ಕೋಲಾರದಲ್ಲಿ ಬೇಡ ಬೇಡ, ಬಾದಾಮಿ ದೂರ ದೂರ, ಎಲ್ಲಿ ಮಾಡುಮಾ, ಸ್ಪರ್ಧೆ ಎಲ್ಲಿ ಮಾಡುಮಾ?

ಕೋಲಾರದಲ್ಲಿ ಬೇಡ ಬೇಡ, ಬಾದಾಮಿ ದೂರ ದೂರ, ಎಲ್ಲಿ ಮಾಡುಮಾ, ಸ್ಪರ್ಧೆ ಎಲ್ಲಿ ಮಾಡುಮಾ?

Published : Mar 18, 2023, 11:22 PM IST

ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಹಿಂದೆ ಸರಿಯಲು ಕಾರಣವೇನು?ದೇವಿ ಸೂಚನೆಯಂತೆ ಎರಡು ಕಡೆ ಸ್ಪರ್ಧೆ ಮಾಡ್ತಾರ ಸಿದ್ದರಾಮಯ್ಯ?ಸಿದ್ದರಾಮಯ್ಯನವರಿಗೆ ಕ್ಷೇತ್ರ ಬಿಟ್ಟು ಅತಂತ್ರರಾದ ಶ್ರೀನಿವಾಸ್ ಗೌಡ, ಸಿದ್ದು ಎಲ್ಲಿ ನಿಂತರೂ ಸೋಲುತ್ತಾರೆ, ಕಾಂಗ್ರೆಸ್ ಕುಟುಕಿದ ಬಿಜೆಪಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ಕಂಪ್ಲೀಟ್ ಪ್ಯಾಕೇಜ್ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯಗೆ ಎದುರಾಗಿದ್ದ ಕ್ಷೇತ್ರ ಗೊಂದಲ ಇದೀಗ ಮತ್ತೆ ಬಂದಿದೆ. ಬಾದಾಮಿ ದೂರ ಅನ್ನೋ ಕಾರಣ ನೀಡಿದ್ದರು. ಇತ್ತ ಸಿದ್ದರಾಮಯ್ಯ ಕೋಲಾರದಲ್ಲಿ ನಾಲ್ಕೈದು ಬಾರಿ ಭೇಟಿ ನೀಡಿ ಕೊನೆಗೆ ಅಂತಿಮ ಘೋಷಣೆ ಮಾಡಿದ್ದರು. ಕೋಲಾರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದಿದ್ದರು. ಹೀಗಾಗಿ ಕೋಲಾರ ರಾಜಕೀಯ ರಂಗೇರಿತ್ತು. ಆದರೆ ಕೋಲಾರದಲ್ಲಿ ಕಾಂಗ್ರೆಸ್ ನಡೆಸಿದ ಸಮೀಕ್ಷೆಗಳು ಸಿದ್ದರಾಮಯ್ಯ ಪರವಾಗಿಲ್ಲ. ಕಾಂಗ್ರೆಸ್ ಹೈಕಮಾಂಡ್ ಕೋಲಾರದಿಂದ ಸ್ಪರ್ಧೆ ಬೇಡ ಎನ್ನುತ್ತಿದೆ. ಸೋಲಿನ ಆತಂಕದಿಂದ ಇದೀಗ ಸಿದ್ದರಾಮಯ್ಯ ಯು ಟರ್ನ್ ಹೊಡೆದಿದ್ದಾರೆ. ಕೋಲಾರ ಸ್ಪರ್ಧೆಯಿಂದ ದೂರ ಉಳಿದದಿದ್ದಾರೆ. ಇದೀಗ ಸಿದ್ದರಾಮಯ್ಯ ಕ್ಷೇತ್ರ ಯಾವುದು ಅನ್ನೋ ಪ್ರಶ್ನೆ ಮತ್ತೆ ಶುರುವಾಗಿದೆ. ಮಾಜಿ ಸಿಎಂಗೆ ಕ್ಷೇತ್ರವೇ ಇಲ್ಲದಾಗಿದೆ. ಎಲ್ಲಿ ನಿಂತರೂ ಸೋಲುತ್ತಾರೆ ಎಂದು ಬಿಜೆಪಿ ಕುಟುಕಿದೆ. ಇತ್ತ ಸಿದ್ದರಾಮಯ್ಯ ಪುತ್ರನ ವರುಣಾ ಕ್ಷೇತ್ರಕ್ಕೆ ಹೈಕಾಕಲು ನಿರಾಕರಿಸಿದ್ದಾರೆ. ಸಿದ್ದರಾಮಯ್ಯನವರ ಕೆಲ ಆಯ್ಕೆಗಳಲ್ಲಿ ಬಾದಾಮಿ, ಸವದತ್ತಿ ಹಾಗೂ ಚಾಮರಾಜಪೇಟೆ ಪ್ರಮುಖವಾಗಿದೆ. ಹೀಗಾಗಿ ಸಿದ್ದು ಸ್ಪರ್ಧೆ ಎಲ್ಲಿಂದ ಅನ್ನೋ ಪ್ರಶ್ನೆಗೆ ಉತ್ತರ ಸಿಕಿಲ್ಲ. ಗೊಂದಲ ಮುಂದುವರಿದಿದೆ.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more