ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: ಕೊಟ್ಟ ಮಾತನ್ನು ಉಳಿಸಿಕೊಂಡ ಸಿದ್ದರಾಮಯ್ಯ!

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: ಕೊಟ್ಟ ಮಾತನ್ನು ಉಳಿಸಿಕೊಂಡ ಸಿದ್ದರಾಮಯ್ಯ!

Published : Apr 06, 2023, 06:12 PM IST

2004ರಲ್ಲಿ ಚುನಾವಣೆಯಲ್ಲಿ ಜೆಡಿಎಸ್‌ನಲ್ಲಿ‌ದ್ದಾಗ ನನಗೆ ಟಿಕೆಟ್ ತಪ್ಪಿಸಿದ್ದ ಸಿದ್ದರಾಮಯ್ಯ ಅವರು ಈಗ ಟಿಕೆಟ್‌ ಕೊಡಿಸಿ ಮಾತು ಉಳಿಸಿಕೊಂಡಿದ್ದಾರೆ ಎಂದು ಬಿ.ಎಲ್. ದೇವರಾಜು ಹೇಳಿದರು.

ಮಂಡ್ಯ (ಏ.06): ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಕೊಟ್ಟ ಮಾತನ್ನು ಸಿದ್ದರಾಮಯ್ಯ ಅವರು ಉಳಿಸಿಕೊಂಡಿದ್ದಾರೆ. 2004ರಲ್ಲಿ ಸಿದ್ದರಾಮಯ್ಯ ಜೆಡಿಎಸ್‌ನಲ್ಲಿ‌ದ್ದಾಗ ಬಿ.ಎಲ್.ದೇವರಾಜುಗೆ ಟಿಕೆಟ್ ತಪ್ಪಿಸಿದ್ದ ಸಿದ್ದರಾಮಯ್ಯ ಈಗ ಟಿಕೆಟ್‌ ಕೊಡಿಸಿ ಮಾತು ಉಳಿಸಿಕೊಂಡಿದ್ದಾರೆ ಎಂದು ಬಿ.ಎಲ್. ದೇವರಾಜು ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಈ ಹಿಂದೆ ಸಿದ್ದರಾಮಯ್ಯ ಅವರು ನಾನು ಜೆಡಿಎಸ್‌ನಲ್ಲಿದ್ದಾಗ ಕೆ.ಆರ್. ಪೇಟೆಯ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಸಿಗುವುದನ್ನು ತಪ್ಪಿಸಿದ್ದರು. ಆಗ ನನಗೆ ಟಿಕೆಟ್‌ ತಪ್ಪಿಸಿ ದಿ.ಕೃಷ್ಣ ಅವರಿಗೆ ಟಿಕೆಟ್‌ ಕೊಡಿಸಿದ್ದರು. ಆಗ ಸ್ವತಃ ದೇವೇಗೌಡರೇ ದೇವರಾಜಿಗೆ ಟಿಕೆಟ್‌ ನೀಡಬೇಕು ಎಂದು ಹೇಳಿಕೊಂಡಿದ್ದರು. ಅಂದಿನಿಂದಲೂ ಅವರು ಅನ್ಯಾಯ ಮಾಡಿದ ಮನೋಭಾವ ಕಾಡುತ್ತಿದೆ ಎಂದು ಹೇಳುತ್ತಾ ಬಂದಿದ್ದರು. ಇತ್ತೀಚೆಗೆ ನೀನು ಕಾಂಗ್ರೆಸ್‌ಗೆ ಬಾರಯ್ಯ ನಿನಗೆ ಟಿಕೆಟ್‌ ಕೊಡಿಸುವುದು ನನ್ನ ಜವಾಬ್ದಾರಿ ಎಂದು ಮಾತನ್ನು ಕೊಟ್ಟಿದ್ದರು. ಅದರಂತೆ 2023ರ ಚುನಾವಣೆಯಲ್ಲಿ ನನಗೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ಟಿಕೆಟ್‌ ಕೊಡಿಸುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ. ಈ ಹಿಂದೆ ಜೆಡಿಎಸ್‌ನಲ್ಲಿ ಇದ್ದಾಗ ಆಗಿದ್ದ ಅನ್ಯಾಯವನ್ನು ಈಗ ಸರಿಪಿಸಿ ನ್ಯಾಯ ಒದಗಿಸಿದ್ದಾರೆ ಎಂದು ಹೇಳಿದರು.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more