Jul 23, 2020, 7:36 PM IST
ಬೆಂಗಳೂರು (ಜು. 23) ಕೊರೋನಾಕ್ಕೆ ಸಂಬಂಧಿಸಿ ವೈದ್ಯಕೀಯ ಸಾಮಗ್ರಿ ಖರೀದಿ ವಿಚಾರದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಆರೋಪಕ್ಕೆ ಸಂಬಂಧಿಸಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
ಭ್ರಷ್ಟಾಚಾರದ ವಾಸನೆ ಬರ್ತಿದೆ ಅಂದರೆ ಸುಮ್ಮನೆ ಕೂರಬೇಕಾ?
ದಾಖಲೆಗಳನ್ನು ಕಾಂಗ್ರೆಸ್ ಸಿದ್ಧ ಮಾಡಿಲ್ಲ, ಸರ್ಕಾರದ ವಿವಿಧ ಇಲಾಖೆಗಳ ಮೂಲಕವೇ ಈ ದಾಖಲೆ ತರಿಸಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ನಾಯಕ ವಿಎಎಸ್ ಉಗ್ರಪ್ಪ ತಿಳಿಸಿದ್ದಾರೆ. ಈ ಶತಮಾನದ ಅತಿದೊಡ್ಡ ಹಗರಣ ಎಂದು ಉಗ್ರಪ್ಪ ವ್ಯಾಖ್ಯಾನಿಸಿದ್ದಾರೆ.