Raichur: ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಕಾಂಗ್ರೆಸ್-ಜೆಡಿಎಸ್ ರಾಜಕೀಯ

Raichur: ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಕಾಂಗ್ರೆಸ್-ಜೆಡಿಎಸ್ ರಾಜಕೀಯ

Published : Mar 15, 2023, 08:22 PM IST

ಜಿಲ್ಲೆಯ ಸಿಂಧನೂರಿನಲ್ಲಿ ನೂತನ ರಂಗಮಂದಿರಕ್ಕೆ ಪುನೀತ್ ರಾಜ್‌ಕುಮಾರ್ ಹೆಸರಿಡಲು ಗಲಾಟೆ ನಡೆಯುತ್ತಿದ್ದು, ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ.

ರಾಯಚೂರು (ಮಾ.15): ಜಿಲ್ಲೆಯ ಸಿಂಧನೂರಿನಲ್ಲಿ ನೂತನ ರಂಗಮಂದಿರಕ್ಕೆ ಪುನೀತ್ ರಾಜ್‌ಕುಮಾರ್ ಹೆಸರಿಡಲು ಗಲಾಟೆ ನಡೆಯುತ್ತಿದ್ದು, ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ. ಪಿಎಸ್‌ಐ ಮಣಿಕಂಠ ಕಾಲರ್ ಹಿಡಿದು ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಪುತ್ರ ಅಭಿಷೇಕ ನಾಡಗೌಡ ತಳ್ಳಿದ್ದು, ಇದಕ್ಕೆ ಜೆಡಿಎಸ್ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಸಿಂಧನೂರು ನಗರದ ಸುಕಾಲಪೇಟೆ ರಸ್ತೆಯಲ್ಲಿ ನಿರ್ಮಾಣವಾಗಿರುವ ರಂಗಮಂದಿರಕ್ಕೆ ಪುನೀತ್ ರಾಜಕುಮಾರ್ ಹೆಸರಿಡಲು ಶಾಸಕರ ಪುತ್ರ ಒತ್ತಾಯ ಮಾಡಿದ್ದು, ಕಾಂಗ್ರೆಸ್ ಕೈಯಲ್ಲಿರುವ ನಗರಸಭೆಯಿಂದ ಅಪ್ಪು ಹೆಸರಿಡಲು ವಿರೋಧವಾಗಿದೆ. 

ಹೀಗಾಗಿ ಸ್ಥಳೀಯ ಕಲಾವಿದರ ಹೆಸರಿಡಲು ಕಾಂಗ್ರೆಸ್ ಒತ್ತಾಯ ಮಾಡಿದ್ದು, ನಗರದ ಎಪಿಎಂಸಿಯಿಂದ ರಂಗಮಂದಿರದವರೆಗೆ ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಗಲಾಟೆ ನಡೆದಿದೆ. ಕರ್ತವ್ಯನಿರತ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಪುತ್ರ ಸೇರಿ 15 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪುನೀತ್ ರಾಜಕುಮಾರ್ ಪುತ್ಥಳಿ ಪ್ರತಿಷ್ಟಾಪನೆ ವಿಚಾರ ನಡೆದ ಗಲಾಟೆಯಲ್ಲಿ ಅನುಮತಿ ಇಲ್ಲದೆ ಅಪ್ಪು ಪುತ್ಥಳಿ ಮೆರವಣಿಗೆ, ಪ್ರತಿಷ್ಟಾಪನೆಗೆ ಯತ್ನಿಸಿದ್ದು, ಮೆರವಣಿಗೆ ವೇಳೆ ಮಾತಿನ ಚಕಮಕಿ ನಡೆದು ಪಿಎಸ್‌ಐ ಮೇಲೆ ಹಲ್ಲೆ ಮಾಡಲಾಗಿದ್ದು, ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more