ಸಿಎಂ ವಿರುದ್ಧವೇ ಡಿಸಿಎಂ ರಣಕಹಳೆ..?! ವಿಪಕ್ಷಗಳು ಹೇಳಿದ್ದ ಹೈಕಮಾಂಡ್ VS ಯೋಗಿ ರಹಸ್ಯ ಇದೇನಾ?

ಸಿಎಂ ವಿರುದ್ಧವೇ ಡಿಸಿಎಂ ರಣಕಹಳೆ..?! ವಿಪಕ್ಷಗಳು ಹೇಳಿದ್ದ ಹೈಕಮಾಂಡ್ VS ಯೋಗಿ ರಹಸ್ಯ ಇದೇನಾ?

Published : Jul 20, 2024, 05:07 PM IST

ಯು.ಪಿ ಕೇಸರಿ ಭದ್ರಕೋಟೆಯಲ್ಲೇ ಬಿರುಕು ಉಂಟಾಗಿದ್ದೇಕೆ
ಮೋದಿ ಕರ್ಮಭೂಮಿಯಲ್ಲಿ ಶುರುವಾಗಿದೆ ಅಂತರ್ಯುದ್ಧ!
ಒಂದು ಸೋಲಿನಿಂದು ಉಂಟಾಯ್ತು ರಾಜಕೀಯ ಸುನಾಮಿ!
ರಣಕೌತುಕ ಮೂಡಿಸಿದ್ದೇಕೆ ಯೋಗಿ VS ಅದರ್ಸ್ ಕದನ..?

24ರ ಲೋಕಸಭಾ ಸಂಗ್ರಾಮ  ಮುಗಿದಿದ್ದೂ ಆಯ್ತು. ಮತ್ತೆ ನರೇಂದ್ರ ಮೋದಿ (Narendra Modi)ಪ್ರಧಾನಿಯಾಗಿದ್ದೂ ಆಯ್ತು. ಎನ್‌ಡಿಎ(NDA) ಮಿತ್ರ ಕೂಟ ಅಧಿಕಾರ ಹಿಡಿದಿದ್ದೂ ಆಯ್ತು. ಆದ್ರೆ, ಉತ್ತರ ಪ್ರದೇಶದಲ್ಲಿ(Uttar pradesh) ಯಾಕ್ ಹಿಂಗ್ ಆಯ್ತು? ಯಾರಿಂದ ಆಯ್ತು ಅನ್ನೋ ಪ್ರಶ್ನೆಗೆ ಮಾತ್ರ ನಿಖರ ಉತ್ತರ ಸಿಕ್ಕಿಲ್ಲ. ಆದ್ರೆ ಆ ಪ್ರಶ್ನೆಗೆ ಉತ್ತರ ಹುಡುಕೋ ಪ್ರಯತ್ನವಾಗ್ತಿದ್ದ ಹಾಗೇ, ಉತ್ತರ ಪ್ರದೇಶದ ಕೇಸರಿ ಭದ್ರಕೋಟೆಯಲ್ಲೇ(BJP) ಬಿರುಕು ಉಂಟಾಗಿದೆ. ಕೋಟೆಯೊಳಗೇ ಒಂದು ಅಂತರ್ಯುದ್ಧ ನಡೀತಿರೋ ಹಾಗೆ ಕಾಣ್ತಾ ಇದೆ. ರಾಷ್ಟ್ರ ರಾಜಕಾರಣದಲ್ಲೀಗ ಹೊಸ ಚರ್ಚೆ ಉದ್ಭವಿಸಿದೆ.. ದೇಶದ ಮೂಲೆ ಮೂಲೆಯಲ್ಲೂ ಹೊಸ ಅಲೆ ಸೃಷ್ಟಿಸಿದ್ದ ಯೋಗಿ ಆದಿತ್ಯನಾಥ್ ( Yogi Adityanath) ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮುಂದುವರೀತಾರೋ ಇಲ್ವೋ ಅನ್ನೋ ಆತಂಕ ಹುಟ್ಟಿಕೊಂಡಿದೆ. ಅದಕ್ಕೆ ಕಾರಣವಾಗಿದ್ದು, ಇದೊಂದು ಸಂಗತಿ. ಉತ್ತರ ಪ್ರದೇಶದಲ್ಲಿ ರಾಜಕೀಯ ಪಲ್ಲಟದ ಭವಿಷ್ಯ ಹೇಳ್ತಾ ಇರೋದು.. ಉತ್ತರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಚೌದರಿ, ಹಾಗೂ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಇತ್ತೀಚಿಗೆ ತಾನೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡ ಅವರನ್ನ ಭೇಟಿಯಾದ್ರು.. ಭೇಟಿಯಾಗಿ ಮಾತುಕತೆ ನಡೆಸಿದ್ರು. ಈ ಸಿಂಪಲ್ ಭೇಟಿ ಯೋಗಿ ಆದಿತ್ಯನಾಥರ ಸರ್ಕಾರಕ್ಕೇ ಅಗ್ನಿಪರೀಕ್ಷೆ ತಂದೊಡ್ಡಿದೆ ಅನ್ನೋ ಮಾತಿದೆ.. ಅದಕ್ಕೆ ಕಾರಣ ಬರೀ ಮಾತುಕತೆ ಮಾತ್ರವೇ ಅಲ್ಲ, ಬದಲಾಗಿ, ಈ ಇಬ್ಬರು ರಾಜ್ಯ ನಾಯಕರು, ಹೈಕಮಾಂಡ್ ಮುಂದೆ ಇಟ್ಟಿರೋ ಆ 15 ಪುಟಗಳ ವರದಿ..  ಉತ್ತರ ಪ್ರದೇಶದಲ್ಲಷ್ಟೇ ಅಲ್ಲ, ರಾಷ್ಟ್ರ ರಾಜಕಾರಣದಲ್ಲೇ ದೊಡ್ಡದೊಂದು ಬಿರುಗಾಳಿ ಎಬ್ಬಿಸುವ ಸುಳಿವು ನೀಡ್ತಾ ಇವೆ.

ಇದನ್ನೂ ವೀಕ್ಷಿಸಿ:  ಅಕ್ರಮಗಳ ಸರದಾರನ ವಿಚಾರದಲ್ಲಿ ಸಿದ್ದು ದಾರಿ ತಪ್ಪಿದ್ದು ಹೇಗೆ ? 'ಟಗರು'ರಾಮಯ್ಯಗೆ ಇಂದು 'ನಾಗ'ಕಂಟಕ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more