News Hour: ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಯ್ತಾ 3ನೇ ಪವರ್‌ ಸೆಂಟರ್‌!

News Hour: ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಯ್ತಾ 3ನೇ ಪವರ್‌ ಸೆಂಟರ್‌!

Published : Nov 07, 2022, 10:53 PM IST

ಈವರೆಗೂ ಸಿದ್ಧರಾಮಯ್ಯ ಬಣ, ಡಿಕೆ ಶಿವಕುಮಾರ್‌ ಬಣದ ನಡುವೆ ಗುದ್ದಾಡುತ್ತಿದ್ದ ಕಾರ್ಯಕರ್ತರಿಗೆ ಈಗ ಮತ್ತೊಂದು ಬಣದ ಬಿಸಿ ಎದುರಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಣ ರಾಜ್ಯ ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಗಿರುವಂತೆ ಕಂಡಿದೆ.
 

ಬೆಂಗಳೂರು (ನ.7): ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೊಂದು ಶಕ್ತಿ ಕೇಂದ್ರ ಸೃಷ್ಟಿ ಆಗಿದೆಯೇ ಎನ್ನುವ ಅನುಮಾನ ಕಾಡಿದೆ. ಈವರೆಗೂ ಸಿದ್ದರಾಮಯ್ಯ ಬಣ,ಶಿವಕುಮಾರ್ ಬಣದ ನಡುವೆ ಕಾರ್ಯಕರ್ತರು ಬಡಿದಾಡಿಕೊಳ್ಳುತ್ತಿದ್ದ ನಡುವೆ ಈಗ ಖರ್ಗೆ ಬಣ ಹುಟ್ಟಿಕೊಂಡಿರುವ ಸಾಧ್ಯತೆ ಕಂಡಿದೆ. ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗ್ತಿದ್ದಂತೆಯೇ ರಾಜ್ಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ.

ಖರ್ಗೆ ಭೇಟಿ ಮಾಡಿ ಹಿರಿಯ ನಾಯಕರು ಟಿಕೆಟ್‌ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಈಗಾಗಲೇ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ‘ನಾನು ಅರ್ಜಿ ಹಾಕ್ತೀನಿ, ತಮ್ಮ ಪುತ್ರನೂ ಅರ್ಜಿ ಹಾಕ್ತಾನೆ..!’ ಇಬ್ಬರಿಗೂ ಅವಕಾಶ ಕೊಡಿ ಎಂದು ಖರ್ಗೆ ಎದುರು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

Karnataka Election 2023: ಸಿದ್ದರಾಮಯ್ಯಗೆ ಕ್ಷೇತ್ರ ಯಾವುದಯ್ಯ ಅನ್ನೋದೆ ಟೆನ್ಷನ್‌?

ಮಾರ್ಗರೆಟ್ ಆಳ್ವಾ, ಅಲ್ಲಂ ವೀರಭದ್ರಪ್ಪ ಸೇರಿ ಹಲವರ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಶುಭಾಶಯ ಕೋರುತ್ತಲೇ ಮುಂದಿನ ವಿಧಾನಸಭೆ ಚುನಾವಣೆಗೆ ನಾಯಕರು ಟಿಕೆಟ್‌ ಬೇಡಿಕೆ ಇಟ್ಟಿದ್ದಾರೆ. ಈ ನಡುವೆ ಶೇ.50 ಯುವಕರಿಗೆ ಟಿಕೆಟ್ ಎಂದು ಈಗಾಗಲೇ ಖರ್ಗೆ ಘೋಷಣೆ ಮಾಡಿದ್ದಾಗಿದೆ. ಹೀಗಾಗಿ ಹಿರಿಯ ನಾಯಕರಿಂದಲೂ ಖರ್ಗೆ ಭೇಟಿ ಹಾಗೂ ಮನವಿ ನೀಡುವ ಕೆಲಸಗಳು ನಡೆಯುತ್ತಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more