Ghulam Nabi Azad: ಕಾಂಗ್ರೆಸ್‌ಗೆ ಮತ್ತೊಬ್ಬ ಹಿರಿಯ ನಾಯಕ ಗುಡ್‌ಬೈ: ಗುಲಾಂಗಾಗಿ ತೆಗೆದಿದೆಯಾ ಕೇಸರಿ ಕದ?

Ghulam Nabi Azad: ಕಾಂಗ್ರೆಸ್‌ಗೆ ಮತ್ತೊಬ್ಬ ಹಿರಿಯ ನಾಯಕ ಗುಡ್‌ಬೈ: ಗುಲಾಂಗಾಗಿ ತೆಗೆದಿದೆಯಾ ಕೇಸರಿ ಕದ?

Published : Aug 27, 2022, 11:53 AM IST

Ghulam Nabi Azad's Congress Exit: ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರು  ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ

ನವದೆಹಲಿ (ಆ. 27): ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರು ಶುಕ್ರವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ 50 ವರ್ಷದಿಂದ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಅವರ ಈ ನಡೆ ಹಸ್ತ ಪಾಳಯದಲ್ಲಿ ತೀವ್ರ ತಲ್ಲಣ ಮೂಡಿಸಿದೆ. ರಾಜೀನಾಮೆ ಕೊಡುವುದರ ಜತೆಗೆ, ತಮ್ಮ 5 ಪುಟಗಳ ರಾಜೀನಾಮೆ ಪತ್ರದಲ್ಲಿ ಕಾಂಗ್ರೆಸ್‌ನಲ್ಲಿನ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಅವರು ತೀವ್ರ ಟೀಕೆ ಮಾಡಿದ್ದಾರೆ. 

‘ಪಕ್ಷ ಈಗ ಸಂಪೂರ್ಣ ವಿನಾಶವಾಗಿದೆ. ನಾಯಕತ್ವವೇ ಪಕ್ಷವನ್ನು ವಂಚಿಸುತ್ತಿದೆ. ಪಕ್ಷದಲ್ಲಿನ ಅಧ್ಯಕ್ಷೀಯ ಚುನಾವಣೆ ಎಂಬುದು ಕೇವಲ ‘ತೋರಿಕೆ’ಯದ್ದಷ್ಟೇ’ ಎಂದು ವಾಗ್ದಾಳಿ ನಡೆಸಿರುವ ಅವರು, ‘2013ರಲ್ಲಿ ಕಾಂಗ್ರೆಸ್‌ಗೆ ಯಾವಾಗ ರಾಹುಲ್‌ ಗಾಂಧಿ ಅಧ್ಯಕ್ಷರಾದರೋ ಆಗಿನಿಂದಲೇ ಪಕ್ಷದ ಅವನತಿ ಆರಂಭವಾಯಿತು. ಪಕ್ಷದ ನಿರ್ಧಾರಗಳನ್ನು ರಾಹುಲ್‌ ಗಾಂಧಿ ಅವರ ಸೆಕ್ಯೂರಿಟಿ ಗಾರ್ಡ್‌ ಅಥವಾ ಪಿಎ ತೆಗೆದುಕೊಳ್ಳುತ್ತಿದ್ದಾರೆ. ಈಗ ಬೇಕಿರುವುದು ‘ಭಾರತ್‌ ಜೋಡೋ ಅಲ್ಲ, ಕಾಂಗ್ರೆಸ್‌ ಜೋಡೋ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ‘ಪಕ್ಷಕ್ಕಾಗಿ ಜೀವನ ಸವೆಸಿದ ತಮ್ಮಂಥವರಿಗೆ ಅವಮಾನ ಮಾಡಲಾಗಿದೆ’ ಎಂದು ಸೋನಿಯಾ ಗಾಂಧಿ ವಿರುದ್ಧವೂ ಕಿಡಿಕಾರಿದ್ದಾರೆ.

ಪುತ್ರ ಸದ್ದಾಂ ಜೊತೆಗೂಡಿ ಜಮ್ಮು ಕಾಶ್ಮೀರದಲ್ಲಿ ಗುಲಾಂ ನಬಿ ಹೊಸ ಪಕ್ಷ ಸ್ಥಾಪನೆ!
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more