News Hour: ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಸಕ್ಸಸ್‌!

News Hour: ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಸಕ್ಸಸ್‌!

Published : Aug 03, 2022, 11:35 PM IST

ರಾಜ್ಯ ರಾಜಕೀಯದಲ್ಲಿ ಬಹಳ ಕುತೂಹಲ ಮೂಡಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಿದ್ದರಾಮೋತ್ಸವ ಕಾರ್ಯಕ್ರಮ ಬಹಳ ಸಾಂಗವಾಗಿ ನೆರವೇರಿತು. ಬೃಹತ್‌ ವೇದಿಕೆಯಲ್ಲಿ ಡಿಕೆ ಶಿವಕುಮಾರ್‌ ಹಾಗೂ ಸಿದ್ಧರಾಮಯ್ಯ ಪರಸ್ಪರ ಆಲಿಂಗನ ಮಾಡಿಕೊಳ್ಳುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು.
 

ಬೆಂಗಳೂರು (ಆ.3): ಭಾಗ್ಯಗಳ ಸರದಾರ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ 75ನೇ ಜನ್ಮದಿನಕ್ಕಾಗಿ ನಡೆದ ಬೃಹತ್ ಸಿದ್ಧರಾಮೋತ್ಸವ ಸಮಾರಂಭ ದಾವಣಗೆರೆಯಲ್ಲಿ ಭರ್ಜರಿಯಾಗಿ ಮುಕ್ತಾಯ ಕಂಡಿದೆ. ಅದರೊಂದಿಗೆ ಸಿದ್ಧರಾಮಯ್ಯ ಅವರ ಶಕ್ತಿ ಪ್ರದರ್ಶನ ಯಶಸ್ವಿಯಾಗಿದೆ. ವೇದಿಕೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ 150ಕ್ಕೂ ಅಧಿಕ ಮಂದಿಗೆ ವ್ಯವಸ್ಥೆ ಮಾಡಲಾಗಿತ್ತು.

ಸಮಾರಂಭದಲ್ಲಿ ಕಡಿಮೆ ಎಂದರೂ ಸಿದ್ಧರಾಮಯ್ಯ ಅವರ ನಾಲ್ಕು ಲಕ್ಷ ಅಭಿಮಾನಿಗಳು ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಬೆಣ್ಣೆನಗರಿ ಗುರುವಾರ ಸಿದ್ಧರಾಮಯ್ಯ ಅವರ ಅಭಿಮಾನಿಗಳಿಂದಲೇ ತುಂಬಿಹೋಗಿತ್ತು. ಆರಂಭದಿಂದಲೂ ಸಿದ್ಧರಾಮೋತ್ಸವ ಎನ್ನುವ ಹೆಸರಿನಿಂದ ಗುರುತಿಸಿಕೊಂಡರೂ, ಸಿದ್ಧರಾಮಯ್ಯ ಮಾತ್ರ ಇದನ್ನು ಅಮೃತ ಮಹೋತ್ಸವ ಎಂದು ಕರೆದಿದ್ದರು. ಜನ ಮೆಚ್ಚಿದ ನಾಯಕನಿಗೆ ಕಂಬಳಿ ಸೇರಿದಂತೆ ವಿವಿಧ ಗಿಫ್ಟ್‌ಗಳನ್ನು ನೀಡಿದ್ದಾರೆ.

Siddaramotsava: ಸೂತಕದ ಮನೆಯಲ್ಲಿ ಸಂಭ್ರಮ ಎಷ್ಟು ಸರಿ: ಸಿ.ಟಿ.ರವಿ ಪ್ರಶ್ನೆ

ಸಿದ್ಧರಾಮಯ್ಯ ಅವರ ಶಕ್ತಿ ಪ್ರದರ್ಶನ ಎಂದು ಗುರುತಿಸಿಕೊಂಡ ವೇದಿಕೆಯಲ್ಲಿಯೇ, ಸಿಎಂ ಕುರ್ಚಿಗಾಗಿ ಫೈಟ್‌ ಮಾಡುತ್ತಿರುವ ಡಿಕೆ ಶಿವಕುಮಾರ್‌ ಅವರನ್ನು ಆಲಂಗಿಸಿಕೊಂಡರು. ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಸೇರಿ ಬಿಜೆಪಿ ಸರ್ಕಾರದ ವಿರುದ್ಧ ಮಾಹಿತ ಪ್ರಹಾರ ನಡೆಸಿದರು.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more