ರಾಜ್ಯ ರಾಜಕೀಯದಲ್ಲಿ ಹಾಲಿ, ಮಾಜಿ ಸಿಎಂಗಳ ಭ್ರಷ್ಟಾಚಾರ ಬಡಿದಾಟ!

ರಾಜ್ಯ ರಾಜಕೀಯದಲ್ಲಿ ಹಾಲಿ, ಮಾಜಿ ಸಿಎಂಗಳ ಭ್ರಷ್ಟಾಚಾರ ಬಡಿದಾಟ!

Published : Jan 24, 2023, 11:45 PM IST

ರಾಜ್ಯ ರಾಜಕೀಯದಲ್ಲಿ ಬಿಜೆಪಿ ಭ್ರಷ್ಟಾಚಾರ ಹಾಗೂ ಕಾಂಗ್ರೆಸ್‌ ಭ್ರಷ್ಟಾಚಾರದ ಕೆಸರೆರಚಾಟ ಆರಂಭವಾಗಿದೆ. ಭ್ರಷ್ಟಾಚಾರದ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬಿಜೆಪಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರೆ, ಕಾಂಗ್ರೆಸ್‌ ಕೂಡ ಭರ್ಜರಿಯಾಗಿ ತಿರುಗೇಟು ನೀಡಿದೆ.

ಬೆಂಗಳೂರು (ಜ.24): ರಾಜ್ಯ ರಾಜಕೀಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಭ್ರಷ್ಟಾಚಾರದ ಟಾಕ್‌ವಾರ್‌ ಆರಂಭವಾಗಿದೆ. ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಅಂದು ಲೋಕಾಯುಕ್ತ ಸಂಸ್ಥೆಯನ್ನೇ ಮುಚ್ಚಿದ ಪುಣ್ಯಾತ್ಮರು. ತಮ್ಮ ಕರ್ಮಕಾಂಡ ಮುಚ್ಚಿಕೊಳ್ಳಲು ಲೋಕಾಯುಕ್ತ ಮುಚ್ಚಿ ಹಾಕಿದರು. ಅವರ ಮೇಲೆ 59 ಕೇಸ್ ಇತ್ತು, ಅದಕ್ಕೆ ಸಂಸ್ಥೆಯನ್ನೇ ಬಂದ್‌ ಮಾಡಿದರು ಎಂದು ಆರೋಪಿಸಿದ್ದಾರೆ.

ಬೆಂಗಳೂರನ್ನು ಹಾಳು ಮಾಡಿದವರೇ ಕಾಂಗ್ರೆಸ್ ನಾಯಕರು. ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಹತ್ತು ಹದಿನೈದು ಜನ ಸೇರಿಕೊಂಡು ಪ್ರತಿಭಟನೆ ಮಾಡ್ತಿದ್ದಾರೆ. ನಮ್ಮ ವಿರುದ್ಧ ಆರೋಪಕ್ಕೆ ದಾಖಲೆ ಇದ್ರೆ ಕಾಂಗ್ರೆಸ್‌ ಕೊಡಲಿ. ಲೋಕಾಯುಕ್ತಕ್ಕೆ ದಾಖಲೆ ಕೊಡಲಿ, ತನಿಖೆಯೂ ಆಗಲಿ. ತಮ್ಮ ಕೈಗೆ ಮಸಿ ಅಂಟಿದೆ, ಅದನ್ನು ಅವರು ನೋಡಿಕೊಳ್ಳಲಿ. ಕಾಂಗ್ರೆಸ್ ತಟ್ಟೆಯಲ್ಲಿ ಕತ್ತೆ ಬಿದ್ದಿದೆ ಅದನ್ನು ನೋಡಿಕೊಳ್ಳಲಿ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್‌ನಿಂದ ಬೆಂಗ್ಳೂರು ಹಾಳು: ಸಿಎಂ ಬೊಮ್ಮಾಯಿ

ಇನ್ನೊಂದೆಡೆ ಸಿದ್ಧರಾಮಯ್ಯ ಧಮ್ ಇದ್ದರೆ ಸುಪ್ರೀಂ ಜಡ್ಜ್ ನೇತೃತ್ವದಲ್ಲಿ ತನಿಖೆ ಮಾಡ್ಸಿ. ನಮ್ಮದನ್ನೂ ಕೊಡಿ,ನಿಮ್ಮ 40% ಬಗ್ಗೆಯೂ ತನಿಖೆ ಕೊಡಿ. ಅದಕ್ಕೆ ನಿಮ್ಮತ್ರ ಧಮ್ ಇಲ್ಲ ಎಂದು ಕಿಡಿಕಾರಿದ್ದಾರೆ. ಸುಮ್ನೆ ಹೇಳಿದ್ರೆ ಏನು ಪ್ರಯೋಜನ.. ಸಿಬಿಐಗೂ ಕೊಡಿ. ಹಿಂದೆ ನೀವು ವಿರೋಧ ಪಕ್ಷದಲ್ಲಿ ಇದ್ರಲ್ಲಾ.. ಸುಮ್ಮನಿದ್ದೀರಿ. ತನಿಖೆ ಮಾಡಿಸೋಕೆ ಧಮ್ ಇಲ್ಲ ಎಂದು ಹೇಳಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more