ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: ಕೊಟ್ಟ ಮಾತನ್ನು ಉಳಿಸಿಕೊಂಡ ಸಿದ್ದರಾಮಯ್ಯ!

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: ಕೊಟ್ಟ ಮಾತನ್ನು ಉಳಿಸಿಕೊಂಡ ಸಿದ್ದರಾಮಯ್ಯ!

Published : Apr 06, 2023, 06:12 PM IST

2004ರಲ್ಲಿ ಚುನಾವಣೆಯಲ್ಲಿ ಜೆಡಿಎಸ್‌ನಲ್ಲಿ‌ದ್ದಾಗ ನನಗೆ ಟಿಕೆಟ್ ತಪ್ಪಿಸಿದ್ದ ಸಿದ್ದರಾಮಯ್ಯ ಅವರು ಈಗ ಟಿಕೆಟ್‌ ಕೊಡಿಸಿ ಮಾತು ಉಳಿಸಿಕೊಂಡಿದ್ದಾರೆ ಎಂದು ಬಿ.ಎಲ್. ದೇವರಾಜು ಹೇಳಿದರು.

ಮಂಡ್ಯ (ಏ.06): ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಕೊಟ್ಟ ಮಾತನ್ನು ಸಿದ್ದರಾಮಯ್ಯ ಅವರು ಉಳಿಸಿಕೊಂಡಿದ್ದಾರೆ. 2004ರಲ್ಲಿ ಸಿದ್ದರಾಮಯ್ಯ ಜೆಡಿಎಸ್‌ನಲ್ಲಿ‌ದ್ದಾಗ ಬಿ.ಎಲ್.ದೇವರಾಜುಗೆ ಟಿಕೆಟ್ ತಪ್ಪಿಸಿದ್ದ ಸಿದ್ದರಾಮಯ್ಯ ಈಗ ಟಿಕೆಟ್‌ ಕೊಡಿಸಿ ಮಾತು ಉಳಿಸಿಕೊಂಡಿದ್ದಾರೆ ಎಂದು ಬಿ.ಎಲ್. ದೇವರಾಜು ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಈ ಹಿಂದೆ ಸಿದ್ದರಾಮಯ್ಯ ಅವರು ನಾನು ಜೆಡಿಎಸ್‌ನಲ್ಲಿದ್ದಾಗ ಕೆ.ಆರ್. ಪೇಟೆಯ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಸಿಗುವುದನ್ನು ತಪ್ಪಿಸಿದ್ದರು. ಆಗ ನನಗೆ ಟಿಕೆಟ್‌ ತಪ್ಪಿಸಿ ದಿ.ಕೃಷ್ಣ ಅವರಿಗೆ ಟಿಕೆಟ್‌ ಕೊಡಿಸಿದ್ದರು. ಆಗ ಸ್ವತಃ ದೇವೇಗೌಡರೇ ದೇವರಾಜಿಗೆ ಟಿಕೆಟ್‌ ನೀಡಬೇಕು ಎಂದು ಹೇಳಿಕೊಂಡಿದ್ದರು. ಅಂದಿನಿಂದಲೂ ಅವರು ಅನ್ಯಾಯ ಮಾಡಿದ ಮನೋಭಾವ ಕಾಡುತ್ತಿದೆ ಎಂದು ಹೇಳುತ್ತಾ ಬಂದಿದ್ದರು. ಇತ್ತೀಚೆಗೆ ನೀನು ಕಾಂಗ್ರೆಸ್‌ಗೆ ಬಾರಯ್ಯ ನಿನಗೆ ಟಿಕೆಟ್‌ ಕೊಡಿಸುವುದು ನನ್ನ ಜವಾಬ್ದಾರಿ ಎಂದು ಮಾತನ್ನು ಕೊಟ್ಟಿದ್ದರು. ಅದರಂತೆ 2023ರ ಚುನಾವಣೆಯಲ್ಲಿ ನನಗೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ಟಿಕೆಟ್‌ ಕೊಡಿಸುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ. ಈ ಹಿಂದೆ ಜೆಡಿಎಸ್‌ನಲ್ಲಿ ಇದ್ದಾಗ ಆಗಿದ್ದ ಅನ್ಯಾಯವನ್ನು ಈಗ ಸರಿಪಿಸಿ ನ್ಯಾಯ ಒದಗಿಸಿದ್ದಾರೆ ಎಂದು ಹೇಳಿದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more