ವಂದೇ ಮಾತರಂ ಹಾಡಲು ಸಿದ್ದರಾಮಯ್ಯ ಹಿಂದೇಟು, ಮತ್ತೊಂದು ವಿವಾದದಲ್ಲಿ ಕಾಂಗ್ರೆಸ್!

ವಂದೇ ಮಾತರಂ ಹಾಡಲು ಸಿದ್ದರಾಮಯ್ಯ ಹಿಂದೇಟು, ಮತ್ತೊಂದು ವಿವಾದದಲ್ಲಿ ಕಾಂಗ್ರೆಸ್!

Published : Nov 26, 2022, 10:48 PM ISTUpdated : Nov 26, 2022, 11:50 PM IST

ಏಯ್ ವಂದೇ ಮಾತರಂ ಬೇಡಪ್ಪ. ಇದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಡಿದ ಮಾತು. ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಿದ್ದು ವಂದೇ ಮಾತರಂ ಹಾಡಲು ನಿರಾಕರಿಸಿದ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗಿದೆ. ಸಿದ್ದ ಧೋರಣೆಗೆ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದೆ.
 

ಬೆಂಗಳೂರು(ನ.26):  ಸಂವಿಧಾನ ದಿನಾಚರಣೆಯಂದೇ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಂದೇ ಮಾತರಂ ಹಾಡಲು ಹಿಂದೇಟು ಹಾಕಿದ ಘಟನೆ ನಡೆದಿದೆ. ಕೆಪಿಸಿಸಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ನಾಯಕ ಸಲೀಮ್ ಅಹಮ್ಮದ್ ಮೊದಲು ವಂದೇ ಮಾತರಂ ಎಂದಿದ್ದಾರೆ. ತಕ್ಷಣ ರೊಚ್ಚಿಗೆದ್ದ ಸಿದ್ದರಾಮಯ್ಯ ಏ ವಂದೇ ಮಾತರಂ ಬೇಡ ಎಂದಿದ್ದಾರೆ. ತಾವಾಡಿದ ಮಾತು ವಿವಾದಕ್ಕೆ ಕಾರಣವಾಗಲಿದೆ ಎಂದು ಅರಿತ ಸಿದ್ದರಾಮಯ್ಯ ಕೆಲ ಹೊತ್ತಿನ ಬಳಿಕ ಹಾಡೋದಾದ್ರೆ ವಂದೇ ಮಾತರಂ ಹಾಡ್ರಪ್ಪ ಎಂದಿದ್ದಾರೆ. ಇಷ್ಟೇ ಅಲ್ಲ ಸಿದ್ದರಾಮಯ್ಯ ಹಾಡಬೇಡ ಅಂತ ಹೇಳಿದ ಎಂದಾಗುತ್ತೆ ಎಂದಿದ್ದಾರೆ. ಸಿದ್ದು ಮಾತಿನ ಬಳಿಕ ಕಾಂಗ್ರೆಸ್ ನಾಯಕರು ಅನಿವಾರ್ಯವಾಗಿ ವಂದೇ ಮಾತರಂ ಹಾಡಿದ್ದಾರೆ. ಇತ್ತ ಸಿದ್ದರಾಮಯ್ಯ ವಂದೇ ಮಾತರಂ ಹಾಡಿನ ವೇಳೆ ಎದ್ದು ನಿಂತರು. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more