ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: ಕೊಟ್ಟ ಮಾತನ್ನು ಉಳಿಸಿಕೊಂಡ ಸಿದ್ದರಾಮಯ್ಯ!

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: ಕೊಟ್ಟ ಮಾತನ್ನು ಉಳಿಸಿಕೊಂಡ ಸಿದ್ದರಾಮಯ್ಯ!

Published : Apr 06, 2023, 06:12 PM IST

2004ರಲ್ಲಿ ಚುನಾವಣೆಯಲ್ಲಿ ಜೆಡಿಎಸ್‌ನಲ್ಲಿ‌ದ್ದಾಗ ನನಗೆ ಟಿಕೆಟ್ ತಪ್ಪಿಸಿದ್ದ ಸಿದ್ದರಾಮಯ್ಯ ಅವರು ಈಗ ಟಿಕೆಟ್‌ ಕೊಡಿಸಿ ಮಾತು ಉಳಿಸಿಕೊಂಡಿದ್ದಾರೆ ಎಂದು ಬಿ.ಎಲ್. ದೇವರಾಜು ಹೇಳಿದರು.

ಮಂಡ್ಯ (ಏ.06): ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಕೊಟ್ಟ ಮಾತನ್ನು ಸಿದ್ದರಾಮಯ್ಯ ಅವರು ಉಳಿಸಿಕೊಂಡಿದ್ದಾರೆ. 2004ರಲ್ಲಿ ಸಿದ್ದರಾಮಯ್ಯ ಜೆಡಿಎಸ್‌ನಲ್ಲಿ‌ದ್ದಾಗ ಬಿ.ಎಲ್.ದೇವರಾಜುಗೆ ಟಿಕೆಟ್ ತಪ್ಪಿಸಿದ್ದ ಸಿದ್ದರಾಮಯ್ಯ ಈಗ ಟಿಕೆಟ್‌ ಕೊಡಿಸಿ ಮಾತು ಉಳಿಸಿಕೊಂಡಿದ್ದಾರೆ ಎಂದು ಬಿ.ಎಲ್. ದೇವರಾಜು ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಈ ಹಿಂದೆ ಸಿದ್ದರಾಮಯ್ಯ ಅವರು ನಾನು ಜೆಡಿಎಸ್‌ನಲ್ಲಿದ್ದಾಗ ಕೆ.ಆರ್. ಪೇಟೆಯ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಸಿಗುವುದನ್ನು ತಪ್ಪಿಸಿದ್ದರು. ಆಗ ನನಗೆ ಟಿಕೆಟ್‌ ತಪ್ಪಿಸಿ ದಿ.ಕೃಷ್ಣ ಅವರಿಗೆ ಟಿಕೆಟ್‌ ಕೊಡಿಸಿದ್ದರು. ಆಗ ಸ್ವತಃ ದೇವೇಗೌಡರೇ ದೇವರಾಜಿಗೆ ಟಿಕೆಟ್‌ ನೀಡಬೇಕು ಎಂದು ಹೇಳಿಕೊಂಡಿದ್ದರು. ಅಂದಿನಿಂದಲೂ ಅವರು ಅನ್ಯಾಯ ಮಾಡಿದ ಮನೋಭಾವ ಕಾಡುತ್ತಿದೆ ಎಂದು ಹೇಳುತ್ತಾ ಬಂದಿದ್ದರು. ಇತ್ತೀಚೆಗೆ ನೀನು ಕಾಂಗ್ರೆಸ್‌ಗೆ ಬಾರಯ್ಯ ನಿನಗೆ ಟಿಕೆಟ್‌ ಕೊಡಿಸುವುದು ನನ್ನ ಜವಾಬ್ದಾರಿ ಎಂದು ಮಾತನ್ನು ಕೊಟ್ಟಿದ್ದರು. ಅದರಂತೆ 2023ರ ಚುನಾವಣೆಯಲ್ಲಿ ನನಗೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ಟಿಕೆಟ್‌ ಕೊಡಿಸುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ. ಈ ಹಿಂದೆ ಜೆಡಿಎಸ್‌ನಲ್ಲಿ ಇದ್ದಾಗ ಆಗಿದ್ದ ಅನ್ಯಾಯವನ್ನು ಈಗ ಸರಿಪಿಸಿ ನ್ಯಾಯ ಒದಗಿಸಿದ್ದಾರೆ ಎಂದು ಹೇಳಿದರು.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more