News Hour: ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಯ್ತಾ 3ನೇ ಪವರ್‌ ಸೆಂಟರ್‌!

News Hour: ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಯ್ತಾ 3ನೇ ಪವರ್‌ ಸೆಂಟರ್‌!

Published : Nov 07, 2022, 10:53 PM IST

ಈವರೆಗೂ ಸಿದ್ಧರಾಮಯ್ಯ ಬಣ, ಡಿಕೆ ಶಿವಕುಮಾರ್‌ ಬಣದ ನಡುವೆ ಗುದ್ದಾಡುತ್ತಿದ್ದ ಕಾರ್ಯಕರ್ತರಿಗೆ ಈಗ ಮತ್ತೊಂದು ಬಣದ ಬಿಸಿ ಎದುರಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಣ ರಾಜ್ಯ ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಗಿರುವಂತೆ ಕಂಡಿದೆ.
 

ಬೆಂಗಳೂರು (ನ.7): ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೊಂದು ಶಕ್ತಿ ಕೇಂದ್ರ ಸೃಷ್ಟಿ ಆಗಿದೆಯೇ ಎನ್ನುವ ಅನುಮಾನ ಕಾಡಿದೆ. ಈವರೆಗೂ ಸಿದ್ದರಾಮಯ್ಯ ಬಣ,ಶಿವಕುಮಾರ್ ಬಣದ ನಡುವೆ ಕಾರ್ಯಕರ್ತರು ಬಡಿದಾಡಿಕೊಳ್ಳುತ್ತಿದ್ದ ನಡುವೆ ಈಗ ಖರ್ಗೆ ಬಣ ಹುಟ್ಟಿಕೊಂಡಿರುವ ಸಾಧ್ಯತೆ ಕಂಡಿದೆ. ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗ್ತಿದ್ದಂತೆಯೇ ರಾಜ್ಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ.

ಖರ್ಗೆ ಭೇಟಿ ಮಾಡಿ ಹಿರಿಯ ನಾಯಕರು ಟಿಕೆಟ್‌ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಈಗಾಗಲೇ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ‘ನಾನು ಅರ್ಜಿ ಹಾಕ್ತೀನಿ, ತಮ್ಮ ಪುತ್ರನೂ ಅರ್ಜಿ ಹಾಕ್ತಾನೆ..!’ ಇಬ್ಬರಿಗೂ ಅವಕಾಶ ಕೊಡಿ ಎಂದು ಖರ್ಗೆ ಎದುರು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

Karnataka Election 2023: ಸಿದ್ದರಾಮಯ್ಯಗೆ ಕ್ಷೇತ್ರ ಯಾವುದಯ್ಯ ಅನ್ನೋದೆ ಟೆನ್ಷನ್‌?

ಮಾರ್ಗರೆಟ್ ಆಳ್ವಾ, ಅಲ್ಲಂ ವೀರಭದ್ರಪ್ಪ ಸೇರಿ ಹಲವರ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಶುಭಾಶಯ ಕೋರುತ್ತಲೇ ಮುಂದಿನ ವಿಧಾನಸಭೆ ಚುನಾವಣೆಗೆ ನಾಯಕರು ಟಿಕೆಟ್‌ ಬೇಡಿಕೆ ಇಟ್ಟಿದ್ದಾರೆ. ಈ ನಡುವೆ ಶೇ.50 ಯುವಕರಿಗೆ ಟಿಕೆಟ್ ಎಂದು ಈಗಾಗಲೇ ಖರ್ಗೆ ಘೋಷಣೆ ಮಾಡಿದ್ದಾಗಿದೆ. ಹೀಗಾಗಿ ಹಿರಿಯ ನಾಯಕರಿಂದಲೂ ಖರ್ಗೆ ಭೇಟಿ ಹಾಗೂ ಮನವಿ ನೀಡುವ ಕೆಲಸಗಳು ನಡೆಯುತ್ತಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more