ರಾಜ್ಯ ರಾಜಕೀಯದಲ್ಲಿ ಹಾಲಿ, ಮಾಜಿ ಸಿಎಂಗಳ ಭ್ರಷ್ಟಾಚಾರ ಬಡಿದಾಟ!

ರಾಜ್ಯ ರಾಜಕೀಯದಲ್ಲಿ ಹಾಲಿ, ಮಾಜಿ ಸಿಎಂಗಳ ಭ್ರಷ್ಟಾಚಾರ ಬಡಿದಾಟ!

Published : Jan 24, 2023, 11:45 PM IST

ರಾಜ್ಯ ರಾಜಕೀಯದಲ್ಲಿ ಬಿಜೆಪಿ ಭ್ರಷ್ಟಾಚಾರ ಹಾಗೂ ಕಾಂಗ್ರೆಸ್‌ ಭ್ರಷ್ಟಾಚಾರದ ಕೆಸರೆರಚಾಟ ಆರಂಭವಾಗಿದೆ. ಭ್ರಷ್ಟಾಚಾರದ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬಿಜೆಪಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರೆ, ಕಾಂಗ್ರೆಸ್‌ ಕೂಡ ಭರ್ಜರಿಯಾಗಿ ತಿರುಗೇಟು ನೀಡಿದೆ.

ಬೆಂಗಳೂರು (ಜ.24): ರಾಜ್ಯ ರಾಜಕೀಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಭ್ರಷ್ಟಾಚಾರದ ಟಾಕ್‌ವಾರ್‌ ಆರಂಭವಾಗಿದೆ. ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಅಂದು ಲೋಕಾಯುಕ್ತ ಸಂಸ್ಥೆಯನ್ನೇ ಮುಚ್ಚಿದ ಪುಣ್ಯಾತ್ಮರು. ತಮ್ಮ ಕರ್ಮಕಾಂಡ ಮುಚ್ಚಿಕೊಳ್ಳಲು ಲೋಕಾಯುಕ್ತ ಮುಚ್ಚಿ ಹಾಕಿದರು. ಅವರ ಮೇಲೆ 59 ಕೇಸ್ ಇತ್ತು, ಅದಕ್ಕೆ ಸಂಸ್ಥೆಯನ್ನೇ ಬಂದ್‌ ಮಾಡಿದರು ಎಂದು ಆರೋಪಿಸಿದ್ದಾರೆ.

ಬೆಂಗಳೂರನ್ನು ಹಾಳು ಮಾಡಿದವರೇ ಕಾಂಗ್ರೆಸ್ ನಾಯಕರು. ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಹತ್ತು ಹದಿನೈದು ಜನ ಸೇರಿಕೊಂಡು ಪ್ರತಿಭಟನೆ ಮಾಡ್ತಿದ್ದಾರೆ. ನಮ್ಮ ವಿರುದ್ಧ ಆರೋಪಕ್ಕೆ ದಾಖಲೆ ಇದ್ರೆ ಕಾಂಗ್ರೆಸ್‌ ಕೊಡಲಿ. ಲೋಕಾಯುಕ್ತಕ್ಕೆ ದಾಖಲೆ ಕೊಡಲಿ, ತನಿಖೆಯೂ ಆಗಲಿ. ತಮ್ಮ ಕೈಗೆ ಮಸಿ ಅಂಟಿದೆ, ಅದನ್ನು ಅವರು ನೋಡಿಕೊಳ್ಳಲಿ. ಕಾಂಗ್ರೆಸ್ ತಟ್ಟೆಯಲ್ಲಿ ಕತ್ತೆ ಬಿದ್ದಿದೆ ಅದನ್ನು ನೋಡಿಕೊಳ್ಳಲಿ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್‌ನಿಂದ ಬೆಂಗ್ಳೂರು ಹಾಳು: ಸಿಎಂ ಬೊಮ್ಮಾಯಿ

ಇನ್ನೊಂದೆಡೆ ಸಿದ್ಧರಾಮಯ್ಯ ಧಮ್ ಇದ್ದರೆ ಸುಪ್ರೀಂ ಜಡ್ಜ್ ನೇತೃತ್ವದಲ್ಲಿ ತನಿಖೆ ಮಾಡ್ಸಿ. ನಮ್ಮದನ್ನೂ ಕೊಡಿ,ನಿಮ್ಮ 40% ಬಗ್ಗೆಯೂ ತನಿಖೆ ಕೊಡಿ. ಅದಕ್ಕೆ ನಿಮ್ಮತ್ರ ಧಮ್ ಇಲ್ಲ ಎಂದು ಕಿಡಿಕಾರಿದ್ದಾರೆ. ಸುಮ್ನೆ ಹೇಳಿದ್ರೆ ಏನು ಪ್ರಯೋಜನ.. ಸಿಬಿಐಗೂ ಕೊಡಿ. ಹಿಂದೆ ನೀವು ವಿರೋಧ ಪಕ್ಷದಲ್ಲಿ ಇದ್ರಲ್ಲಾ.. ಸುಮ್ಮನಿದ್ದೀರಿ. ತನಿಖೆ ಮಾಡಿಸೋಕೆ ಧಮ್ ಇಲ್ಲ ಎಂದು ಹೇಳಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more