Raichur: ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಕಾಂಗ್ರೆಸ್-ಜೆಡಿಎಸ್ ರಾಜಕೀಯ

Raichur: ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಕಾಂಗ್ರೆಸ್-ಜೆಡಿಎಸ್ ರಾಜಕೀಯ

Published : Mar 15, 2023, 08:22 PM IST

ಜಿಲ್ಲೆಯ ಸಿಂಧನೂರಿನಲ್ಲಿ ನೂತನ ರಂಗಮಂದಿರಕ್ಕೆ ಪುನೀತ್ ರಾಜ್‌ಕುಮಾರ್ ಹೆಸರಿಡಲು ಗಲಾಟೆ ನಡೆಯುತ್ತಿದ್ದು, ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ.

ರಾಯಚೂರು (ಮಾ.15): ಜಿಲ್ಲೆಯ ಸಿಂಧನೂರಿನಲ್ಲಿ ನೂತನ ರಂಗಮಂದಿರಕ್ಕೆ ಪುನೀತ್ ರಾಜ್‌ಕುಮಾರ್ ಹೆಸರಿಡಲು ಗಲಾಟೆ ನಡೆಯುತ್ತಿದ್ದು, ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ. ಪಿಎಸ್‌ಐ ಮಣಿಕಂಠ ಕಾಲರ್ ಹಿಡಿದು ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಪುತ್ರ ಅಭಿಷೇಕ ನಾಡಗೌಡ ತಳ್ಳಿದ್ದು, ಇದಕ್ಕೆ ಜೆಡಿಎಸ್ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಸಿಂಧನೂರು ನಗರದ ಸುಕಾಲಪೇಟೆ ರಸ್ತೆಯಲ್ಲಿ ನಿರ್ಮಾಣವಾಗಿರುವ ರಂಗಮಂದಿರಕ್ಕೆ ಪುನೀತ್ ರಾಜಕುಮಾರ್ ಹೆಸರಿಡಲು ಶಾಸಕರ ಪುತ್ರ ಒತ್ತಾಯ ಮಾಡಿದ್ದು, ಕಾಂಗ್ರೆಸ್ ಕೈಯಲ್ಲಿರುವ ನಗರಸಭೆಯಿಂದ ಅಪ್ಪು ಹೆಸರಿಡಲು ವಿರೋಧವಾಗಿದೆ. 

ಹೀಗಾಗಿ ಸ್ಥಳೀಯ ಕಲಾವಿದರ ಹೆಸರಿಡಲು ಕಾಂಗ್ರೆಸ್ ಒತ್ತಾಯ ಮಾಡಿದ್ದು, ನಗರದ ಎಪಿಎಂಸಿಯಿಂದ ರಂಗಮಂದಿರದವರೆಗೆ ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಗಲಾಟೆ ನಡೆದಿದೆ. ಕರ್ತವ್ಯನಿರತ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಪುತ್ರ ಸೇರಿ 15 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪುನೀತ್ ರಾಜಕುಮಾರ್ ಪುತ್ಥಳಿ ಪ್ರತಿಷ್ಟಾಪನೆ ವಿಚಾರ ನಡೆದ ಗಲಾಟೆಯಲ್ಲಿ ಅನುಮತಿ ಇಲ್ಲದೆ ಅಪ್ಪು ಪುತ್ಥಳಿ ಮೆರವಣಿಗೆ, ಪ್ರತಿಷ್ಟಾಪನೆಗೆ ಯತ್ನಿಸಿದ್ದು, ಮೆರವಣಿಗೆ ವೇಳೆ ಮಾತಿನ ಚಕಮಕಿ ನಡೆದು ಪಿಎಸ್‌ಐ ಮೇಲೆ ಹಲ್ಲೆ ಮಾಡಲಾಗಿದ್ದು, ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more