"ಶಾಸಕ Vs ಸಚಿವ" ಸಂಘರ್ಷಕ್ಕೆ ಹೈಕಮಾಂಡ್ ಎಂಟ್ರಿ: "ಲಕ್ಷ್ಮಣ ರೇಖೆ" ಎಳೆಯಲಿದ್ದಾರಾ ಖರ್ಗೆ,ರಾಹುಲ್ ಗಾಂಧಿ..?

"ಶಾಸಕ Vs ಸಚಿವ" ಸಂಘರ್ಷಕ್ಕೆ ಹೈಕಮಾಂಡ್ ಎಂಟ್ರಿ: "ಲಕ್ಷ್ಮಣ ರೇಖೆ" ಎಳೆಯಲಿದ್ದಾರಾ ಖರ್ಗೆ,ರಾಹುಲ್ ಗಾಂಧಿ..?

Published : Aug 01, 2023, 12:40 PM IST

ಕೈ ಕೋಟೆಯಲ್ಲಿ ಮತ್ತೆ ಭುಗಿಲೆದ್ದ ದಾಯಾದಿ ಕಲಹ..!
ಅಂತರ್ಯುದ್ಧಕ್ಕೆ ಮದ್ದು ಅರೆಯಲು ಹೈಕಮಾಂಡ್ ಎಂಟ್ರಿ..!
ಆಗಸ್ಟ್ 2ಕ್ಕೆ ದೆಹಲಿಯಲ್ಲಿ ಹೈವೋಲ್ಟೇಜ್ ಮೀಟಿಂಗ್..!
 

ರಾಜ್ಯ ಕಾಂಗ್ರೆಸ್‌ನಲ್ಲಿ ಸರ್ಕಾರದ ಕೋಟೆಯಲ್ಲಿ ನಡೀತಾ ಇರೋ ದಾಯಾದಿ ಕಲಹದ ಅಂಗಳಕ್ಕೆ ಕೈ ಹೈಕಮಾಂಡ್ ಎಂಟ್ರಿ ಕೊಟ್ಟಿದೆ. ಸಚಿವರ ವಿರುದ್ಧ ಶಾಸಕರ ಕೋಪ, ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್(Congress) ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಆಕ್ರೋಶ. ಹೀಗೆ ಜ್ವಾಲಾಮುಖಿ ಸ್ಫೋಟಗೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರೋ ಕಾಂಗ್ರೆಸ್ ಹೈಕಮಾಂಡ್, ಆಗಸ್ಟ್ ಎರಡರಂದು ದೆಹಲಿಯಲ್ಲಿ(Delhi) ಹೈವೋಲ್ಟೇಜ್ ಮೀಟಿಂಗ್ ಫಿಕ್ಸ್ ಮಾಡಿದೆ. ರಾಜ್ಯ ನಾಯಕರ ಜೊತೆ ಮೀಟಿಂಗ್ ಅಂದ್ರೆ ಅಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇರ್ಲೇಬೇಕು. ಆದ್ರೆ ಇಲ್ಲಿ ಸಿಎಂ ಡಿಸಿಎಂ ಜೊತೆ ಸಚಿವರ ದಂಡೇ ದೆಹಲಿಗೆ ಹೋಗ್ತಾ ಇದೆ. ಸಿದ್ದರಾಮಯ್ಯ(Siddaramaiah) ಸಂಪುಟದ 17 ಮಂತ್ರಿಗಳಿಗೆ ಸಭೆಗೆ ಬರುವಂತೆ ಬುಲಾವ್ ಬಂದಿದೆ. ಇವ್ರ ಜೊತೆ ಮತ್ತೂ ಒಂದಷ್ಟು ನಾಯಕರುಗಳು ಸೇರಿದಂತೆ ಒಟ್ಟು 37 ಮಂದಿ ಬುಧವಾರ ನಡೆಯುವ ಸಭೆಯಲ್ಲಿ(Meeting) ಭಾಗಿಯಾಗಲಿದ್ದಾರೆ. ಅಷ್ಟಕ್ಕೂ ಮೂರ್ನಾಲ್ಕು ಮಂದಿ ಕೂತು ನಡೆಸಬೇಕಿಲ್ಲ ಸಭೆಗೆ 37 ಮಂದಿಯನ್ನು ಕಾಂಗ್ರೆಸ್ ಹೈಕಮಾಂಡ್ ಆಹ್ವಾನಿಸಿದೆ. ಈ ಹೈವೋಲ್ಟೇಜ್ ಸಭೆಯ ಹಿಂದಿರೋ ಅಸಲಿ ಗುಟ್ಟೇನು..? ಈ ಪ್ರಶ್ನೆಗೆ ಸಿಗ್ತಿರೋ ಉತ್ತರವೇ ಕೈ ದಾಯಾದಿ ಕಲಹ.

ಇದನ್ನೂ ವೀಕ್ಷಿಸಿ:  ಪಬ್ಜಿ ಗುಬ್ಬಿಗಳ ಲವ್ ಸ್ಟೋರಿ ಹಿಂದೆ ಷಡ್ಯಂತ್ರ..?: ಭಾರತಕ್ಕೆ ಬಂದಳಾ ಗೂಢಚಾರಿಣಿ..?

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more