Ghulam Nabi Azad: ಕಾಂಗ್ರೆಸ್‌ಗೆ ಮತ್ತೊಬ್ಬ ಹಿರಿಯ ನಾಯಕ ಗುಡ್‌ಬೈ: ಗುಲಾಂಗಾಗಿ ತೆಗೆದಿದೆಯಾ ಕೇಸರಿ ಕದ?

Ghulam Nabi Azad: ಕಾಂಗ್ರೆಸ್‌ಗೆ ಮತ್ತೊಬ್ಬ ಹಿರಿಯ ನಾಯಕ ಗುಡ್‌ಬೈ: ಗುಲಾಂಗಾಗಿ ತೆಗೆದಿದೆಯಾ ಕೇಸರಿ ಕದ?

Published : Aug 27, 2022, 11:53 AM IST

Ghulam Nabi Azad's Congress Exit: ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರು  ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ

ನವದೆಹಲಿ (ಆ. 27): ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರು ಶುಕ್ರವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ 50 ವರ್ಷದಿಂದ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಅವರ ಈ ನಡೆ ಹಸ್ತ ಪಾಳಯದಲ್ಲಿ ತೀವ್ರ ತಲ್ಲಣ ಮೂಡಿಸಿದೆ. ರಾಜೀನಾಮೆ ಕೊಡುವುದರ ಜತೆಗೆ, ತಮ್ಮ 5 ಪುಟಗಳ ರಾಜೀನಾಮೆ ಪತ್ರದಲ್ಲಿ ಕಾಂಗ್ರೆಸ್‌ನಲ್ಲಿನ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಅವರು ತೀವ್ರ ಟೀಕೆ ಮಾಡಿದ್ದಾರೆ. 

‘ಪಕ್ಷ ಈಗ ಸಂಪೂರ್ಣ ವಿನಾಶವಾಗಿದೆ. ನಾಯಕತ್ವವೇ ಪಕ್ಷವನ್ನು ವಂಚಿಸುತ್ತಿದೆ. ಪಕ್ಷದಲ್ಲಿನ ಅಧ್ಯಕ್ಷೀಯ ಚುನಾವಣೆ ಎಂಬುದು ಕೇವಲ ‘ತೋರಿಕೆ’ಯದ್ದಷ್ಟೇ’ ಎಂದು ವಾಗ್ದಾಳಿ ನಡೆಸಿರುವ ಅವರು, ‘2013ರಲ್ಲಿ ಕಾಂಗ್ರೆಸ್‌ಗೆ ಯಾವಾಗ ರಾಹುಲ್‌ ಗಾಂಧಿ ಅಧ್ಯಕ್ಷರಾದರೋ ಆಗಿನಿಂದಲೇ ಪಕ್ಷದ ಅವನತಿ ಆರಂಭವಾಯಿತು. ಪಕ್ಷದ ನಿರ್ಧಾರಗಳನ್ನು ರಾಹುಲ್‌ ಗಾಂಧಿ ಅವರ ಸೆಕ್ಯೂರಿಟಿ ಗಾರ್ಡ್‌ ಅಥವಾ ಪಿಎ ತೆಗೆದುಕೊಳ್ಳುತ್ತಿದ್ದಾರೆ. ಈಗ ಬೇಕಿರುವುದು ‘ಭಾರತ್‌ ಜೋಡೋ ಅಲ್ಲ, ಕಾಂಗ್ರೆಸ್‌ ಜೋಡೋ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ‘ಪಕ್ಷಕ್ಕಾಗಿ ಜೀವನ ಸವೆಸಿದ ತಮ್ಮಂಥವರಿಗೆ ಅವಮಾನ ಮಾಡಲಾಗಿದೆ’ ಎಂದು ಸೋನಿಯಾ ಗಾಂಧಿ ವಿರುದ್ಧವೂ ಕಿಡಿಕಾರಿದ್ದಾರೆ.

ಪುತ್ರ ಸದ್ದಾಂ ಜೊತೆಗೂಡಿ ಜಮ್ಮು ಕಾಶ್ಮೀರದಲ್ಲಿ ಗುಲಾಂ ನಬಿ ಹೊಸ ಪಕ್ಷ ಸ್ಥಾಪನೆ!
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more