Ghulam Nabi Azad: ಕಾಂಗ್ರೆಸ್‌ಗೆ ಮತ್ತೊಬ್ಬ ಹಿರಿಯ ನಾಯಕ ಗುಡ್‌ಬೈ: ಗುಲಾಂಗಾಗಿ ತೆಗೆದಿದೆಯಾ ಕೇಸರಿ ಕದ?

Ghulam Nabi Azad: ಕಾಂಗ್ರೆಸ್‌ಗೆ ಮತ್ತೊಬ್ಬ ಹಿರಿಯ ನಾಯಕ ಗುಡ್‌ಬೈ: ಗುಲಾಂಗಾಗಿ ತೆಗೆದಿದೆಯಾ ಕೇಸರಿ ಕದ?

Published : Aug 27, 2022, 11:53 AM IST

Ghulam Nabi Azad's Congress Exit: ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರು  ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ

ನವದೆಹಲಿ (ಆ. 27): ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರು ಶುಕ್ರವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ 50 ವರ್ಷದಿಂದ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಅವರ ಈ ನಡೆ ಹಸ್ತ ಪಾಳಯದಲ್ಲಿ ತೀವ್ರ ತಲ್ಲಣ ಮೂಡಿಸಿದೆ. ರಾಜೀನಾಮೆ ಕೊಡುವುದರ ಜತೆಗೆ, ತಮ್ಮ 5 ಪುಟಗಳ ರಾಜೀನಾಮೆ ಪತ್ರದಲ್ಲಿ ಕಾಂಗ್ರೆಸ್‌ನಲ್ಲಿನ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಅವರು ತೀವ್ರ ಟೀಕೆ ಮಾಡಿದ್ದಾರೆ. 

‘ಪಕ್ಷ ಈಗ ಸಂಪೂರ್ಣ ವಿನಾಶವಾಗಿದೆ. ನಾಯಕತ್ವವೇ ಪಕ್ಷವನ್ನು ವಂಚಿಸುತ್ತಿದೆ. ಪಕ್ಷದಲ್ಲಿನ ಅಧ್ಯಕ್ಷೀಯ ಚುನಾವಣೆ ಎಂಬುದು ಕೇವಲ ‘ತೋರಿಕೆ’ಯದ್ದಷ್ಟೇ’ ಎಂದು ವಾಗ್ದಾಳಿ ನಡೆಸಿರುವ ಅವರು, ‘2013ರಲ್ಲಿ ಕಾಂಗ್ರೆಸ್‌ಗೆ ಯಾವಾಗ ರಾಹುಲ್‌ ಗಾಂಧಿ ಅಧ್ಯಕ್ಷರಾದರೋ ಆಗಿನಿಂದಲೇ ಪಕ್ಷದ ಅವನತಿ ಆರಂಭವಾಯಿತು. ಪಕ್ಷದ ನಿರ್ಧಾರಗಳನ್ನು ರಾಹುಲ್‌ ಗಾಂಧಿ ಅವರ ಸೆಕ್ಯೂರಿಟಿ ಗಾರ್ಡ್‌ ಅಥವಾ ಪಿಎ ತೆಗೆದುಕೊಳ್ಳುತ್ತಿದ್ದಾರೆ. ಈಗ ಬೇಕಿರುವುದು ‘ಭಾರತ್‌ ಜೋಡೋ ಅಲ್ಲ, ಕಾಂಗ್ರೆಸ್‌ ಜೋಡೋ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ‘ಪಕ್ಷಕ್ಕಾಗಿ ಜೀವನ ಸವೆಸಿದ ತಮ್ಮಂಥವರಿಗೆ ಅವಮಾನ ಮಾಡಲಾಗಿದೆ’ ಎಂದು ಸೋನಿಯಾ ಗಾಂಧಿ ವಿರುದ್ಧವೂ ಕಿಡಿಕಾರಿದ್ದಾರೆ.

ಪುತ್ರ ಸದ್ದಾಂ ಜೊತೆಗೂಡಿ ಜಮ್ಮು ಕಾಶ್ಮೀರದಲ್ಲಿ ಗುಲಾಂ ನಬಿ ಹೊಸ ಪಕ್ಷ ಸ್ಥಾಪನೆ!
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more