ನನಗೆ ಆಗಿರುವ ಅಪಮಾನವನ್ನ ಇನ್ನೂ ಮರೆತಿಲ್ಲ: ಬಿಜೆಪಿ ಸೇರ್ಪಡೆ ವದಂತಿ ಕುರಿತು ಶೆಟ್ಟರ್ ಸ್ಪಷ್ಟನೆ!

ನನಗೆ ಆಗಿರುವ ಅಪಮಾನವನ್ನ ಇನ್ನೂ ಮರೆತಿಲ್ಲ: ಬಿಜೆಪಿ ಸೇರ್ಪಡೆ ವದಂತಿ ಕುರಿತು ಶೆಟ್ಟರ್ ಸ್ಪಷ್ಟನೆ!

Published : Jan 14, 2024, 08:46 PM IST

ವಿಧಾನಸಭೆ ಚುನಾವಣೆಯ ಟಿಕೆಟ್​ ಸಿಗದಿದ್ದಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಸಿಡಿದೆದ್ದು ಕಾಂಗ್ರೆಸ್ ಸೇರಿದ್ದು, ಇದೀಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರು ಮತ್ತೆ ವಾಪಸ್ ಬಿಜೆಪಿಗೆ ವಾಪಸ್ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. 

ಹುಬ್ಬಳ್ಳಿ (ಜ.14): ವಿಧಾನಸಭೆ ಚುನಾವಣೆಯ ಟಿಕೆಟ್​ ಸಿಗದಿದ್ದಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಸಿಡಿದೆದ್ದು ಕಾಂಗ್ರೆಸ್ ಸೇರಿದ್ದು, ಇದೀಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರು ಮತ್ತೆ ವಾಪಸ್ ಬಿಜೆಪಿಗೆ ವಾಪಸ್ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಜಗದೀಶ್ ಶೆಟ್ಟರ್​ ಪ್ರತಿಕ್ರಿಯಿಸಿ, ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬುದು ಹಲವು ನಾಯಕರ ಒತ್ತಾಸೆ. ಆದ್ರೆ ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು. ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂದು ಹಲವು ನಾಯಕರ ಒತ್ತಾಸೆಯಾಗಿದೆ. ನನಗೆ ಆಗಿರೋ ಅಪಮಾನವನ್ನು ನಾನು ಇನ್ನೂ ಮರೆತಿಲ್ಲ. ನಾನು ಬಿಜೆಪಿ ತೊರೆದ ನಂತರ ಆಗಿರುವ ಹಾನಿ ಬಗ್ಗೆ ಅವರಿಗೆ ಮನವರಿಕೆಯಾಗಿದೆ. ಈ ನಿಟ್ಟಿನಲ್ಲಿ ಕೆಲವರು ನನ್ನನ್ನು ವಾಪಸ್ ಕರೆತರುವ ಪ್ರಯತ್ನದಲ್ಲಿ ಇದ್ದಾರೆ. ಆದರೆ ಹಲವಾರು ನಾಯಕರು ವಾಪಸ್ ತರುವಂತೆ ಒತ್ತಡ ಹಾಕ್ತಿರೋ ಮಾಹಿತಿ ಇದೆ. ಯಾರು ಏನೇ ಪ್ರಯತ್ನ ಮಾಡಿದರೂ ನಾನು ಬಿಜೆಪಿಗೆ ವಾಪಾಸ್ಸಾಗಲ್ಲ. ಯಾವುದೇ ಕಾರಣಕ್ಕೂ ನಾನು ಬಿಜೆಪಿಗೆ ಮತ್ತೆ ವಾಪಸಾಗುವುದಿಲ್ಲ. ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more