News Hour: ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಯ್ತಾ 3ನೇ ಪವರ್‌ ಸೆಂಟರ್‌!

News Hour: ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಯ್ತಾ 3ನೇ ಪವರ್‌ ಸೆಂಟರ್‌!

Published : Nov 07, 2022, 10:53 PM IST

ಈವರೆಗೂ ಸಿದ್ಧರಾಮಯ್ಯ ಬಣ, ಡಿಕೆ ಶಿವಕುಮಾರ್‌ ಬಣದ ನಡುವೆ ಗುದ್ದಾಡುತ್ತಿದ್ದ ಕಾರ್ಯಕರ್ತರಿಗೆ ಈಗ ಮತ್ತೊಂದು ಬಣದ ಬಿಸಿ ಎದುರಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಣ ರಾಜ್ಯ ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಗಿರುವಂತೆ ಕಂಡಿದೆ.
 

ಬೆಂಗಳೂರು (ನ.7): ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೊಂದು ಶಕ್ತಿ ಕೇಂದ್ರ ಸೃಷ್ಟಿ ಆಗಿದೆಯೇ ಎನ್ನುವ ಅನುಮಾನ ಕಾಡಿದೆ. ಈವರೆಗೂ ಸಿದ್ದರಾಮಯ್ಯ ಬಣ,ಶಿವಕುಮಾರ್ ಬಣದ ನಡುವೆ ಕಾರ್ಯಕರ್ತರು ಬಡಿದಾಡಿಕೊಳ್ಳುತ್ತಿದ್ದ ನಡುವೆ ಈಗ ಖರ್ಗೆ ಬಣ ಹುಟ್ಟಿಕೊಂಡಿರುವ ಸಾಧ್ಯತೆ ಕಂಡಿದೆ. ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗ್ತಿದ್ದಂತೆಯೇ ರಾಜ್ಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ.

ಖರ್ಗೆ ಭೇಟಿ ಮಾಡಿ ಹಿರಿಯ ನಾಯಕರು ಟಿಕೆಟ್‌ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಈಗಾಗಲೇ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ‘ನಾನು ಅರ್ಜಿ ಹಾಕ್ತೀನಿ, ತಮ್ಮ ಪುತ್ರನೂ ಅರ್ಜಿ ಹಾಕ್ತಾನೆ..!’ ಇಬ್ಬರಿಗೂ ಅವಕಾಶ ಕೊಡಿ ಎಂದು ಖರ್ಗೆ ಎದುರು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

Karnataka Election 2023: ಸಿದ್ದರಾಮಯ್ಯಗೆ ಕ್ಷೇತ್ರ ಯಾವುದಯ್ಯ ಅನ್ನೋದೆ ಟೆನ್ಷನ್‌?

ಮಾರ್ಗರೆಟ್ ಆಳ್ವಾ, ಅಲ್ಲಂ ವೀರಭದ್ರಪ್ಪ ಸೇರಿ ಹಲವರ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಶುಭಾಶಯ ಕೋರುತ್ತಲೇ ಮುಂದಿನ ವಿಧಾನಸಭೆ ಚುನಾವಣೆಗೆ ನಾಯಕರು ಟಿಕೆಟ್‌ ಬೇಡಿಕೆ ಇಟ್ಟಿದ್ದಾರೆ. ಈ ನಡುವೆ ಶೇ.50 ಯುವಕರಿಗೆ ಟಿಕೆಟ್ ಎಂದು ಈಗಾಗಲೇ ಖರ್ಗೆ ಘೋಷಣೆ ಮಾಡಿದ್ದಾಗಿದೆ. ಹೀಗಾಗಿ ಹಿರಿಯ ನಾಯಕರಿಂದಲೂ ಖರ್ಗೆ ಭೇಟಿ ಹಾಗೂ ಮನವಿ ನೀಡುವ ಕೆಲಸಗಳು ನಡೆಯುತ್ತಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more