ಕರಾವಳಿಯ ಮೋದಿ ಹವಾಗೆ ಕಾಂಗ್ರೆಸ್ ಠಕ್ಕರ್ ಕೊಡುತ್ತಾ? ಖರ್ಗೆ ಸೂಚನೆಯಂತೆ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶ

ಕರಾವಳಿಯ ಮೋದಿ ಹವಾಗೆ ಕಾಂಗ್ರೆಸ್ ಠಕ್ಕರ್ ಕೊಡುತ್ತಾ? ಖರ್ಗೆ ಸೂಚನೆಯಂತೆ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶ

Published : Feb 17, 2024, 12:05 PM ISTUpdated : Feb 17, 2024, 12:06 PM IST

ಮಂಗಳೂರಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣಾ ಸಮಾವೇಶ
ಕರಾವಳಿಯ ಮೋದಿ ಹವಾಗೆ ಕಾಂಗ್ರೆಸ್ ಠಕ್ಕರ್ ಕೊಡುತ್ತಾ..?
ಖರ್ಗೆ ಸೂಚನೆಯಂತೆ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶ

ಬಿಜೆಪಿ ಭದ್ರಕೋಟೆಯಿಂದಲೇ ಕಾಂಗ್ರೆಸ್ ಲೋಕಸಭೆಗೆ ಕಹಳೆ ಮೊಳಗಿಸಿದೆ. ಮಂಗಳೂರಿನಿಂದಲೇ(Mangalore) ಲೋಕಸಭಾ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ. ಕೇಸರಿ(BJP) ಪಡೆಯ ಭದ್ರ ಕೋಟೆಯಲ್ಲಿ ಕೈ ಪಡೆ  ಶಕ್ತಿ ಪ್ರದರ್ಶನ ಮಾಡಲು ಸಜ್ಜಾಗಿದೆ. ಮಂಗಳೂರಲ್ಲಿ ಕಾಂಗ್ರೆಸ್(Congress) ಲೋಕಸಭಾ ಚುನಾವಣಾ ಸಮಾವೇಶ ನಡೆಸಲು ಮುಂದಾಗಿದೆ. ಕರಾವಳಿಯ ಮೋದಿ ಹವಾಗೆ ಕಾಂಗ್ರೆಸ್ ಠಕ್ಕರ್ ಕೊಡಲು ಮುಂದಾಗಿದೆ. ಮಲ್ಲಿಕಾರ್ಜುನ ಖರ್ಗೆ(Mallikarjuna kharge) ಸೂಚನೆಯಂತೆ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶ ನಡೆಯುತ್ತಿದೆ. ರಾಜ್ಯಾದ್ಯಂತ ಸುಮಾರು 1 ಲಕ್ಷ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ದೇಶದ ಪ್ರತೀ ರಾಜ್ಯದ ಒಂದು ಜಿಲ್ಲೆಯಲ್ಲಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕದಲ್ಲಿ ಮಂಗಳೂರನ್ನೇ ಆಯ್ಕೆ ಮಾಡಿದ ಕೈ ನಾಯಕರು. ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಲೋಕಸಭೆ ಚುನಾವಣೆಗೆ ಕಾರ್ಯಕರ್ತರ ಸಜ್ಜುಗೊಳಿಸಲು ಸಮಾವೇಶ ನಡೆಸಲಾಗುತ್ತಿದೆ. ಎಐಸಿಸಿ ಅಧ್ಯಕ್ಷ ಖರ್ಗೆ, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆಶಿ ಭಾಗಿಯಾಗಲಿದ್ದಾರೆ. ಸಚಿವರು, ಸಂಸದರು, ಶಾಸಕರು, ಪದಾಧಿಕಾರಿಗಳು ಭಾಗಿಯಾಗಲಿದ್ದು, ಮೊದಲ‌ ಚುನಾವಣಾ ಸಮಾವೇಶದಲ್ಲಿ ಮುಂಚೂಣಿ ನಾಯಕರಿಗೆ ಸಂದೇಶ ರವಾನಿಸಲಿದ್ದಾರೆ. ಲೋಕಸಭಾ ಚುನಾವಣೆ ಎದುರಿಸಲು ನಾಯಕರಿಂದ ಸಂದೇಶ ಬರಲಿದೆ. ಕಾರ್ಯಕರ್ತರ ಶಕ್ತಿ ಪ್ರದರ್ಶನದ ಮೂಲಕ ಚುನಾವಣೆಗೆ ಸಿದ್ಧರಾಗಲು ಕರೆ. 

ಇದನ್ನೂ ವೀಕ್ಷಿಸಿ: ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ: ರಾಜೀವ್ ಚಂದ್ರಶೇಖರ್

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more