KS Eshwarappa Statement : ಅಹೋರಾತ್ರಿ ಧರಣಿ ನಡೆಸಲು ಕಾಂಗ್ರೆಸ್ ಚಿಂತನೆ

KS Eshwarappa Statement : ಅಹೋರಾತ್ರಿ ಧರಣಿ ನಡೆಸಲು ಕಾಂಗ್ರೆಸ್ ಚಿಂತನೆ

Suvarna News   | Asianet News
Published : Feb 16, 2022, 06:57 PM IST

ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ
ಪರಿಷತ್ ಕಲಾಪ ಮುಂದೂಡಿದ್ರೂ ಮುಂದುವರಿದ ಕಾಂಗ್ರೆಸ್ ಪ್ರತಿಭಟನೆ
ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾದ ಕೆ.ಎಸ್.ಈಶ್ವರಪ್ಪ ಹೇಳಿಕೆ

ಬೆಂಗಳೂರು (ಫೆ.16):  ಕೆಂಪು ಕೋಟೆಯ (Red Fort) ಮೇಲೆ ಕೇಸರಿ ಧ್ವಜ ಹಾರಿಸಲಾಗುತ್ತದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ (KS Eshwarappa)ನೀಡಿದ್ದ ವಿವಾದಾತ್ಮಕ ಹೇಳಿಕೆ ವಿಧಾನಸಭೆಯಲ್ಲಿ (Vidhana Sabha) ಕೋಲಾಹಲಕ್ಕೆ ಕಾರಣವಾಯಿತು. ಇದರ ಬೆನಲ್ಲಿಯೇ ಸದನದಲ್ಲಿ ರಾಷ್ಟ್ರಧ್ವಜವನ್ನು (National Flag) ಹಿಡಿದು ಕಾಂಗ್ರೆಸ್ (Congress) ಪ್ರತಿಭಟನೆ ಮಾಡಿದ್ದಕ್ಕೆ ಬಿಜೆಪಿ (BJP) ಆಕ್ರೋಶ ವ್ಯಕ್ತಪಡಿಸಿದ್ದು, ಸದನದಲ್ಲಿ ಪ್ರತಿಭಟನೆಯ ವಿಚಾರಕ್ಕೆ ರಾಷ್ಟ್ರಧ್ವಜವನ್ನು ಬಳಸಿದ್ದು ತಪ್ಪು ಎಂದು ಹೇಳಿದೆ.

ಇನ್ನು ಈಶ್ವರಪ್ಪ ಹೇಳಿಕೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಅಹೋರಾತ್ರಿ ಇದನ್ನು ಮುಂದುವರಿಸಲು ಚಿಂತನೆ ನಡೆಸಿದೆ. ವಿಧಾನ ಪರಿಷತ್ ಕಲಾಪ ನಾಳೆ 11 ಗಂಟೆಗೆ ಮುಂದೂಡಿಕೆಯಾಗಿದ್ದರೂ, ಸದಸ್ಯರು ಸ್ಥಳದಿಂದ ತೆರಳದಂತೆ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ (BK Hariprasad) ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಸೈನ್ಯದಲ್ಲಿ ಸಿಖ್ಖರಿಗೆ ಟರ್ಬನ್‌ಗೆ ಅವಕಾಶ, ಶಾಲೆಗಳಲ್ಲಿ ಹಿಜಾಬ್‌ಗೆ ಯಾಕಿಲ್ಲ.? ವಕೀಲರ ವಾದ
ದೇಶದಲ್ಲಿ ರಾಷ್ಟ್ರಧ್ವಜ ಪ್ರದರ್ಶನಕ್ಕೆ ಒಂದು ಶಿಸ್ತು ಇದೆ. ಬೇಕಾಬಿಟ್ಟಿಯಾಗಿ ಇದರ ಬಳಕೆ ಮಾಡುವಂತಿಲ್ಲ. ರಾಜಕಾರಣಕ್ಕಾಗಿ ಕಾಂಗ್ರೆಸ್ ರಾಷ್ಟ್ರಧ್ವಜವನ್ನು ಬಳಕೆ ಮಾಡುತ್ತಿದೆ' ಎಂದು ಬಿಜೆಪಿ ಆರೋಪ ಮಾಡಿದೆ. ಇದರ ನಡುವೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಕೆಎಸ್ ಈಶ್ವರಪ್ಪ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಆಗ್ರಹ ಮಾಡಿದ್ದಾರೆ. ನಮ್ಮ ಧ್ವಜ, ನಮ್ಮ ರಾಷ್ಟ್ರಗೀತೆಗೆ ಎಲ್ಲರೂ ಗೌರವ ನೀಡಬೇಕು. ಆದರೆ, ಈಶ್ವರಪ್ಪ ದೇಶದ ಧ್ವಜದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಸಿದ್ಧರಾಮಯ್ಯ (Siddaramaiah) ಹೇಳಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more