ಸಿದ್ದರಾಮಯ್ಯ ಬಣದ ವಿರುದ್ಧ ‘ಖರ್ಗೆ ಅಸ್ತ್ರ’ ಪ್ರಯೋಗಿಸಿದ ಡಿಕೆಶಿ!

ಸಿದ್ದರಾಮಯ್ಯ ಬಣದ ವಿರುದ್ಧ ‘ಖರ್ಗೆ ಅಸ್ತ್ರ’ ಪ್ರಯೋಗಿಸಿದ ಡಿಕೆಶಿ!

Published : Jan 17, 2025, 11:18 AM IST

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗಬೇಕು ಎಂದವರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಆಕ್ರೋಶವನ್ನ ಹೊರಹಾಕಿದ್ದಾರೆ. ಬಹಿರಂಗವಾಗಿ ಮಾತಾಡಿದರೆ, ಸ್ಥಾನಮಾನ ಅಂಗಡಿಯಲ್ಲಿ ಸಿಗುತ್ತಾ? ಎಂದು ಹೇಳುವ ಮೂಲಕ ಮೊದಲ ಬಾರಿ ಬಹಿರಂಗವಾಗಿ ಸಿದ್ದು ಬಣದ ವಿರುದ್ಧ ತಿರುಗಿಬಿದ್ದ ಡಿಕೆಶಿ 

ಬೆಂಗಳೂರು(ಜ.17):  ಕಾಂಗ್ರೆಸ್​ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ದಂಗಲ್ ಜೋರಾಗಿದೆ. ಹೌದು, ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿಕೆಶಿ ಕೆಳಗಿಳಿಸಲು ಸಿಎಂ ಸಿದ್ದರಾಮಯ್ಯ ಬಣ ರಣತಂತ್ರ ಹೆಣೆದಿದೆ. ಪೂರ್ಣ ಪ್ರಮಾಣದ ಅಧ್ಯಕ್ಷರ ಆಯ್ಕೆ ಮಾಡಿ ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗಬೇಕು ಎಂದವರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಆಕ್ರೋಶವನ್ನ ಹೊರಹಾಕಿದ್ದಾರೆ. ಬಹಿರಂಗವಾಗಿ ಮಾತಾಡಿದರೆ, ಸ್ಥಾನಮಾನ ಅಂಗಡಿಯಲ್ಲಿ ಸಿಗುತ್ತಾ? ಎಂದು ಹೇಳುವ ಮೂಲಕ ಮೊದಲ ಬಾರಿ ಬಹಿರಂಗವಾಗಿ ಸಿದ್ದು ಬಣದ ವಿರುದ್ಧ ಡಿಕೆಶಿ ತಿರುಗಿಬಿದ್ದಿದ್ದಾರೆ. 

ಬೀದರ್‌ನಲ್ಲಿ ಎಟಿಎಂ ಸಿಬ್ಬಂದಿ ಮೇಲೆ ದಾಳಿ, ಲಕ್ಷ ಲಕ್ಷ ರೂಪಾಯಿ ದರೋಡೆ: ಇಬ್ಬರು ಸಾವು

ಸಿದ್ದರಾಮಯ್ಯ ಬಣದ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್‌ ‘ಖರ್ಗೆ ಅಸ್ತ್ರ’ ಪ್ರಯೋಗಿಸಿದ್ದಾರೆ. ಇವರೆಲ್ಲ ಪ್ರಶ್ನಿಸುತ್ತಿರುವುದು ನನ್ನನ್ನಲ್ಲ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರನ್ನ, ಸ್ಥಾನಮಾನ ಮಾಧ್ಯಮದಲ್ಲೋ.. ಅಂಗಡಿಯಲ್ಲೋ, ಸ್ಥಾನಮಾನ ಸಿಗಲ್ಲ. ಅದು ನಮ್ಮ ಕೆಲಸದ ಮೇಲೆ ನಮ್ಮ ಪಕ್ಷವೂ ಸ್ಥಾನಮಾನ ಕೊಡುತ್ತದೆ. ಈ ಅಹಿಂದ ನಾಯಕರೆಲ್ಲಾ ಪ್ರಶ್ನೆ ಮಾಡ್ತಿರುವುದು ಖರ್ಗೆ ಅವರನ್ನೇ, ಏನಿದ್ದರೂ ರಾಹುಲ್, ಮಲ್ಲಿಕಾರ್ಜುನ್​ ಖರ್ಗೆ ಜತೆ ಹೋಗಿ ಮಾತಾಡ್ಲಿ. ಸ್ಥಾನಮಾನ ಬೇಕು ಅಂತ ಮಾಧ್ಯಮದಲ್ಲಿ ಕೇಳ್ತಿರೋದು ಮೊದಲ ಸಲ. ಮಾಧ್ಯಮಗಳಲ್ಲಿ ಪಾರ್ಟಿ ವಿಚಾರ ಚರ್ಚೆ ಬೇಡ ಎಂಬ ಸೂಚನೆ ಇದೆ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್​ ತಿರುಗೇಟು ನೀಡಿದ್ದಾರೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more