ರಾಜ್ಯ ರಾಜಕೀಯದಲ್ಲಿ ಹಾಲಿ, ಮಾಜಿ ಸಿಎಂಗಳ ಭ್ರಷ್ಟಾಚಾರ ಬಡಿದಾಟ!

ರಾಜ್ಯ ರಾಜಕೀಯದಲ್ಲಿ ಹಾಲಿ, ಮಾಜಿ ಸಿಎಂಗಳ ಭ್ರಷ್ಟಾಚಾರ ಬಡಿದಾಟ!

Published : Jan 24, 2023, 11:45 PM IST

ರಾಜ್ಯ ರಾಜಕೀಯದಲ್ಲಿ ಬಿಜೆಪಿ ಭ್ರಷ್ಟಾಚಾರ ಹಾಗೂ ಕಾಂಗ್ರೆಸ್‌ ಭ್ರಷ್ಟಾಚಾರದ ಕೆಸರೆರಚಾಟ ಆರಂಭವಾಗಿದೆ. ಭ್ರಷ್ಟಾಚಾರದ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬಿಜೆಪಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರೆ, ಕಾಂಗ್ರೆಸ್‌ ಕೂಡ ಭರ್ಜರಿಯಾಗಿ ತಿರುಗೇಟು ನೀಡಿದೆ.

ಬೆಂಗಳೂರು (ಜ.24): ರಾಜ್ಯ ರಾಜಕೀಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಭ್ರಷ್ಟಾಚಾರದ ಟಾಕ್‌ವಾರ್‌ ಆರಂಭವಾಗಿದೆ. ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಅಂದು ಲೋಕಾಯುಕ್ತ ಸಂಸ್ಥೆಯನ್ನೇ ಮುಚ್ಚಿದ ಪುಣ್ಯಾತ್ಮರು. ತಮ್ಮ ಕರ್ಮಕಾಂಡ ಮುಚ್ಚಿಕೊಳ್ಳಲು ಲೋಕಾಯುಕ್ತ ಮುಚ್ಚಿ ಹಾಕಿದರು. ಅವರ ಮೇಲೆ 59 ಕೇಸ್ ಇತ್ತು, ಅದಕ್ಕೆ ಸಂಸ್ಥೆಯನ್ನೇ ಬಂದ್‌ ಮಾಡಿದರು ಎಂದು ಆರೋಪಿಸಿದ್ದಾರೆ.

ಬೆಂಗಳೂರನ್ನು ಹಾಳು ಮಾಡಿದವರೇ ಕಾಂಗ್ರೆಸ್ ನಾಯಕರು. ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಹತ್ತು ಹದಿನೈದು ಜನ ಸೇರಿಕೊಂಡು ಪ್ರತಿಭಟನೆ ಮಾಡ್ತಿದ್ದಾರೆ. ನಮ್ಮ ವಿರುದ್ಧ ಆರೋಪಕ್ಕೆ ದಾಖಲೆ ಇದ್ರೆ ಕಾಂಗ್ರೆಸ್‌ ಕೊಡಲಿ. ಲೋಕಾಯುಕ್ತಕ್ಕೆ ದಾಖಲೆ ಕೊಡಲಿ, ತನಿಖೆಯೂ ಆಗಲಿ. ತಮ್ಮ ಕೈಗೆ ಮಸಿ ಅಂಟಿದೆ, ಅದನ್ನು ಅವರು ನೋಡಿಕೊಳ್ಳಲಿ. ಕಾಂಗ್ರೆಸ್ ತಟ್ಟೆಯಲ್ಲಿ ಕತ್ತೆ ಬಿದ್ದಿದೆ ಅದನ್ನು ನೋಡಿಕೊಳ್ಳಲಿ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್‌ನಿಂದ ಬೆಂಗ್ಳೂರು ಹಾಳು: ಸಿಎಂ ಬೊಮ್ಮಾಯಿ

ಇನ್ನೊಂದೆಡೆ ಸಿದ್ಧರಾಮಯ್ಯ ಧಮ್ ಇದ್ದರೆ ಸುಪ್ರೀಂ ಜಡ್ಜ್ ನೇತೃತ್ವದಲ್ಲಿ ತನಿಖೆ ಮಾಡ್ಸಿ. ನಮ್ಮದನ್ನೂ ಕೊಡಿ,ನಿಮ್ಮ 40% ಬಗ್ಗೆಯೂ ತನಿಖೆ ಕೊಡಿ. ಅದಕ್ಕೆ ನಿಮ್ಮತ್ರ ಧಮ್ ಇಲ್ಲ ಎಂದು ಕಿಡಿಕಾರಿದ್ದಾರೆ. ಸುಮ್ನೆ ಹೇಳಿದ್ರೆ ಏನು ಪ್ರಯೋಜನ.. ಸಿಬಿಐಗೂ ಕೊಡಿ. ಹಿಂದೆ ನೀವು ವಿರೋಧ ಪಕ್ಷದಲ್ಲಿ ಇದ್ರಲ್ಲಾ.. ಸುಮ್ಮನಿದ್ದೀರಿ. ತನಿಖೆ ಮಾಡಿಸೋಕೆ ಧಮ್ ಇಲ್ಲ ಎಂದು ಹೇಳಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more