ರಾಜ್ಯ ರಾಜಕೀಯದಲ್ಲಿ ಹಾಲಿ, ಮಾಜಿ ಸಿಎಂಗಳ ಭ್ರಷ್ಟಾಚಾರ ಬಡಿದಾಟ!

ರಾಜ್ಯ ರಾಜಕೀಯದಲ್ಲಿ ಹಾಲಿ, ಮಾಜಿ ಸಿಎಂಗಳ ಭ್ರಷ್ಟಾಚಾರ ಬಡಿದಾಟ!

Published : Jan 24, 2023, 11:45 PM IST

ರಾಜ್ಯ ರಾಜಕೀಯದಲ್ಲಿ ಬಿಜೆಪಿ ಭ್ರಷ್ಟಾಚಾರ ಹಾಗೂ ಕಾಂಗ್ರೆಸ್‌ ಭ್ರಷ್ಟಾಚಾರದ ಕೆಸರೆರಚಾಟ ಆರಂಭವಾಗಿದೆ. ಭ್ರಷ್ಟಾಚಾರದ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬಿಜೆಪಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರೆ, ಕಾಂಗ್ರೆಸ್‌ ಕೂಡ ಭರ್ಜರಿಯಾಗಿ ತಿರುಗೇಟು ನೀಡಿದೆ.

ಬೆಂಗಳೂರು (ಜ.24): ರಾಜ್ಯ ರಾಜಕೀಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಭ್ರಷ್ಟಾಚಾರದ ಟಾಕ್‌ವಾರ್‌ ಆರಂಭವಾಗಿದೆ. ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಅಂದು ಲೋಕಾಯುಕ್ತ ಸಂಸ್ಥೆಯನ್ನೇ ಮುಚ್ಚಿದ ಪುಣ್ಯಾತ್ಮರು. ತಮ್ಮ ಕರ್ಮಕಾಂಡ ಮುಚ್ಚಿಕೊಳ್ಳಲು ಲೋಕಾಯುಕ್ತ ಮುಚ್ಚಿ ಹಾಕಿದರು. ಅವರ ಮೇಲೆ 59 ಕೇಸ್ ಇತ್ತು, ಅದಕ್ಕೆ ಸಂಸ್ಥೆಯನ್ನೇ ಬಂದ್‌ ಮಾಡಿದರು ಎಂದು ಆರೋಪಿಸಿದ್ದಾರೆ.

ಬೆಂಗಳೂರನ್ನು ಹಾಳು ಮಾಡಿದವರೇ ಕಾಂಗ್ರೆಸ್ ನಾಯಕರು. ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಹತ್ತು ಹದಿನೈದು ಜನ ಸೇರಿಕೊಂಡು ಪ್ರತಿಭಟನೆ ಮಾಡ್ತಿದ್ದಾರೆ. ನಮ್ಮ ವಿರುದ್ಧ ಆರೋಪಕ್ಕೆ ದಾಖಲೆ ಇದ್ರೆ ಕಾಂಗ್ರೆಸ್‌ ಕೊಡಲಿ. ಲೋಕಾಯುಕ್ತಕ್ಕೆ ದಾಖಲೆ ಕೊಡಲಿ, ತನಿಖೆಯೂ ಆಗಲಿ. ತಮ್ಮ ಕೈಗೆ ಮಸಿ ಅಂಟಿದೆ, ಅದನ್ನು ಅವರು ನೋಡಿಕೊಳ್ಳಲಿ. ಕಾಂಗ್ರೆಸ್ ತಟ್ಟೆಯಲ್ಲಿ ಕತ್ತೆ ಬಿದ್ದಿದೆ ಅದನ್ನು ನೋಡಿಕೊಳ್ಳಲಿ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್‌ನಿಂದ ಬೆಂಗ್ಳೂರು ಹಾಳು: ಸಿಎಂ ಬೊಮ್ಮಾಯಿ

ಇನ್ನೊಂದೆಡೆ ಸಿದ್ಧರಾಮಯ್ಯ ಧಮ್ ಇದ್ದರೆ ಸುಪ್ರೀಂ ಜಡ್ಜ್ ನೇತೃತ್ವದಲ್ಲಿ ತನಿಖೆ ಮಾಡ್ಸಿ. ನಮ್ಮದನ್ನೂ ಕೊಡಿ,ನಿಮ್ಮ 40% ಬಗ್ಗೆಯೂ ತನಿಖೆ ಕೊಡಿ. ಅದಕ್ಕೆ ನಿಮ್ಮತ್ರ ಧಮ್ ಇಲ್ಲ ಎಂದು ಕಿಡಿಕಾರಿದ್ದಾರೆ. ಸುಮ್ನೆ ಹೇಳಿದ್ರೆ ಏನು ಪ್ರಯೋಜನ.. ಸಿಬಿಐಗೂ ಕೊಡಿ. ಹಿಂದೆ ನೀವು ವಿರೋಧ ಪಕ್ಷದಲ್ಲಿ ಇದ್ರಲ್ಲಾ.. ಸುಮ್ಮನಿದ್ದೀರಿ. ತನಿಖೆ ಮಾಡಿಸೋಕೆ ಧಮ್ ಇಲ್ಲ ಎಂದು ಹೇಳಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more