ಸಿದ್ದರಾಮಯ್ಯ ಬಣದ ವಿರುದ್ಧ ‘ಖರ್ಗೆ ಅಸ್ತ್ರ’ ಪ್ರಯೋಗಿಸಿದ ಡಿಕೆಶಿ!

ಸಿದ್ದರಾಮಯ್ಯ ಬಣದ ವಿರುದ್ಧ ‘ಖರ್ಗೆ ಅಸ್ತ್ರ’ ಪ್ರಯೋಗಿಸಿದ ಡಿಕೆಶಿ!

Published : Jan 17, 2025, 11:18 AM IST

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗಬೇಕು ಎಂದವರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಆಕ್ರೋಶವನ್ನ ಹೊರಹಾಕಿದ್ದಾರೆ. ಬಹಿರಂಗವಾಗಿ ಮಾತಾಡಿದರೆ, ಸ್ಥಾನಮಾನ ಅಂಗಡಿಯಲ್ಲಿ ಸಿಗುತ್ತಾ? ಎಂದು ಹೇಳುವ ಮೂಲಕ ಮೊದಲ ಬಾರಿ ಬಹಿರಂಗವಾಗಿ ಸಿದ್ದು ಬಣದ ವಿರುದ್ಧ ತಿರುಗಿಬಿದ್ದ ಡಿಕೆಶಿ 

ಬೆಂಗಳೂರು(ಜ.17):  ಕಾಂಗ್ರೆಸ್​ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ದಂಗಲ್ ಜೋರಾಗಿದೆ. ಹೌದು, ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿಕೆಶಿ ಕೆಳಗಿಳಿಸಲು ಸಿಎಂ ಸಿದ್ದರಾಮಯ್ಯ ಬಣ ರಣತಂತ್ರ ಹೆಣೆದಿದೆ. ಪೂರ್ಣ ಪ್ರಮಾಣದ ಅಧ್ಯಕ್ಷರ ಆಯ್ಕೆ ಮಾಡಿ ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗಬೇಕು ಎಂದವರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಆಕ್ರೋಶವನ್ನ ಹೊರಹಾಕಿದ್ದಾರೆ. ಬಹಿರಂಗವಾಗಿ ಮಾತಾಡಿದರೆ, ಸ್ಥಾನಮಾನ ಅಂಗಡಿಯಲ್ಲಿ ಸಿಗುತ್ತಾ? ಎಂದು ಹೇಳುವ ಮೂಲಕ ಮೊದಲ ಬಾರಿ ಬಹಿರಂಗವಾಗಿ ಸಿದ್ದು ಬಣದ ವಿರುದ್ಧ ಡಿಕೆಶಿ ತಿರುಗಿಬಿದ್ದಿದ್ದಾರೆ. 

ಬೀದರ್‌ನಲ್ಲಿ ಎಟಿಎಂ ಸಿಬ್ಬಂದಿ ಮೇಲೆ ದಾಳಿ, ಲಕ್ಷ ಲಕ್ಷ ರೂಪಾಯಿ ದರೋಡೆ: ಇಬ್ಬರು ಸಾವು

ಸಿದ್ದರಾಮಯ್ಯ ಬಣದ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್‌ ‘ಖರ್ಗೆ ಅಸ್ತ್ರ’ ಪ್ರಯೋಗಿಸಿದ್ದಾರೆ. ಇವರೆಲ್ಲ ಪ್ರಶ್ನಿಸುತ್ತಿರುವುದು ನನ್ನನ್ನಲ್ಲ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರನ್ನ, ಸ್ಥಾನಮಾನ ಮಾಧ್ಯಮದಲ್ಲೋ.. ಅಂಗಡಿಯಲ್ಲೋ, ಸ್ಥಾನಮಾನ ಸಿಗಲ್ಲ. ಅದು ನಮ್ಮ ಕೆಲಸದ ಮೇಲೆ ನಮ್ಮ ಪಕ್ಷವೂ ಸ್ಥಾನಮಾನ ಕೊಡುತ್ತದೆ. ಈ ಅಹಿಂದ ನಾಯಕರೆಲ್ಲಾ ಪ್ರಶ್ನೆ ಮಾಡ್ತಿರುವುದು ಖರ್ಗೆ ಅವರನ್ನೇ, ಏನಿದ್ದರೂ ರಾಹುಲ್, ಮಲ್ಲಿಕಾರ್ಜುನ್​ ಖರ್ಗೆ ಜತೆ ಹೋಗಿ ಮಾತಾಡ್ಲಿ. ಸ್ಥಾನಮಾನ ಬೇಕು ಅಂತ ಮಾಧ್ಯಮದಲ್ಲಿ ಕೇಳ್ತಿರೋದು ಮೊದಲ ಸಲ. ಮಾಧ್ಯಮಗಳಲ್ಲಿ ಪಾರ್ಟಿ ವಿಚಾರ ಚರ್ಚೆ ಬೇಡ ಎಂಬ ಸೂಚನೆ ಇದೆ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್​ ತಿರುಗೇಟು ನೀಡಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more