. ಹೀಗಾಗಿ ರಾಜ್ಯ ಸರ್ಕಾರ ಕೊಡಬೇಕಿರೋದು ಹೆಚ್ಚುವರಿ 5 ಕೆ.ಜಿ ಅಕ್ಕಿ. ಹಿಂದೆಲ್ಲಾ ರಾಜ್ಯ ಸರ್ಕಾರ ಅಕ್ಕಿಯನ್ನು ಭಾರತೀಯ ಆಹಾರ ನಿಗಮ, ಅಂದ್ರೆ FCIನಿಂದ ಅವ್ರೇ ನಿಗದಿ ಪಡಿಸಿದ ಬೆಲೆಯಲ್ಲಿ ಖರೀದಿ ಮಾಡ್ತಾ ಇತ್ತು. ಇದ್ರಿಂದ ಈ ಬಾರಿಯೂ ಸಹಜವಾಯಿಗೇ FCI ಅಕ್ಕಿ ಕೊಡಲಿದೆ ಅಂತಾನೇ ಸಿದ್ದರಾಮಯ್ಯ ನಂಬಿದ್ರು. FCIಗೆ ಪತ್ರ ಬರೆದು ಇದನ್ನು ಖಚಿತ ಪಡಿಸಿಕೊಂಡಿದ್ರು. ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಸರಬರಾಜು ಮಾಡೋದಕ್ಕೆ FCI ಪತ್ರದ ಮುಖೇನ ತಿಳಿಸಿತ್ತು ಅಂದ್ರೆ ಸಿಎಂ ಸಿದ್ದರಾಮಯ್ಯ ಹೇಳ್ತಾರೆ. ಆದ್ರೆ ಇದ್ದಕ್ಕಿದ್ದಂತೆ ಅಕ್ಕಿ ಕೊಡಲು ಸಾಧ್ಯವಿಲ್ಲ ಅಂತ ಹೇಳಿದ FCI ಕೈ ಸರ್ಕಾರಕ್ಕೆ ಶಾಕ್ ಕೊಟ್ಟು ಬಿಡ್ತು. ಇದ್ರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವ್ರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಿದ್ರು. ಇದೀಗ ಸರ್ಕಾರ 5 ಕೆಜಿ ಅಕ್ಕಿಗೆ ಹಣ ನೀಡಲು ನಿರ್ಧರಿಸಿದೆ. ಒಂದು ಕೆ.ಜಿ ಅಕ್ಕಿಗೆ ಸರ್ಕಾರ ನಿಗದಿ ಪಡಿಸಿರುವ ಬೆಲೆ 34 ರೂಪಾಯಿ. ಅಂದ್ರೆ 5 ಕೆ.ಜಿ ಅಕ್ಕಿಗೆ 170 ರೂಪಾಯಿ.ಈ ಸ್ಕೀಮ್'ನಿಂದಾಗಿ ಸರ್ಕಾರದ ಬೊಕ್ಕಸಕ್ಕೆ ತಿಂಗಳಿಗೆ 750ರಿಂದ 800 ಕೋಟಿ ರೂಪಾಯಿ ಹೊರೆ ಆಗಲಿದೆ.

ಇದನ್ನೂ ವೀಕ್ಷಿಸಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಹೆಚ್ಚಾತ್ತು ವಿರೋಧ?: ಬಿಜೆಪಿ ಈ ನಡೆಗೆ ಆಪ್‌ ಬೆಂಬಲ !

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more