ಸಿಎಂ ವಿರುದ್ಧವೇ ಡಿಸಿಎಂ ರಣಕಹಳೆ..?! ವಿಪಕ್ಷಗಳು ಹೇಳಿದ್ದ ಹೈಕಮಾಂಡ್ VS ಯೋಗಿ ರಹಸ್ಯ ಇದೇನಾ?

ಸಿಎಂ ವಿರುದ್ಧವೇ ಡಿಸಿಎಂ ರಣಕಹಳೆ..?! ವಿಪಕ್ಷಗಳು ಹೇಳಿದ್ದ ಹೈಕಮಾಂಡ್ VS ಯೋಗಿ ರಹಸ್ಯ ಇದೇನಾ?

Published : Jul 20, 2024, 05:07 PM IST

ಯು.ಪಿ ಕೇಸರಿ ಭದ್ರಕೋಟೆಯಲ್ಲೇ ಬಿರುಕು ಉಂಟಾಗಿದ್ದೇಕೆ
ಮೋದಿ ಕರ್ಮಭೂಮಿಯಲ್ಲಿ ಶುರುವಾಗಿದೆ ಅಂತರ್ಯುದ್ಧ!
ಒಂದು ಸೋಲಿನಿಂದು ಉಂಟಾಯ್ತು ರಾಜಕೀಯ ಸುನಾಮಿ!
ರಣಕೌತುಕ ಮೂಡಿಸಿದ್ದೇಕೆ ಯೋಗಿ VS ಅದರ್ಸ್ ಕದನ..?

24ರ ಲೋಕಸಭಾ ಸಂಗ್ರಾಮ  ಮುಗಿದಿದ್ದೂ ಆಯ್ತು. ಮತ್ತೆ ನರೇಂದ್ರ ಮೋದಿ (Narendra Modi)ಪ್ರಧಾನಿಯಾಗಿದ್ದೂ ಆಯ್ತು. ಎನ್‌ಡಿಎ(NDA) ಮಿತ್ರ ಕೂಟ ಅಧಿಕಾರ ಹಿಡಿದಿದ್ದೂ ಆಯ್ತು. ಆದ್ರೆ, ಉತ್ತರ ಪ್ರದೇಶದಲ್ಲಿ(Uttar pradesh) ಯಾಕ್ ಹಿಂಗ್ ಆಯ್ತು? ಯಾರಿಂದ ಆಯ್ತು ಅನ್ನೋ ಪ್ರಶ್ನೆಗೆ ಮಾತ್ರ ನಿಖರ ಉತ್ತರ ಸಿಕ್ಕಿಲ್ಲ. ಆದ್ರೆ ಆ ಪ್ರಶ್ನೆಗೆ ಉತ್ತರ ಹುಡುಕೋ ಪ್ರಯತ್ನವಾಗ್ತಿದ್ದ ಹಾಗೇ, ಉತ್ತರ ಪ್ರದೇಶದ ಕೇಸರಿ ಭದ್ರಕೋಟೆಯಲ್ಲೇ(BJP) ಬಿರುಕು ಉಂಟಾಗಿದೆ. ಕೋಟೆಯೊಳಗೇ ಒಂದು ಅಂತರ್ಯುದ್ಧ ನಡೀತಿರೋ ಹಾಗೆ ಕಾಣ್ತಾ ಇದೆ. ರಾಷ್ಟ್ರ ರಾಜಕಾರಣದಲ್ಲೀಗ ಹೊಸ ಚರ್ಚೆ ಉದ್ಭವಿಸಿದೆ.. ದೇಶದ ಮೂಲೆ ಮೂಲೆಯಲ್ಲೂ ಹೊಸ ಅಲೆ ಸೃಷ್ಟಿಸಿದ್ದ ಯೋಗಿ ಆದಿತ್ಯನಾಥ್ ( Yogi Adityanath) ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮುಂದುವರೀತಾರೋ ಇಲ್ವೋ ಅನ್ನೋ ಆತಂಕ ಹುಟ್ಟಿಕೊಂಡಿದೆ. ಅದಕ್ಕೆ ಕಾರಣವಾಗಿದ್ದು, ಇದೊಂದು ಸಂಗತಿ. ಉತ್ತರ ಪ್ರದೇಶದಲ್ಲಿ ರಾಜಕೀಯ ಪಲ್ಲಟದ ಭವಿಷ್ಯ ಹೇಳ್ತಾ ಇರೋದು.. ಉತ್ತರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಚೌದರಿ, ಹಾಗೂ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಇತ್ತೀಚಿಗೆ ತಾನೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡ ಅವರನ್ನ ಭೇಟಿಯಾದ್ರು.. ಭೇಟಿಯಾಗಿ ಮಾತುಕತೆ ನಡೆಸಿದ್ರು. ಈ ಸಿಂಪಲ್ ಭೇಟಿ ಯೋಗಿ ಆದಿತ್ಯನಾಥರ ಸರ್ಕಾರಕ್ಕೇ ಅಗ್ನಿಪರೀಕ್ಷೆ ತಂದೊಡ್ಡಿದೆ ಅನ್ನೋ ಮಾತಿದೆ.. ಅದಕ್ಕೆ ಕಾರಣ ಬರೀ ಮಾತುಕತೆ ಮಾತ್ರವೇ ಅಲ್ಲ, ಬದಲಾಗಿ, ಈ ಇಬ್ಬರು ರಾಜ್ಯ ನಾಯಕರು, ಹೈಕಮಾಂಡ್ ಮುಂದೆ ಇಟ್ಟಿರೋ ಆ 15 ಪುಟಗಳ ವರದಿ..  ಉತ್ತರ ಪ್ರದೇಶದಲ್ಲಷ್ಟೇ ಅಲ್ಲ, ರಾಷ್ಟ್ರ ರಾಜಕಾರಣದಲ್ಲೇ ದೊಡ್ಡದೊಂದು ಬಿರುಗಾಳಿ ಎಬ್ಬಿಸುವ ಸುಳಿವು ನೀಡ್ತಾ ಇವೆ.

ಇದನ್ನೂ ವೀಕ್ಷಿಸಿ:  ಅಕ್ರಮಗಳ ಸರದಾರನ ವಿಚಾರದಲ್ಲಿ ಸಿದ್ದು ದಾರಿ ತಪ್ಪಿದ್ದು ಹೇಗೆ ? 'ಟಗರು'ರಾಮಯ್ಯಗೆ ಇಂದು 'ನಾಗ'ಕಂಟಕ..!

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more