News Hour: ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಸಕ್ಸಸ್‌!

News Hour: ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಸಕ್ಸಸ್‌!

Published : Aug 03, 2022, 11:35 PM IST

ರಾಜ್ಯ ರಾಜಕೀಯದಲ್ಲಿ ಬಹಳ ಕುತೂಹಲ ಮೂಡಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಿದ್ದರಾಮೋತ್ಸವ ಕಾರ್ಯಕ್ರಮ ಬಹಳ ಸಾಂಗವಾಗಿ ನೆರವೇರಿತು. ಬೃಹತ್‌ ವೇದಿಕೆಯಲ್ಲಿ ಡಿಕೆ ಶಿವಕುಮಾರ್‌ ಹಾಗೂ ಸಿದ್ಧರಾಮಯ್ಯ ಪರಸ್ಪರ ಆಲಿಂಗನ ಮಾಡಿಕೊಳ್ಳುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು.
 

ಬೆಂಗಳೂರು (ಆ.3): ಭಾಗ್ಯಗಳ ಸರದಾರ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ 75ನೇ ಜನ್ಮದಿನಕ್ಕಾಗಿ ನಡೆದ ಬೃಹತ್ ಸಿದ್ಧರಾಮೋತ್ಸವ ಸಮಾರಂಭ ದಾವಣಗೆರೆಯಲ್ಲಿ ಭರ್ಜರಿಯಾಗಿ ಮುಕ್ತಾಯ ಕಂಡಿದೆ. ಅದರೊಂದಿಗೆ ಸಿದ್ಧರಾಮಯ್ಯ ಅವರ ಶಕ್ತಿ ಪ್ರದರ್ಶನ ಯಶಸ್ವಿಯಾಗಿದೆ. ವೇದಿಕೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ 150ಕ್ಕೂ ಅಧಿಕ ಮಂದಿಗೆ ವ್ಯವಸ್ಥೆ ಮಾಡಲಾಗಿತ್ತು.

ಸಮಾರಂಭದಲ್ಲಿ ಕಡಿಮೆ ಎಂದರೂ ಸಿದ್ಧರಾಮಯ್ಯ ಅವರ ನಾಲ್ಕು ಲಕ್ಷ ಅಭಿಮಾನಿಗಳು ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಬೆಣ್ಣೆನಗರಿ ಗುರುವಾರ ಸಿದ್ಧರಾಮಯ್ಯ ಅವರ ಅಭಿಮಾನಿಗಳಿಂದಲೇ ತುಂಬಿಹೋಗಿತ್ತು. ಆರಂಭದಿಂದಲೂ ಸಿದ್ಧರಾಮೋತ್ಸವ ಎನ್ನುವ ಹೆಸರಿನಿಂದ ಗುರುತಿಸಿಕೊಂಡರೂ, ಸಿದ್ಧರಾಮಯ್ಯ ಮಾತ್ರ ಇದನ್ನು ಅಮೃತ ಮಹೋತ್ಸವ ಎಂದು ಕರೆದಿದ್ದರು. ಜನ ಮೆಚ್ಚಿದ ನಾಯಕನಿಗೆ ಕಂಬಳಿ ಸೇರಿದಂತೆ ವಿವಿಧ ಗಿಫ್ಟ್‌ಗಳನ್ನು ನೀಡಿದ್ದಾರೆ.

Siddaramotsava: ಸೂತಕದ ಮನೆಯಲ್ಲಿ ಸಂಭ್ರಮ ಎಷ್ಟು ಸರಿ: ಸಿ.ಟಿ.ರವಿ ಪ್ರಶ್ನೆ

ಸಿದ್ಧರಾಮಯ್ಯ ಅವರ ಶಕ್ತಿ ಪ್ರದರ್ಶನ ಎಂದು ಗುರುತಿಸಿಕೊಂಡ ವೇದಿಕೆಯಲ್ಲಿಯೇ, ಸಿಎಂ ಕುರ್ಚಿಗಾಗಿ ಫೈಟ್‌ ಮಾಡುತ್ತಿರುವ ಡಿಕೆ ಶಿವಕುಮಾರ್‌ ಅವರನ್ನು ಆಲಂಗಿಸಿಕೊಂಡರು. ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಸೇರಿ ಬಿಜೆಪಿ ಸರ್ಕಾರದ ವಿರುದ್ಧ ಮಾಹಿತ ಪ್ರಹಾರ ನಡೆಸಿದರು.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more