ಕರಾವಳಿಯ ಮೋದಿ ಹವಾಗೆ ಕಾಂಗ್ರೆಸ್ ಠಕ್ಕರ್ ಕೊಡುತ್ತಾ? ಖರ್ಗೆ ಸೂಚನೆಯಂತೆ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶ

ಕರಾವಳಿಯ ಮೋದಿ ಹವಾಗೆ ಕಾಂಗ್ರೆಸ್ ಠಕ್ಕರ್ ಕೊಡುತ್ತಾ? ಖರ್ಗೆ ಸೂಚನೆಯಂತೆ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶ

Published : Feb 17, 2024, 12:05 PM ISTUpdated : Feb 17, 2024, 12:06 PM IST

ಮಂಗಳೂರಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣಾ ಸಮಾವೇಶ
ಕರಾವಳಿಯ ಮೋದಿ ಹವಾಗೆ ಕಾಂಗ್ರೆಸ್ ಠಕ್ಕರ್ ಕೊಡುತ್ತಾ..?
ಖರ್ಗೆ ಸೂಚನೆಯಂತೆ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶ

ಬಿಜೆಪಿ ಭದ್ರಕೋಟೆಯಿಂದಲೇ ಕಾಂಗ್ರೆಸ್ ಲೋಕಸಭೆಗೆ ಕಹಳೆ ಮೊಳಗಿಸಿದೆ. ಮಂಗಳೂರಿನಿಂದಲೇ(Mangalore) ಲೋಕಸಭಾ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ. ಕೇಸರಿ(BJP) ಪಡೆಯ ಭದ್ರ ಕೋಟೆಯಲ್ಲಿ ಕೈ ಪಡೆ  ಶಕ್ತಿ ಪ್ರದರ್ಶನ ಮಾಡಲು ಸಜ್ಜಾಗಿದೆ. ಮಂಗಳೂರಲ್ಲಿ ಕಾಂಗ್ರೆಸ್(Congress) ಲೋಕಸಭಾ ಚುನಾವಣಾ ಸಮಾವೇಶ ನಡೆಸಲು ಮುಂದಾಗಿದೆ. ಕರಾವಳಿಯ ಮೋದಿ ಹವಾಗೆ ಕಾಂಗ್ರೆಸ್ ಠಕ್ಕರ್ ಕೊಡಲು ಮುಂದಾಗಿದೆ. ಮಲ್ಲಿಕಾರ್ಜುನ ಖರ್ಗೆ(Mallikarjuna kharge) ಸೂಚನೆಯಂತೆ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶ ನಡೆಯುತ್ತಿದೆ. ರಾಜ್ಯಾದ್ಯಂತ ಸುಮಾರು 1 ಲಕ್ಷ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ದೇಶದ ಪ್ರತೀ ರಾಜ್ಯದ ಒಂದು ಜಿಲ್ಲೆಯಲ್ಲಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕದಲ್ಲಿ ಮಂಗಳೂರನ್ನೇ ಆಯ್ಕೆ ಮಾಡಿದ ಕೈ ನಾಯಕರು. ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಲೋಕಸಭೆ ಚುನಾವಣೆಗೆ ಕಾರ್ಯಕರ್ತರ ಸಜ್ಜುಗೊಳಿಸಲು ಸಮಾವೇಶ ನಡೆಸಲಾಗುತ್ತಿದೆ. ಎಐಸಿಸಿ ಅಧ್ಯಕ್ಷ ಖರ್ಗೆ, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆಶಿ ಭಾಗಿಯಾಗಲಿದ್ದಾರೆ. ಸಚಿವರು, ಸಂಸದರು, ಶಾಸಕರು, ಪದಾಧಿಕಾರಿಗಳು ಭಾಗಿಯಾಗಲಿದ್ದು, ಮೊದಲ‌ ಚುನಾವಣಾ ಸಮಾವೇಶದಲ್ಲಿ ಮುಂಚೂಣಿ ನಾಯಕರಿಗೆ ಸಂದೇಶ ರವಾನಿಸಲಿದ್ದಾರೆ. ಲೋಕಸಭಾ ಚುನಾವಣೆ ಎದುರಿಸಲು ನಾಯಕರಿಂದ ಸಂದೇಶ ಬರಲಿದೆ. ಕಾರ್ಯಕರ್ತರ ಶಕ್ತಿ ಪ್ರದರ್ಶನದ ಮೂಲಕ ಚುನಾವಣೆಗೆ ಸಿದ್ಧರಾಗಲು ಕರೆ. 

ಇದನ್ನೂ ವೀಕ್ಷಿಸಿ: ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ: ರಾಜೀವ್ ಚಂದ್ರಶೇಖರ್

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more