ಹೆಜ್ಜೆ ಹೆಜ್ಜೆಗೂ ಬಿಬಿಎಂಪಿ ಗುತ್ತಿಗೆದಾರರು ಯೂಟರ್ನ್: ಕಮಿಷನ್ ದಂಗಲ್‌ನಲ್ಲಿ ದಿನಕ್ಕೊಂದು ಟ್ವಿಸ್ಟ್ !

ಹೆಜ್ಜೆ ಹೆಜ್ಜೆಗೂ ಬಿಬಿಎಂಪಿ ಗುತ್ತಿಗೆದಾರರು ಯೂಟರ್ನ್: ಕಮಿಷನ್ ದಂಗಲ್‌ನಲ್ಲಿ ದಿನಕ್ಕೊಂದು ಟ್ವಿಸ್ಟ್ !

Published : Aug 18, 2023, 10:53 AM IST

ಗುತ್ತಿಗೆದಾರರ ಕಮಿಷನ್ ದಂಗಲ್ನಲ್ಲಿ ದಿನಕ್ಕೊಂದು ಟ್ವಿಸ್ಟ್
ಹೆಜ್ಜೆ ಹೆಜ್ಜೆಗೂ ಬಿಬಿಎಂಪಿ ಗುತ್ತಿಗೆದಾರರು ಯೂಟರ್ನ್..!
ಪೊಲೀಸ್ ವಿಚಾರಣೆಯಲ್ಲೂ ಉಲ್ಟಾ ಹೊಡೆದ ಗುತ್ತಿಗೆದಾರರು

ಬಿಬಿಎಂಪಿ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಗೆ ಕಮಿಷನ್ ಕೇಳುತ್ತಿದ್ದಾರೆ ಅನ್ನೋ ಗಂಭೀರ ಆರೋಪ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು.. ಡಿಕೆಶಿ ಅಧಿಕಾರಿಗಳ ಮೂಲಕ ಕಮಿಷನ್(Commission) ಬೇಡಿಕೆ ಇಡ್ತಿದ್ದಾರೆ ಎಂದು ಗವರ್ನರ್‌ಗೆ ದೂರು ಕೊಟ್ಟಿದ್ದರು. ಅಷ್ಟೇ ಅಲ್ಲ ಗುತ್ತಿಗೆದಾರ(Contractor) ಹೇಮಂತ ಬಹಿರಂಗವಾಗೇ ಡಿಕೆಶಿಗೆ ಅಜ್ಜಯ್ಯನ ಮೇಲೆ ಆಣೆ ಪ್ರಮಾಣಕ್ಕೆ ಆಹ್ವಾನ ಕೊಟ್ಟಿದ್ರು. ಗುತ್ತಿಗೆದಾರರ ಕಮಿಷನ್ ದಂಗಲ್ ಇಲ್ಲಿಗೆ ನಿಂತಿಲ್ಲ. ಮಾಜಿ ಸಿಎಂ ಬಿಸ್‌ವೈ, ಬೊಮ್ಮಾಯಿ ಅವರನ್ನೂ  ಭೇಟಿ ಮಾಡಿದ್ರು. ಇದರ ಬೆನ್ನಲ್ಲೇ ಜೆಡಿಎಸ್, ಬಿಜೆಪಿ(BJP) ನಾಯಕರು ಸಿದ್ದು ಸರ್ಕಾರದ ವಿರುದ್ಧ ಕಮಿಷನ್ ಟೀಕಾಸ್ತ್ರ ಹಿಡಿದು ದಾಳಿಗೆ ಇಳಿದರು. ಯಾವಾಗ ಪ್ರಕರಣದಲ್ಲಿ ರಾಜಕೀಯ ಬಿರುಗಾಳಿ ಏಳ್ತೋ ಗುತ್ತಿಗೆದಾರರು ಯೂಟರ್ನ್ ಹೊಡೆದು ಬಿಟ್ರು. ಹೀಗೆ ಆಗಸ್ಟ್ 14ರಂದು ಗುತ್ತಿಗೆದಾರರು ಯೂಟರ್ನ್ ಹೊಡೆದು ಬಿಟ್ರು.. ನಾವು ಕಮಿಷನ್ ಆರೋಪವನ್ನೇ ಮಾಡಿಲ್ಲ ಎಂದರು. ಈ ಮಧ್ಯೆ ಗುತ್ತಿಗೆದಾರರು ಗವರ್ನರ್‌ಗೆ ಬರೆದ ದೂರಿಗೆ ಪ್ರತಿಯಾಗಿ ಬಿಬಿಎಂಪಿ(BBMP) ಹಣಕಾಸು ವಿಭಾಗದ ಅಪರ ಆಯುಕ್ತ ಮಹಾದೇವ್ ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ಸ್ ಠಾಣೆಗೆ ಪ್ರತಿ ದೂರು ನೀಡಿದ್ದರು. ಗುತ್ತಿಗೆದಾರರು ಬಾಕಿ ಬಿಲ್‌ಗಾಗಿ ಒತ್ತಡ ಹಾಕೋದಲ್ದೆ ರಾಜ್ಯಪಾಲರಿಗೆ ಕೊಟ್ಟ ದೂರಿನಲ್ಲಿ ದಯಾಮರಣಕ್ಕೆ ಮನವಿ ಮಾಡಿದ್ದಾರೆ. ಹೀಗಾಗಿ ದೂರಿನ ಅಸಲಿಯತ್ತು ಪರಿಶೀಲಿಸಿ ಹಾಗೂ ಅಸಲಿ ಸಹಿಗಳೇ ಎಂಬುದನ್ನ ಪರಿಶೀಲಿಸಿ ಎಂದು ಮನವಿ ಮಾಡಿದ್ದರು. ಇದೀಗ ದೂರು ಸ್ವೀಕರಿಸಿದ ಶೇಷಾದ್ರಿಪುರಂ ವಿಭಾಗದ ಎಸಿಪಿ ಪ್ರಕಾಶ್‌ ರೆಡ್ಡಿ ತನಿಖೆಗೆ ಇಳಿದಿದ್ದಾರೆ. ಆದ್ರೆ, ತನಿಖೆ ವೇಳೆಯೂ ಗುತ್ತಿಗೆದಾರರು ಯೂಟರ್ನ್ ಹೊಡೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿಗೆ ಬಿಗ್ ಶಾಕ್ ಕೊಡ್ತಾರಾ ಬಾಂಬೆ ಬಾಯ್ಸ್ ? ಕಾಂಗ್ರೆಸ್‌ಗೆ ವಲಸಿಗ ಶಾಸಕರ ಘರ್‌ವಾಪ್ಸಿ ಬಹುತೇಕ ಫಿಕ್ಸ್ ?

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more