ನನಗೆ ಆಗಿರುವ ಅಪಮಾನವನ್ನ ಇನ್ನೂ ಮರೆತಿಲ್ಲ: ಬಿಜೆಪಿ ಸೇರ್ಪಡೆ ವದಂತಿ ಕುರಿತು ಶೆಟ್ಟರ್ ಸ್ಪಷ್ಟನೆ!

ನನಗೆ ಆಗಿರುವ ಅಪಮಾನವನ್ನ ಇನ್ನೂ ಮರೆತಿಲ್ಲ: ಬಿಜೆಪಿ ಸೇರ್ಪಡೆ ವದಂತಿ ಕುರಿತು ಶೆಟ್ಟರ್ ಸ್ಪಷ್ಟನೆ!

Published : Jan 14, 2024, 08:46 PM IST

ವಿಧಾನಸಭೆ ಚುನಾವಣೆಯ ಟಿಕೆಟ್​ ಸಿಗದಿದ್ದಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಸಿಡಿದೆದ್ದು ಕಾಂಗ್ರೆಸ್ ಸೇರಿದ್ದು, ಇದೀಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರು ಮತ್ತೆ ವಾಪಸ್ ಬಿಜೆಪಿಗೆ ವಾಪಸ್ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. 

ಹುಬ್ಬಳ್ಳಿ (ಜ.14): ವಿಧಾನಸಭೆ ಚುನಾವಣೆಯ ಟಿಕೆಟ್​ ಸಿಗದಿದ್ದಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಸಿಡಿದೆದ್ದು ಕಾಂಗ್ರೆಸ್ ಸೇರಿದ್ದು, ಇದೀಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರು ಮತ್ತೆ ವಾಪಸ್ ಬಿಜೆಪಿಗೆ ವಾಪಸ್ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಜಗದೀಶ್ ಶೆಟ್ಟರ್​ ಪ್ರತಿಕ್ರಿಯಿಸಿ, ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬುದು ಹಲವು ನಾಯಕರ ಒತ್ತಾಸೆ. ಆದ್ರೆ ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು. ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂದು ಹಲವು ನಾಯಕರ ಒತ್ತಾಸೆಯಾಗಿದೆ. ನನಗೆ ಆಗಿರೋ ಅಪಮಾನವನ್ನು ನಾನು ಇನ್ನೂ ಮರೆತಿಲ್ಲ. ನಾನು ಬಿಜೆಪಿ ತೊರೆದ ನಂತರ ಆಗಿರುವ ಹಾನಿ ಬಗ್ಗೆ ಅವರಿಗೆ ಮನವರಿಕೆಯಾಗಿದೆ. ಈ ನಿಟ್ಟಿನಲ್ಲಿ ಕೆಲವರು ನನ್ನನ್ನು ವಾಪಸ್ ಕರೆತರುವ ಪ್ರಯತ್ನದಲ್ಲಿ ಇದ್ದಾರೆ. ಆದರೆ ಹಲವಾರು ನಾಯಕರು ವಾಪಸ್ ತರುವಂತೆ ಒತ್ತಡ ಹಾಕ್ತಿರೋ ಮಾಹಿತಿ ಇದೆ. ಯಾರು ಏನೇ ಪ್ರಯತ್ನ ಮಾಡಿದರೂ ನಾನು ಬಿಜೆಪಿಗೆ ವಾಪಾಸ್ಸಾಗಲ್ಲ. ಯಾವುದೇ ಕಾರಣಕ್ಕೂ ನಾನು ಬಿಜೆಪಿಗೆ ಮತ್ತೆ ವಾಪಸಾಗುವುದಿಲ್ಲ. ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more