ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: ಕೊಟ್ಟ ಮಾತನ್ನು ಉಳಿಸಿಕೊಂಡ ಸಿದ್ದರಾಮಯ್ಯ!

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: ಕೊಟ್ಟ ಮಾತನ್ನು ಉಳಿಸಿಕೊಂಡ ಸಿದ್ದರಾಮಯ್ಯ!

Published : Apr 06, 2023, 06:12 PM IST

2004ರಲ್ಲಿ ಚುನಾವಣೆಯಲ್ಲಿ ಜೆಡಿಎಸ್‌ನಲ್ಲಿ‌ದ್ದಾಗ ನನಗೆ ಟಿಕೆಟ್ ತಪ್ಪಿಸಿದ್ದ ಸಿದ್ದರಾಮಯ್ಯ ಅವರು ಈಗ ಟಿಕೆಟ್‌ ಕೊಡಿಸಿ ಮಾತು ಉಳಿಸಿಕೊಂಡಿದ್ದಾರೆ ಎಂದು ಬಿ.ಎಲ್. ದೇವರಾಜು ಹೇಳಿದರು.

ಮಂಡ್ಯ (ಏ.06): ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಕೊಟ್ಟ ಮಾತನ್ನು ಸಿದ್ದರಾಮಯ್ಯ ಅವರು ಉಳಿಸಿಕೊಂಡಿದ್ದಾರೆ. 2004ರಲ್ಲಿ ಸಿದ್ದರಾಮಯ್ಯ ಜೆಡಿಎಸ್‌ನಲ್ಲಿ‌ದ್ದಾಗ ಬಿ.ಎಲ್.ದೇವರಾಜುಗೆ ಟಿಕೆಟ್ ತಪ್ಪಿಸಿದ್ದ ಸಿದ್ದರಾಮಯ್ಯ ಈಗ ಟಿಕೆಟ್‌ ಕೊಡಿಸಿ ಮಾತು ಉಳಿಸಿಕೊಂಡಿದ್ದಾರೆ ಎಂದು ಬಿ.ಎಲ್. ದೇವರಾಜು ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಈ ಹಿಂದೆ ಸಿದ್ದರಾಮಯ್ಯ ಅವರು ನಾನು ಜೆಡಿಎಸ್‌ನಲ್ಲಿದ್ದಾಗ ಕೆ.ಆರ್. ಪೇಟೆಯ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಸಿಗುವುದನ್ನು ತಪ್ಪಿಸಿದ್ದರು. ಆಗ ನನಗೆ ಟಿಕೆಟ್‌ ತಪ್ಪಿಸಿ ದಿ.ಕೃಷ್ಣ ಅವರಿಗೆ ಟಿಕೆಟ್‌ ಕೊಡಿಸಿದ್ದರು. ಆಗ ಸ್ವತಃ ದೇವೇಗೌಡರೇ ದೇವರಾಜಿಗೆ ಟಿಕೆಟ್‌ ನೀಡಬೇಕು ಎಂದು ಹೇಳಿಕೊಂಡಿದ್ದರು. ಅಂದಿನಿಂದಲೂ ಅವರು ಅನ್ಯಾಯ ಮಾಡಿದ ಮನೋಭಾವ ಕಾಡುತ್ತಿದೆ ಎಂದು ಹೇಳುತ್ತಾ ಬಂದಿದ್ದರು. ಇತ್ತೀಚೆಗೆ ನೀನು ಕಾಂಗ್ರೆಸ್‌ಗೆ ಬಾರಯ್ಯ ನಿನಗೆ ಟಿಕೆಟ್‌ ಕೊಡಿಸುವುದು ನನ್ನ ಜವಾಬ್ದಾರಿ ಎಂದು ಮಾತನ್ನು ಕೊಟ್ಟಿದ್ದರು. ಅದರಂತೆ 2023ರ ಚುನಾವಣೆಯಲ್ಲಿ ನನಗೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ಟಿಕೆಟ್‌ ಕೊಡಿಸುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ. ಈ ಹಿಂದೆ ಜೆಡಿಎಸ್‌ನಲ್ಲಿ ಇದ್ದಾಗ ಆಗಿದ್ದ ಅನ್ಯಾಯವನ್ನು ಈಗ ಸರಿಪಿಸಿ ನ್ಯಾಯ ಒದಗಿಸಿದ್ದಾರೆ ಎಂದು ಹೇಳಿದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more