ಸಿದ್ದರಾಮಯ್ಯ ಬಣದ ವಿರುದ್ಧ ‘ಖರ್ಗೆ ಅಸ್ತ್ರ’ ಪ್ರಯೋಗಿಸಿದ ಡಿಕೆಶಿ!

ಸಿದ್ದರಾಮಯ್ಯ ಬಣದ ವಿರುದ್ಧ ‘ಖರ್ಗೆ ಅಸ್ತ್ರ’ ಪ್ರಯೋಗಿಸಿದ ಡಿಕೆಶಿ!

Published : Jan 17, 2025, 11:18 AM IST

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗಬೇಕು ಎಂದವರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಆಕ್ರೋಶವನ್ನ ಹೊರಹಾಕಿದ್ದಾರೆ. ಬಹಿರಂಗವಾಗಿ ಮಾತಾಡಿದರೆ, ಸ್ಥಾನಮಾನ ಅಂಗಡಿಯಲ್ಲಿ ಸಿಗುತ್ತಾ? ಎಂದು ಹೇಳುವ ಮೂಲಕ ಮೊದಲ ಬಾರಿ ಬಹಿರಂಗವಾಗಿ ಸಿದ್ದು ಬಣದ ವಿರುದ್ಧ ತಿರುಗಿಬಿದ್ದ ಡಿಕೆಶಿ 

ಬೆಂಗಳೂರು(ಜ.17):  ಕಾಂಗ್ರೆಸ್​ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ದಂಗಲ್ ಜೋರಾಗಿದೆ. ಹೌದು, ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿಕೆಶಿ ಕೆಳಗಿಳಿಸಲು ಸಿಎಂ ಸಿದ್ದರಾಮಯ್ಯ ಬಣ ರಣತಂತ್ರ ಹೆಣೆದಿದೆ. ಪೂರ್ಣ ಪ್ರಮಾಣದ ಅಧ್ಯಕ್ಷರ ಆಯ್ಕೆ ಮಾಡಿ ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗಬೇಕು ಎಂದವರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಆಕ್ರೋಶವನ್ನ ಹೊರಹಾಕಿದ್ದಾರೆ. ಬಹಿರಂಗವಾಗಿ ಮಾತಾಡಿದರೆ, ಸ್ಥಾನಮಾನ ಅಂಗಡಿಯಲ್ಲಿ ಸಿಗುತ್ತಾ? ಎಂದು ಹೇಳುವ ಮೂಲಕ ಮೊದಲ ಬಾರಿ ಬಹಿರಂಗವಾಗಿ ಸಿದ್ದು ಬಣದ ವಿರುದ್ಧ ಡಿಕೆಶಿ ತಿರುಗಿಬಿದ್ದಿದ್ದಾರೆ. 

ಬೀದರ್‌ನಲ್ಲಿ ಎಟಿಎಂ ಸಿಬ್ಬಂದಿ ಮೇಲೆ ದಾಳಿ, ಲಕ್ಷ ಲಕ್ಷ ರೂಪಾಯಿ ದರೋಡೆ: ಇಬ್ಬರು ಸಾವು

ಸಿದ್ದರಾಮಯ್ಯ ಬಣದ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್‌ ‘ಖರ್ಗೆ ಅಸ್ತ್ರ’ ಪ್ರಯೋಗಿಸಿದ್ದಾರೆ. ಇವರೆಲ್ಲ ಪ್ರಶ್ನಿಸುತ್ತಿರುವುದು ನನ್ನನ್ನಲ್ಲ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರನ್ನ, ಸ್ಥಾನಮಾನ ಮಾಧ್ಯಮದಲ್ಲೋ.. ಅಂಗಡಿಯಲ್ಲೋ, ಸ್ಥಾನಮಾನ ಸಿಗಲ್ಲ. ಅದು ನಮ್ಮ ಕೆಲಸದ ಮೇಲೆ ನಮ್ಮ ಪಕ್ಷವೂ ಸ್ಥಾನಮಾನ ಕೊಡುತ್ತದೆ. ಈ ಅಹಿಂದ ನಾಯಕರೆಲ್ಲಾ ಪ್ರಶ್ನೆ ಮಾಡ್ತಿರುವುದು ಖರ್ಗೆ ಅವರನ್ನೇ, ಏನಿದ್ದರೂ ರಾಹುಲ್, ಮಲ್ಲಿಕಾರ್ಜುನ್​ ಖರ್ಗೆ ಜತೆ ಹೋಗಿ ಮಾತಾಡ್ಲಿ. ಸ್ಥಾನಮಾನ ಬೇಕು ಅಂತ ಮಾಧ್ಯಮದಲ್ಲಿ ಕೇಳ್ತಿರೋದು ಮೊದಲ ಸಲ. ಮಾಧ್ಯಮಗಳಲ್ಲಿ ಪಾರ್ಟಿ ವಿಚಾರ ಚರ್ಚೆ ಬೇಡ ಎಂಬ ಸೂಚನೆ ಇದೆ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್​ ತಿರುಗೇಟು ನೀಡಿದ್ದಾರೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more