ದಳಪತಿಗಳ ಮೈತ್ರಿ ಮಾತು: ಬಿಜೆಪಿ ಬಳಿ ಯಾವೆಲ್ಲ ಬೇಡಿಕೆ ಇಡಲಿದೆ ಜೆಡಿಎಸ್‌..?

ದಳಪತಿಗಳ ಮೈತ್ರಿ ಮಾತು: ಬಿಜೆಪಿ ಬಳಿ ಯಾವೆಲ್ಲ ಬೇಡಿಕೆ ಇಡಲಿದೆ ಜೆಡಿಎಸ್‌..?

Published : Sep 22, 2023, 11:36 AM IST

ದೇವೇಗೌಡರು, ಕುಮಾರಸ್ವಾಮಿ ಮಾತಿಗೆ ಸರ್ವಾನುಮತದ ಸಮ್ಮತಿ
ಅವರಿಬ್ಬರು ಏನು ಹೇಳ್ತಾರೋ ಅದನ್ನ ಒಪ್ಪಿಕೊಳ್ತೀವಿ ಎಂದ ರೇವಣ್ಣ
ಹಾಸನ, ಮಂಡ್ಯ, ತುಮಕೂರು ಪಡೆಯಲು ಜೆಡಿಎಸ್ ಸಿದ್ಧತೆ

ಜೆಡಿಎಸ್-ಬಿಜೆಪಿ ಮೈತ್ರಿಯ ಅಂತಿಮ ಹಂತದ ಕಸರತ್ತು ನಡೆಯುತ್ತಿದೆ. ಗುರುವಾರ ತಡರಾತ್ರಿವರೆಗೂ ದಳಪತಿಗಳ ಹೈ ವೋಲ್ಟೇಜ್ ಮೀಟಿಂಗ್ ನಡೆದಿದೆ. ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ, ಕುಮಾರಸ್ವಾಮಿ ನೇತೃತ್ವದಲ್ಲಿ ಮ್ಯಾರಥಾನ್ ಮೀಟಿಂಗ್ ನಡೆಸಲಾಗಿದೆ. ಬಿಜೆಪಿ(BJP) ಭೇಟಿಗೂ ಮುನ್ನ ಜೆಡಿಎಸ್(JDS) ನಾಯಕರು ಸಭೆ ನಡೆಸಿದ್ದು, ಮೈತ್ರಿ ಸಂಬಂಧ ದೇವೇಗೌಡರ(Devegowda) ದೆಹಲಿ ನಿವಾಸದಲ್ಲಿ ಮಾತುಕತೆ ನಡೆಸಲಾಗಿದೆ. ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಪ್ರಜ್ವಲ್, ನಿಖಿಲ್, ಸಾರಾ ಮಹೇಶ್ ಈ ಸಭೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ ಬಳಿ ಯಾವೆಲ್ಲ ಬೇಡಿಕೆ ಇಡಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ ಎನ್ನಲಾಗ್ತಿದೆ. ಯಾವೆಲ್ಲಾ ಕ್ಷೇತ್ರಗಳನ್ನು ಪಡೆಯಬೇಕು ಎಂದು ಮಾತುಕತೆ ನಡೆಸಿದ್ದು, ದೇವೇಗೌಡರು, ಕುಮಾರಸ್ವಾಮಿ ಮಾತಿಗೆ ಸರ್ವಾನುಮತದ ಸಮ್ಮತಿ ಸಿಕ್ಕಿದೆ ಎನ್ನಲಾಗ್ತಿದೆ. ಅವರಿಬ್ಬರು ಏನು ಹೇಳ್ತಾರೋ ಅದನ್ನ ಒಪ್ಪಿಕೊಳ್ತೀವಿ ಎಂದು ರೇವಣ್ಣ ಹೇಳಿದ್ದಾರಂತೆ. ಇಂದು ಜೆಡಿಎಸ್ ನಾಯಕರಿಂದ ಅಮಿತ್ ಶಾ(Amit Shah) ಭೇಟಿ ಮಾಡುವ ಸಾಧ್ಯತೆ ಇದೆ. ನಿನ್ನೆ ನಡೆಯುಬೇಕಿದ್ದ ಸಭೆ, ಮೀಸಲಾತಿ ಮಂಡನೆ ಹಿನ್ನೆಲೆ ಮುಂದೂಡಿಕೆಯಾಗಿದೆ. ಅಷ್ಟೇ ಅಲ್ಲದೇ ದೇವೇಗೌಡರನ್ನು ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿಯಾಗಿದ್ದಾರೆ. ಅಮಿತ್ ಶಾ ಭೇಟಿಗೂ ಮುನ್ನ ಸ್ಥಾನಗಳ ಸಂಖ್ಯೆ ಖಚಿತ ಪಡಿಸಿ ಎಂದು ಸಾವಂತ್ ಹೇಳಿದ್ದಾರಂತೆ. ಹಾಸನ, ಮಂಡ್ಯ, ತುಮಕೂರು ಜೆಡಿಎಸ್‌ಗೆ ಬಿಟ್ಟುಕೊಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಡಿಎಂಕೆ ಮುಖಂಡ ಗುರುಸ್ವಾಮಿ ಮೂರ್ತಿ ಮೇಲೆ ಹಲ್ಲೆ: ಅಟ್ಯಾಕ್‌ನ ಭೀಕರ ದೃಶ್ಯ ಇಲ್ಲಿದೆ..

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more