MLC Elections: ಪರಿಷತ್ ಟಿಕೆಟ್ ಬೇಡ , ವಿಧಾನ ಸಭೆಗೆ ಟಿಕೆಟ್ ಮೇಲೆ ಕಣ್ಣಿಟ್ಟವರಿಗೆ ಕಾಂಗ್ರೆಸ್ ಶಾಕ್!

MLC Elections: ಪರಿಷತ್ ಟಿಕೆಟ್ ಬೇಡ , ವಿಧಾನ ಸಭೆಗೆ ಟಿಕೆಟ್ ಮೇಲೆ ಕಣ್ಣಿಟ್ಟವರಿಗೆ ಕಾಂಗ್ರೆಸ್ ಶಾಕ್!

Suvarna News   | Asianet News
Published : Nov 23, 2021, 11:31 AM ISTUpdated : Nov 23, 2021, 11:51 AM IST

- ಹಾಲಿ ಪರಿಷತ್ ಸದಸ್ಯರು ಸ್ಪರ್ಧೆಯಿಂದ ಹಿಂದೆ ಸರಿದಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ಗರಂ.. 

- ಪರಿಷತ್ ಟಿಕೆಟ್ ನಿರಾಕರಿಸಿ ಕಣದಿಂದ ಹಿಂದೆ ಸರಿದಿರುವ ಐವರು ಕಾಂಗ್ರೆಸ್ ಪರಿಷತ್ ಸದಸ್ಯರು

- ವಿಧಾನ ಸಭೆ ಸ್ಪರ್ಧೆಗೆ ಟಿಕೆಟ್ ಬೇಡಿಕೆಯಿಟ್ಟು ಪರಿಷತ್ ಟಿಕೆಟ್ ಬೇಡ ಎಂದಿದ್ದರು

- ಯಾರು ಪರಿಷತ್ ಟಿಕೆಟ್ ನಿರಾಕರಿಸಿದ್ದಾರೆ ಅವರಿಗೆ ಎಂ.ಎಲ್.ಎ ಸ್ಥಾನಕ್ಕೆ ಸ್ಪರ್ಧಿಸಲು ಟಿಕೆಟ್ ಕೊಡಲ್ಲ 

ಬೆಂಗಳೂರು (ನ. 23): ಹಾಲಿ ಪರಿಷತ್ ಸದಸ್ಯರು ಸ್ಪರ್ಧೆಯಿಂದ ಹಿಂದೆ ಸರಿದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಹೈಕಮಾಂಡ್  (Congress HighCommand) ಶಾಕ್ ನೀಡಿದೆ. ಎಲ್ಲರೂ ವಿಧಾನ ಸಭೆಗೆ ಸ್ಪರ್ಧಿಸುತ್ತೇವೆ ಟಿಕೆಟ್ ಕೊಡಿ ಅಂದ್ರೆ ಹೇಗೆ..? ಯಾರು ಪರಿಷತ್ ಟಿಕೆಟ್ ನಿರಾಕರಿಸಿದ್ದಾರೋ ಅವರಿಗೆ ಎಂ.ಎಲ್.ಎ ಸ್ಥಾನಕ್ಕೆ ಸ್ಪರ್ಧಿಸಲು ಟಿಕೆಟ್ ಕೊಡಲ್ಲ.  ಈಗಲೇ ಅವರ ಗಮನಕ್ಕೆ ತಂದುಬಿಡಿ ಎಂದು ಸಿದ್ದರಾಮಯ್ಯ, ಡಿಕೆಶಿಗೆ ತಿಳಿಸಿರುವ ಉಸ್ತುವಾರಿ ಸುರ್ಜೇವಾಲಾ ಹೇಳಿದ್ದಾರೆ. 

ಪರಿಷತ್ ಟಿಕೆಟ್ ನಿರಾಕರಿಸಿ ಕಣದಿಂದ  ಐವರು ಕಾಂಗ್ರೆಸ್ ಪರಿಷತ್ ಸದಸ್ಯರು ಹಿಂದೆ ಸರಿದಿದ್ದಾರೆ. ಬೀದರ್ ಪರಿಷತ್ ಟಿಕೆಟ್ ಬದಲು ಬಸವಕಲ್ಯಾಣ ವಿಧಾನ ಸಭಾ ಟಿಕೆಟ್ ಕೇಳಿದ್ದರು ವಿಜಯ್ ಸಿಂಗ್. ಚಿತ್ರದುರ್ಗದಿಂದ ಪರಿಷತ್ ಟಿಕೆಟ್ ಬದಲು ಮೈಸೂರು ವಿಧಾನ ಸಭಾ ಕ್ಷೇತ್ರದ ಟಿಕೆಟ್ ಕೇಳಿದ್ದಾರೆ ರಘು ಆಚಾರ್. ಬೆಂಗಳೂರು ನಗರದಿಂದ ಪರಿಷತ್ ನಿರಾಕರಿಸಿ, ಕೆ.ಆರ್ ಪರಂ ನಿಂದ ಸ್ಪರ್ಧಿಸುವುದಾಗಿ ನಾರಾಯಣ ಸ್ವಾಮಿ  ಹೇಳಿದ್ದಾರೆ. ಈಗ ಇವರಿಗೆ ಪರಿಷತ್ ಟಿಕೆಟ್ ಇಲ್ಲ, ವಿಧಾನಸಭೆ ಟಿಕೆಟ್ ಇಲ್ಲ ಎನ್ನುವಂತಾಗಿದೆ. 

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more