ಹೆಜ್ಜೆ ಹೆಜ್ಜೆಗೂ ಬಿಬಿಎಂಪಿ ಗುತ್ತಿಗೆದಾರರು ಯೂಟರ್ನ್: ಕಮಿಷನ್ ದಂಗಲ್‌ನಲ್ಲಿ ದಿನಕ್ಕೊಂದು ಟ್ವಿಸ್ಟ್ !

ಹೆಜ್ಜೆ ಹೆಜ್ಜೆಗೂ ಬಿಬಿಎಂಪಿ ಗುತ್ತಿಗೆದಾರರು ಯೂಟರ್ನ್: ಕಮಿಷನ್ ದಂಗಲ್‌ನಲ್ಲಿ ದಿನಕ್ಕೊಂದು ಟ್ವಿಸ್ಟ್ !

Published : Aug 18, 2023, 10:53 AM IST

ಗುತ್ತಿಗೆದಾರರ ಕಮಿಷನ್ ದಂಗಲ್ನಲ್ಲಿ ದಿನಕ್ಕೊಂದು ಟ್ವಿಸ್ಟ್
ಹೆಜ್ಜೆ ಹೆಜ್ಜೆಗೂ ಬಿಬಿಎಂಪಿ ಗುತ್ತಿಗೆದಾರರು ಯೂಟರ್ನ್..!
ಪೊಲೀಸ್ ವಿಚಾರಣೆಯಲ್ಲೂ ಉಲ್ಟಾ ಹೊಡೆದ ಗುತ್ತಿಗೆದಾರರು

ಬಿಬಿಎಂಪಿ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಗೆ ಕಮಿಷನ್ ಕೇಳುತ್ತಿದ್ದಾರೆ ಅನ್ನೋ ಗಂಭೀರ ಆರೋಪ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು.. ಡಿಕೆಶಿ ಅಧಿಕಾರಿಗಳ ಮೂಲಕ ಕಮಿಷನ್(Commission) ಬೇಡಿಕೆ ಇಡ್ತಿದ್ದಾರೆ ಎಂದು ಗವರ್ನರ್‌ಗೆ ದೂರು ಕೊಟ್ಟಿದ್ದರು. ಅಷ್ಟೇ ಅಲ್ಲ ಗುತ್ತಿಗೆದಾರ(Contractor) ಹೇಮಂತ ಬಹಿರಂಗವಾಗೇ ಡಿಕೆಶಿಗೆ ಅಜ್ಜಯ್ಯನ ಮೇಲೆ ಆಣೆ ಪ್ರಮಾಣಕ್ಕೆ ಆಹ್ವಾನ ಕೊಟ್ಟಿದ್ರು. ಗುತ್ತಿಗೆದಾರರ ಕಮಿಷನ್ ದಂಗಲ್ ಇಲ್ಲಿಗೆ ನಿಂತಿಲ್ಲ. ಮಾಜಿ ಸಿಎಂ ಬಿಸ್‌ವೈ, ಬೊಮ್ಮಾಯಿ ಅವರನ್ನೂ  ಭೇಟಿ ಮಾಡಿದ್ರು. ಇದರ ಬೆನ್ನಲ್ಲೇ ಜೆಡಿಎಸ್, ಬಿಜೆಪಿ(BJP) ನಾಯಕರು ಸಿದ್ದು ಸರ್ಕಾರದ ವಿರುದ್ಧ ಕಮಿಷನ್ ಟೀಕಾಸ್ತ್ರ ಹಿಡಿದು ದಾಳಿಗೆ ಇಳಿದರು. ಯಾವಾಗ ಪ್ರಕರಣದಲ್ಲಿ ರಾಜಕೀಯ ಬಿರುಗಾಳಿ ಏಳ್ತೋ ಗುತ್ತಿಗೆದಾರರು ಯೂಟರ್ನ್ ಹೊಡೆದು ಬಿಟ್ರು. ಹೀಗೆ ಆಗಸ್ಟ್ 14ರಂದು ಗುತ್ತಿಗೆದಾರರು ಯೂಟರ್ನ್ ಹೊಡೆದು ಬಿಟ್ರು.. ನಾವು ಕಮಿಷನ್ ಆರೋಪವನ್ನೇ ಮಾಡಿಲ್ಲ ಎಂದರು. ಈ ಮಧ್ಯೆ ಗುತ್ತಿಗೆದಾರರು ಗವರ್ನರ್‌ಗೆ ಬರೆದ ದೂರಿಗೆ ಪ್ರತಿಯಾಗಿ ಬಿಬಿಎಂಪಿ(BBMP) ಹಣಕಾಸು ವಿಭಾಗದ ಅಪರ ಆಯುಕ್ತ ಮಹಾದೇವ್ ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ಸ್ ಠಾಣೆಗೆ ಪ್ರತಿ ದೂರು ನೀಡಿದ್ದರು. ಗುತ್ತಿಗೆದಾರರು ಬಾಕಿ ಬಿಲ್‌ಗಾಗಿ ಒತ್ತಡ ಹಾಕೋದಲ್ದೆ ರಾಜ್ಯಪಾಲರಿಗೆ ಕೊಟ್ಟ ದೂರಿನಲ್ಲಿ ದಯಾಮರಣಕ್ಕೆ ಮನವಿ ಮಾಡಿದ್ದಾರೆ. ಹೀಗಾಗಿ ದೂರಿನ ಅಸಲಿಯತ್ತು ಪರಿಶೀಲಿಸಿ ಹಾಗೂ ಅಸಲಿ ಸಹಿಗಳೇ ಎಂಬುದನ್ನ ಪರಿಶೀಲಿಸಿ ಎಂದು ಮನವಿ ಮಾಡಿದ್ದರು. ಇದೀಗ ದೂರು ಸ್ವೀಕರಿಸಿದ ಶೇಷಾದ್ರಿಪುರಂ ವಿಭಾಗದ ಎಸಿಪಿ ಪ್ರಕಾಶ್‌ ರೆಡ್ಡಿ ತನಿಖೆಗೆ ಇಳಿದಿದ್ದಾರೆ. ಆದ್ರೆ, ತನಿಖೆ ವೇಳೆಯೂ ಗುತ್ತಿಗೆದಾರರು ಯೂಟರ್ನ್ ಹೊಡೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿಗೆ ಬಿಗ್ ಶಾಕ್ ಕೊಡ್ತಾರಾ ಬಾಂಬೆ ಬಾಯ್ಸ್ ? ಕಾಂಗ್ರೆಸ್‌ಗೆ ವಲಸಿಗ ಶಾಸಕರ ಘರ್‌ವಾಪ್ಸಿ ಬಹುತೇಕ ಫಿಕ್ಸ್ ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more