Raichur: ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಕಾಂಗ್ರೆಸ್-ಜೆಡಿಎಸ್ ರಾಜಕೀಯ

Raichur: ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಕಾಂಗ್ರೆಸ್-ಜೆಡಿಎಸ್ ರಾಜಕೀಯ

Published : Mar 15, 2023, 08:22 PM IST

ಜಿಲ್ಲೆಯ ಸಿಂಧನೂರಿನಲ್ಲಿ ನೂತನ ರಂಗಮಂದಿರಕ್ಕೆ ಪುನೀತ್ ರಾಜ್‌ಕುಮಾರ್ ಹೆಸರಿಡಲು ಗಲಾಟೆ ನಡೆಯುತ್ತಿದ್ದು, ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ.

ರಾಯಚೂರು (ಮಾ.15): ಜಿಲ್ಲೆಯ ಸಿಂಧನೂರಿನಲ್ಲಿ ನೂತನ ರಂಗಮಂದಿರಕ್ಕೆ ಪುನೀತ್ ರಾಜ್‌ಕುಮಾರ್ ಹೆಸರಿಡಲು ಗಲಾಟೆ ನಡೆಯುತ್ತಿದ್ದು, ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ. ಪಿಎಸ್‌ಐ ಮಣಿಕಂಠ ಕಾಲರ್ ಹಿಡಿದು ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಪುತ್ರ ಅಭಿಷೇಕ ನಾಡಗೌಡ ತಳ್ಳಿದ್ದು, ಇದಕ್ಕೆ ಜೆಡಿಎಸ್ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಸಿಂಧನೂರು ನಗರದ ಸುಕಾಲಪೇಟೆ ರಸ್ತೆಯಲ್ಲಿ ನಿರ್ಮಾಣವಾಗಿರುವ ರಂಗಮಂದಿರಕ್ಕೆ ಪುನೀತ್ ರಾಜಕುಮಾರ್ ಹೆಸರಿಡಲು ಶಾಸಕರ ಪುತ್ರ ಒತ್ತಾಯ ಮಾಡಿದ್ದು, ಕಾಂಗ್ರೆಸ್ ಕೈಯಲ್ಲಿರುವ ನಗರಸಭೆಯಿಂದ ಅಪ್ಪು ಹೆಸರಿಡಲು ವಿರೋಧವಾಗಿದೆ. 

ಹೀಗಾಗಿ ಸ್ಥಳೀಯ ಕಲಾವಿದರ ಹೆಸರಿಡಲು ಕಾಂಗ್ರೆಸ್ ಒತ್ತಾಯ ಮಾಡಿದ್ದು, ನಗರದ ಎಪಿಎಂಸಿಯಿಂದ ರಂಗಮಂದಿರದವರೆಗೆ ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಗಲಾಟೆ ನಡೆದಿದೆ. ಕರ್ತವ್ಯನಿರತ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಪುತ್ರ ಸೇರಿ 15 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪುನೀತ್ ರಾಜಕುಮಾರ್ ಪುತ್ಥಳಿ ಪ್ರತಿಷ್ಟಾಪನೆ ವಿಚಾರ ನಡೆದ ಗಲಾಟೆಯಲ್ಲಿ ಅನುಮತಿ ಇಲ್ಲದೆ ಅಪ್ಪು ಪುತ್ಥಳಿ ಮೆರವಣಿಗೆ, ಪ್ರತಿಷ್ಟಾಪನೆಗೆ ಯತ್ನಿಸಿದ್ದು, ಮೆರವಣಿಗೆ ವೇಳೆ ಮಾತಿನ ಚಕಮಕಿ ನಡೆದು ಪಿಎಸ್‌ಐ ಮೇಲೆ ಹಲ್ಲೆ ಮಾಡಲಾಗಿದ್ದು, ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more