Ghulam Nabi Azad: ಕಾಂಗ್ರೆಸ್‌ಗೆ ಮತ್ತೊಬ್ಬ ಹಿರಿಯ ನಾಯಕ ಗುಡ್‌ಬೈ: ಗುಲಾಂಗಾಗಿ ತೆಗೆದಿದೆಯಾ ಕೇಸರಿ ಕದ?

Ghulam Nabi Azad: ಕಾಂಗ್ರೆಸ್‌ಗೆ ಮತ್ತೊಬ್ಬ ಹಿರಿಯ ನಾಯಕ ಗುಡ್‌ಬೈ: ಗುಲಾಂಗಾಗಿ ತೆಗೆದಿದೆಯಾ ಕೇಸರಿ ಕದ?

Published : Aug 27, 2022, 11:53 AM IST

Ghulam Nabi Azad's Congress Exit: ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರು  ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ

ನವದೆಹಲಿ (ಆ. 27): ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರು ಶುಕ್ರವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ 50 ವರ್ಷದಿಂದ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಅವರ ಈ ನಡೆ ಹಸ್ತ ಪಾಳಯದಲ್ಲಿ ತೀವ್ರ ತಲ್ಲಣ ಮೂಡಿಸಿದೆ. ರಾಜೀನಾಮೆ ಕೊಡುವುದರ ಜತೆಗೆ, ತಮ್ಮ 5 ಪುಟಗಳ ರಾಜೀನಾಮೆ ಪತ್ರದಲ್ಲಿ ಕಾಂಗ್ರೆಸ್‌ನಲ್ಲಿನ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಅವರು ತೀವ್ರ ಟೀಕೆ ಮಾಡಿದ್ದಾರೆ. 

‘ಪಕ್ಷ ಈಗ ಸಂಪೂರ್ಣ ವಿನಾಶವಾಗಿದೆ. ನಾಯಕತ್ವವೇ ಪಕ್ಷವನ್ನು ವಂಚಿಸುತ್ತಿದೆ. ಪಕ್ಷದಲ್ಲಿನ ಅಧ್ಯಕ್ಷೀಯ ಚುನಾವಣೆ ಎಂಬುದು ಕೇವಲ ‘ತೋರಿಕೆ’ಯದ್ದಷ್ಟೇ’ ಎಂದು ವಾಗ್ದಾಳಿ ನಡೆಸಿರುವ ಅವರು, ‘2013ರಲ್ಲಿ ಕಾಂಗ್ರೆಸ್‌ಗೆ ಯಾವಾಗ ರಾಹುಲ್‌ ಗಾಂಧಿ ಅಧ್ಯಕ್ಷರಾದರೋ ಆಗಿನಿಂದಲೇ ಪಕ್ಷದ ಅವನತಿ ಆರಂಭವಾಯಿತು. ಪಕ್ಷದ ನಿರ್ಧಾರಗಳನ್ನು ರಾಹುಲ್‌ ಗಾಂಧಿ ಅವರ ಸೆಕ್ಯೂರಿಟಿ ಗಾರ್ಡ್‌ ಅಥವಾ ಪಿಎ ತೆಗೆದುಕೊಳ್ಳುತ್ತಿದ್ದಾರೆ. ಈಗ ಬೇಕಿರುವುದು ‘ಭಾರತ್‌ ಜೋಡೋ ಅಲ್ಲ, ಕಾಂಗ್ರೆಸ್‌ ಜೋಡೋ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ‘ಪಕ್ಷಕ್ಕಾಗಿ ಜೀವನ ಸವೆಸಿದ ತಮ್ಮಂಥವರಿಗೆ ಅವಮಾನ ಮಾಡಲಾಗಿದೆ’ ಎಂದು ಸೋನಿಯಾ ಗಾಂಧಿ ವಿರುದ್ಧವೂ ಕಿಡಿಕಾರಿದ್ದಾರೆ.

ಪುತ್ರ ಸದ್ದಾಂ ಜೊತೆಗೂಡಿ ಜಮ್ಮು ಕಾಶ್ಮೀರದಲ್ಲಿ ಗುಲಾಂ ನಬಿ ಹೊಸ ಪಕ್ಷ ಸ್ಥಾಪನೆ!
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more